ರಾಜ್ಯ

ಆರ್‌ಎಸ್‌ಎಸ್‌ ಪಥಚಂಚಲನ ; ಹೈಕೋರ್ಟ್ ಷರತ್ತುಬದ್ಧ ಅನುಮತಿ ‌

ಬೆಂಗಳೂರು : ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ನ.೨ರಂದು ಆರ್‌ಎಸ್‌ಎಸ್ ಪಥಸಂಚಲನ ನಡೆಸಲು ಹೈಕೋರ್ಟ್ ಷರತ್ತುಬದ್ಧ ಅನುಮತಿ ನೀಡಿದೆ.

ಆರ್‌ಎಸ್‌ಎಸ್‌ಗೆ ಪಥಸಂಚಲನ ನಡೆಸಲು ಅನುಮತಿ ನೀಡದ ಚಿತ್ತಾಪುರ ತಹಸಿಲ್ದಾರ್ ನಾಗಯ್ಯ ಅವರ ಆದೇಶವನ್ನು ಪ್ರಶ್ನಿಸಿ ಆರ್‌ಸ್‌ಎಸ್ ಪರವಾಗಿ ಅಶೋಕ್ ಪಾಟೀಲ್ ಎಂಬವರು ವಿಶೇಷ ಮೇಲ್ಮನವಿ ಸಲ್ಲಿಸಿದ್ದರು. ಎರಡು ಕಡೆಯ ವಾದ-ಪ್ರತಿವಾದ ಆಲಿಸಿದ ನಂತರ ನ.೨ಕ್ಕೆ ಪಥ ಸಂಚಲನ ನಡೆಸಲು ಅನುಮತಿ ನೀಡಿದ ಕಲಬುರಗಿ ಸಂಚಾರಿ ಪೀಠ ಹೊಸದಾಗಿ ಅರ್ಜಿ ಸಲ್ಲಿಸಬೇಕು. ಸರ್ಕಾರ ಅದನ್ನು ಪರಿಗಣಿಸಬೇಕೆಂದು ಸೂಚಿಸಿತು. ಅರ್ಜಿದಾರರ ಪರವಾಗಿ ಹಿರಿಯ ವಕೀಲ ಅರುಣ್ ಶ್ಯಾಮ್ ಹಾಗೂ ಸರ್ಕಾರದ ಪರವಾಗಿ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದರು.

ಕಲಬುರಗಿ ಸಂಚಾರಿ ಪೀಠದ ನ್ಯಾಯಾಽಶ ಎ.ಜಿ.ಎಸ್.ಕಮಲ್ ಅವರು ನ.೨ರಂದು ಆರ್‌ಎಸ್‌ಎಸ್ ಪಥ ಸಂಚಲನಕ್ಕೆ ಅನುಮತಿ ನೀಡಿದರಾದರೂ, ಭಾನುವಾರವೇ ಪಥ ಸಂಚಲನ ನಡೆಸಬೇಕೆಂಬ ಆರ್‌ಎಸ್‌ಎಸ್ ಮನವಿಗೆ ಸಮ್ಮತಿಸಲಿಲ್ಲ. ಮುಂದಿನ ಅರ್ಜಿ ವಿಚಾರಣೆಯನ್ನು ಅ.೨೪ಕ್ಕೆ ಮುಂದೂಡಿತು.

ಇದನ್ನು ಓದಿ: ಚಿತ್ತಾಪುರದಲ್ಲಿ ಆರ್ ಎಸ್‍ಎಸ್ ಪಥಸಂಚಲನ ನಡೆಸಲು ಅನುಮತಿ: ಸಚಿವ ಪ್ರಿಯಾಂಕ್‌ ಖರ್ಗೆ ರಿಯಾಕ್ಷನ್‌

ವಾದ-ಪ್ರತಿವಾದ
ಇದಕ್ಕೂ ಮುನ್ನ ಅರ್ಜಿದಾರ ಅಶೋಕ್ ಪಾಟೀಲ್ ಪರ ವಾದ ಮಂಡಿಸಿದ ಅರುಣ್ ಶ್ಯಾಮ್ ಅವರು, ಅ.೧೭ಕ್ಕೆ ಚಿತ್ತಾಪುರದ ಕಾರ್ಯಕಾರಿ ಮ್ಯಾಜಿಸ್ಟ್ರೇಟ್‌ಗೆ ಅನುಮತಿ ಕೋರಲಾಗಿತ್ತು. ಅ.೧೮ರಂದು ಅವರು ತಿರಸ್ಕರಿಸಿದ್ದಾರೆ. ಪಥ ಸಂಚಲನವನ್ನು ರದ್ದುಪಡಿಸುವುದೇ ಇವರ ಉದ್ದೇಶ. ಹೀಗಾಗಿ ಅನುಮತಿ ನಿರಾಕರಿಸಿದ್ದಾರೆ ಎಂದು ವಾದ ಮಂಡಿಸಿದರು.

ರಾಜ್ಯದಲ್ಲಿ ಇದುವರೆಗೂ ೨೫೦ಕ್ಕೂ ಹೆಚ್ಚು ಪಥ ಸಂಚಲನ ನಡೆಸಲಾಗಿದೆ. ಎಲ್ಲಿಯೂ ಶಾಂತಿ ಸುವ್ಯವಸ್ಥೆಗೆ ಧಕ್ಕೆ ಬಂದಿಲ್ಲ. ಎಲ್ಲಾ ಕಡೆಯೂ ಶಾಂತಿಯುತವಾಗಿ ನಡೆಸಿದ್ದೇವೆ. ಇಲ್ಲಿಯೂ ಅದೇ ರೀತಿ ನಡೆಸುತ್ತೇವೆ ಎಂದು ಅರ್ಜಿದಾರರು ಮುಚ್ಚಳಿಕೆ ಬರೆದುಕೊಟ್ಟರು.

