ರಾಜ್ಯ

ಆರ್‌ಎಸ್‌ಎಸ್‌ ಪಥಚಂಚಲನ ; ಹೈಕೋರ್ಟ್ ಷರತ್ತುಬದ್ಧ ಅನುಮತಿ ‌

ಬೆಂಗಳೂರು : ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ನ.೨ರಂದು ಆರ್‌ಎಸ್‌ಎಸ್ ಪಥಸಂಚಲನ ನಡೆಸಲು ಹೈಕೋರ್ಟ್ ಷರತ್ತುಬದ್ಧ ಅನುಮತಿ ನೀಡಿದೆ.

ಆರ್‌ಎಸ್‌ಎಸ್‌ಗೆ ಪಥಸಂಚಲನ ನಡೆಸಲು ಅನುಮತಿ ನೀಡದ ಚಿತ್ತಾಪುರ ತಹಸಿಲ್ದಾರ್ ನಾಗಯ್ಯ ಅವರ ಆದೇಶವನ್ನು ಪ್ರಶ್ನಿಸಿ ಆರ್‌ಸ್‌ಎಸ್ ಪರವಾಗಿ ಅಶೋಕ್ ಪಾಟೀಲ್ ಎಂಬವರು ವಿಶೇಷ ಮೇಲ್ಮನವಿ ಸಲ್ಲಿಸಿದ್ದರು. ಎರಡು ಕಡೆಯ ವಾದ-ಪ್ರತಿವಾದ ಆಲಿಸಿದ ನಂತರ ನ.೨ಕ್ಕೆ ಪಥ ಸಂಚಲನ ನಡೆಸಲು ಅನುಮತಿ ನೀಡಿದ ಕಲಬುರಗಿ ಸಂಚಾರಿ ಪೀಠ ಹೊಸದಾಗಿ ಅರ್ಜಿ ಸಲ್ಲಿಸಬೇಕು. ಸರ್ಕಾರ ಅದನ್ನು ಪರಿಗಣಿಸಬೇಕೆಂದು ಸೂಚಿಸಿತು. ಅರ್ಜಿದಾರರ ಪರವಾಗಿ ಹಿರಿಯ ವಕೀಲ ಅರುಣ್ ಶ್ಯಾಮ್ ಹಾಗೂ ಸರ್ಕಾರದ ಪರವಾಗಿ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದರು.

ಕಲಬುರಗಿ ಸಂಚಾರಿ ಪೀಠದ ನ್ಯಾಯಾಽಶ ಎ.ಜಿ.ಎಸ್.ಕಮಲ್ ಅವರು ನ.೨ರಂದು ಆರ್‌ಎಸ್‌ಎಸ್ ಪಥ ಸಂಚಲನಕ್ಕೆ ಅನುಮತಿ ನೀಡಿದರಾದರೂ, ಭಾನುವಾರವೇ ಪಥ ಸಂಚಲನ ನಡೆಸಬೇಕೆಂಬ ಆರ್‌ಎಸ್‌ಎಸ್ ಮನವಿಗೆ ಸಮ್ಮತಿಸಲಿಲ್ಲ. ಮುಂದಿನ ಅರ್ಜಿ ವಿಚಾರಣೆಯನ್ನು ಅ.೨೪ಕ್ಕೆ ಮುಂದೂಡಿತು.

ಇದನ್ನು ಓದಿ: ಚಿತ್ತಾಪುರದಲ್ಲಿ ಆರ್ ಎಸ್‍ಎಸ್ ಪಥಸಂಚಲನ ನಡೆಸಲು ಅನುಮತಿ: ಸಚಿವ ಪ್ರಿಯಾಂಕ್‌ ಖರ್ಗೆ ರಿಯಾಕ್ಷನ್‌

ವಾದ-ಪ್ರತಿವಾದ
ಇದಕ್ಕೂ ಮುನ್ನ ಅರ್ಜಿದಾರ ಅಶೋಕ್ ಪಾಟೀಲ್ ಪರ ವಾದ ಮಂಡಿಸಿದ ಅರುಣ್ ಶ್ಯಾಮ್ ಅವರು, ಅ.೧೭ಕ್ಕೆ ಚಿತ್ತಾಪುರದ ಕಾರ್ಯಕಾರಿ ಮ್ಯಾಜಿಸ್ಟ್ರೇಟ್‌ಗೆ ಅನುಮತಿ ಕೋರಲಾಗಿತ್ತು. ಅ.೧೮ರಂದು ಅವರು ತಿರಸ್ಕರಿಸಿದ್ದಾರೆ. ಪಥ ಸಂಚಲನವನ್ನು ರದ್ದುಪಡಿಸುವುದೇ ಇವರ ಉದ್ದೇಶ. ಹೀಗಾಗಿ ಅನುಮತಿ ನಿರಾಕರಿಸಿದ್ದಾರೆ ಎಂದು ವಾದ ಮಂಡಿಸಿದರು.

ರಾಜ್ಯದಲ್ಲಿ ಇದುವರೆಗೂ ೨೫೦ಕ್ಕೂ ಹೆಚ್ಚು ಪಥ ಸಂಚಲನ ನಡೆಸಲಾಗಿದೆ. ಎಲ್ಲಿಯೂ ಶಾಂತಿ ಸುವ್ಯವಸ್ಥೆಗೆ ಧಕ್ಕೆ ಬಂದಿಲ್ಲ. ಎಲ್ಲಾ ಕಡೆಯೂ ಶಾಂತಿಯುತವಾಗಿ ನಡೆಸಿದ್ದೇವೆ. ಇಲ್ಲಿಯೂ ಅದೇ ರೀತಿ ನಡೆಸುತ್ತೇವೆ ಎಂದು ಅರ್ಜಿದಾರರು ಮುಚ್ಚಳಿಕೆ ಬರೆದುಕೊಟ್ಟರು.