ಮತ್ತೊಂದು ಸಂಘಟನೆ ಕೂಡ ಪ್ರತಿಭಟನೆ ಹಮ್ಮಿಕೊಂಡಿದೆ. ಭೀಮ್ ಆರ್ಮಿ, ದಲಿತ್ ಪ್ಯಾಂಥರ್ಸ್ ಕೂಡ ಪ್ರತಿಭಟನೆಗೆ ಅನುಮತಿ ಕೋರಿವೆ. ಕಾನೂನು ಸುವ್ಯವಸ್ಥೆ ಗಮನದಲ್ಲಿರಿಸಿಕೊಂಡು ಎರಡೂ ಸಂಘಟನೆಗಳಿಗೆ ಬೇರೆ ಬೇರೆ ದಿನ ಪಥ ಸಂಚಲನಕ್ಕೆ ಅನುಮತಿ ನೀಡಿ ಎಂದು ಸರ್ಕಾರದ ಪರ ವಕೀಲ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದರು.

ಅದು ಆಗುವುದಿಲ್ಲ. ಬೇರೆ ಸ್ಥಳವನ್ನು ನೀಡಿ. ಎಲ್ಲರನ್ನೂ ಒಳಗೊಳ್ಳಬೇಕು. ಸರ್ಕಾರಕ್ಕೂ ಆದ್ಯತೆ ನೀಡಬೇಕು. ನಿಮಗೂ ಆದ್ಯತೆ ನೀಡಬೇಕು. ರಸ್ತೆ ಮಾರ್ಗದಲ್ಲಿ ಎಷ್ಟು ಜನ ಭಾಗವಹಿಸುತ್ತಾರೆ ಎಂಬುದನ್ನು ಅರ್ಜಿದಾರರು ಸರ್ಕಾರಕ್ಕೆ ತಿಳಿಸಬೇಕು ಎಂದು ಹೈಕೋರ್ಟ್ ಸೂಚಿಸಿತು.

ಪ್ರಕರಣದ ಹಿನ್ನೆಲೆ
ಚಿತ್ತಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ಜೀವ ಬೆದರಿಕೆ ಹಾಕಿದ್ದನ್ನು ಖಂಡಿಸಿ ನಡೆಸಲಾಗಿದ್ದ ಬಂದ್ ಮತ್ತು ಪ್ರತಿಭಟನೆಯ ನಡುವೆ, ಆರ್‌ಎಸ್‌ಎಸ್ ಸಂಘಟನೆಯು ನಡೆಸಲು ಯೋಜಿಸಿದ್ದ ಪಥ ಸಂಚಲನಕ್ಕೆ ತಾಲ್ಲೂಕು ಆಡಳಿತ ಅನುಮತಿ ನಿರಾಕರಿಸಿತ್ತು.

ಆರ್‌ಎಸ್‌ಎಸ್ ಪಥ ಸಂಚಲನದ ವಿರುದ್ಧವಾಗಿ ಭೀಮ್ ಆರ್ಮಿ ಸಂಘಟನೆ ಹಾಗೂ ಭಾರತೀಯ ದಲಿತ ಪ್ಯಾಂಥರ್ ಸಂಘದ ಸದಸ್ಯರು ಅದೇ ಮಾರ್ಗವಾಗಿ ಪಥ ಸಂಚಲನ ಮಾಡಲು ಅನುಮತಿ ಕೋರಿದ್ದರು.

ಭಾನುವಾರ ಎಲ್ಲಾ ಸಂಘಟನೆಗಳು ಒಂದೇ ಮಾರ್ಗದಲ್ಲಿ ಪಥ ಸಂಚಲನ ನಡೆಸಿದರೆ ಗೊಂದಲ ಉಂಟಾಗಿ ಕಾನೂನು ಸುವ್ಯವಸ್ಥೆ ಹಾಳಾಗುವ ಸಾಧ್ಯತೆ ಇದೆ. ಹೀಗಾಗಿ ಯಾವುದೇ ಸಂಘಟನೆಗೆ ಪಥ ಸಂಚಲನ ಮಾಡಲು ಅನುಮತಿ ನೀಡುವುದಿಲ್ಲ ಎಂದು ತಹಸಿಲ್ದಾರ್ ನಾಗಯ್ಯ ತಿಳಿಸಿದ್ದರು.

ಆಂದೋಲನ ಡೆಸ್ಕ್

Recent Posts

ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಬಂಡೀಪುರ-ನಾಗರಹೊಳೆ ಸಫಾರಿ ಆರಂಭಿಸಿ: ಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ

ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್‌…

3 hours ago

ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 1700ಕ್ಕೆ ಏರಿಕೆ

ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…

4 hours ago

ರಾಜಸ್ಥಾನದಲ್ಲಿ ಪ್ಯಾರಾಮೆಡಿಕಲ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ನಾಲ್ವರು ಅರೆಸ್ಟ್‌

ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್‌ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್‌ ಮೇಲೆ ಪೊಲೀಸರು…

4 hours ago

ಎಸ್‌ಐಆರ್‌ ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್‌

ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌…

4 hours ago

ನಾಡಿನ ಖ್ಯಾತ ಕಲಾವಿದ ಕೆ.ಟಿ.ಶಿವಪ್ರಸಾದ್‌ ನಿಧನ

ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ‌ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…

5 hours ago

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

6 hours ago