ಮತ್ತೊಂದು ಸಂಘಟನೆ ಕೂಡ ಪ್ರತಿಭಟನೆ ಹಮ್ಮಿಕೊಂಡಿದೆ. ಭೀಮ್ ಆರ್ಮಿ, ದಲಿತ್ ಪ್ಯಾಂಥರ್ಸ್ ಕೂಡ ಪ್ರತಿಭಟನೆಗೆ ಅನುಮತಿ ಕೋರಿವೆ. ಕಾನೂನು ಸುವ್ಯವಸ್ಥೆ ಗಮನದಲ್ಲಿರಿಸಿಕೊಂಡು ಎರಡೂ ಸಂಘಟನೆಗಳಿಗೆ ಬೇರೆ ಬೇರೆ ದಿನ ಪಥ ಸಂಚಲನಕ್ಕೆ ಅನುಮತಿ ನೀಡಿ ಎಂದು ಸರ್ಕಾರದ ಪರ ವಕೀಲ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದರು.

ಅದು ಆಗುವುದಿಲ್ಲ. ಬೇರೆ ಸ್ಥಳವನ್ನು ನೀಡಿ. ಎಲ್ಲರನ್ನೂ ಒಳಗೊಳ್ಳಬೇಕು. ಸರ್ಕಾರಕ್ಕೂ ಆದ್ಯತೆ ನೀಡಬೇಕು. ನಿಮಗೂ ಆದ್ಯತೆ ನೀಡಬೇಕು. ರಸ್ತೆ ಮಾರ್ಗದಲ್ಲಿ ಎಷ್ಟು ಜನ ಭಾಗವಹಿಸುತ್ತಾರೆ ಎಂಬುದನ್ನು ಅರ್ಜಿದಾರರು ಸರ್ಕಾರಕ್ಕೆ ತಿಳಿಸಬೇಕು ಎಂದು ಹೈಕೋರ್ಟ್ ಸೂಚಿಸಿತು.

ಪ್ರಕರಣದ ಹಿನ್ನೆಲೆ
ಚಿತ್ತಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ಜೀವ ಬೆದರಿಕೆ ಹಾಕಿದ್ದನ್ನು ಖಂಡಿಸಿ ನಡೆಸಲಾಗಿದ್ದ ಬಂದ್ ಮತ್ತು ಪ್ರತಿಭಟನೆಯ ನಡುವೆ, ಆರ್‌ಎಸ್‌ಎಸ್ ಸಂಘಟನೆಯು ನಡೆಸಲು ಯೋಜಿಸಿದ್ದ ಪಥ ಸಂಚಲನಕ್ಕೆ ತಾಲ್ಲೂಕು ಆಡಳಿತ ಅನುಮತಿ ನಿರಾಕರಿಸಿತ್ತು.

ಆರ್‌ಎಸ್‌ಎಸ್ ಪಥ ಸಂಚಲನದ ವಿರುದ್ಧವಾಗಿ ಭೀಮ್ ಆರ್ಮಿ ಸಂಘಟನೆ ಹಾಗೂ ಭಾರತೀಯ ದಲಿತ ಪ್ಯಾಂಥರ್ ಸಂಘದ ಸದಸ್ಯರು ಅದೇ ಮಾರ್ಗವಾಗಿ ಪಥ ಸಂಚಲನ ಮಾಡಲು ಅನುಮತಿ ಕೋರಿದ್ದರು.

ಭಾನುವಾರ ಎಲ್ಲಾ ಸಂಘಟನೆಗಳು ಒಂದೇ ಮಾರ್ಗದಲ್ಲಿ ಪಥ ಸಂಚಲನ ನಡೆಸಿದರೆ ಗೊಂದಲ ಉಂಟಾಗಿ ಕಾನೂನು ಸುವ್ಯವಸ್ಥೆ ಹಾಳಾಗುವ ಸಾಧ್ಯತೆ ಇದೆ. ಹೀಗಾಗಿ ಯಾವುದೇ ಸಂಘಟನೆಗೆ ಪಥ ಸಂಚಲನ ಮಾಡಲು ಅನುಮತಿ ನೀಡುವುದಿಲ್ಲ ಎಂದು ತಹಸಿಲ್ದಾರ್ ನಾಗಯ್ಯ ತಿಳಿಸಿದ್ದರು.

ಆಂದೋಲನ ಡೆಸ್ಕ್

Recent Posts

ಕಾರ್ಮಿಕರ ಮೇಲೆ ಕಾಡಾನೆ ದಾಳಿ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…

40 mins ago

ಕಾವೇರಿ ವನ್ಯಜೀವಿಧಾಮದಲ್ಲಿ ಎನ್‌ಕೌಂಟರ್: ಮೃತ 3 ಕುಟುಂಬಗಳಿಗೆ ಶಾಸಕ ಎಂ.ಆರ್. ಮಂಜುನಾಥ್ 15 ಲಕ್ಷ ಪರಿಹಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…

48 mins ago

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

2 hours ago

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

5 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

5 hours ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

5 hours ago