ಬೆಂಗಳೂರು: ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ ಮದ್ಯ ಮಾರಾಟ ವಿಚಾರವಾಗಿ ಸದನದಲ್ಲಿ ಸೃಷ್ಠಿಯಾದ ಕೋಲಾಹಲಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಅವರು ತೆರೆ ಎಳೆದಿದ್ದಾರೆ.
ಶಾಸಕ ಮಹಾಂತೇಶ ಕೌಜಲಗಿ, ಗ್ರಾಮಗಳಲಿ ಅಕ್ರಮ ಮದ್ಯ ಮಾರಾಟ ತಡೆಯುವಂತೆ ಕೇಳಿದ ಪ್ರಶ್ನೆಗೆ ವಿಪಕ್ಷ ಸದಸ್ಯರು ಅಕ್ರಮ ಮದ್ಯ ಮಾರಾಟಕ್ಕೆ ಅಬಕಾರಿ ಇಲಾಖೆ ಟಾರ್ಗೆಟ್ ಫಿಕ್ಸ್ ಮಾಡಿರೋದೆ ಕಾರಣ ಎಂದು ಆಪಾದಿಸಿದರು.
ಅಕ್ರಮ ಮದ್ಯ ಮಾರಾಟದಿಂದ ಎಸ್ಸಿ/ಎಸ್ಟಿ ಕಾಲೋನಿಗಳಲ್ಲಿ ಕಡಿಮೆ ವಯಸ್ಸಿನ ಯುವಕರೇ ಸಾವಿಗೀಡಾಗುತ್ತಿದ್ದಾರೆ ಎಂದು ಅರಗ ಜ್ಞಾನೆಂದ್ರ ಹೇಳಿಕೆ ನೀಡಿದರು.
ಈ ಹೇಳಿಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಶಾಸಕ ನಾರಾಯಣ ಸ್ವಾಮಿ, ಯಾಕ್ರೀ ಅರಗ ಅವರೇ ಎಸ್ಸಿ/ಎಸ್ಟಿ ಜನ ಮಾತ್ರಾ ಮಧ್ಯ ಕುಡೀತಾರಾ? ನೀವು ಕುಡಿಯಲ್ವಾ? ಎಂದು ಗರಂ ಆದ್ರು.
ಈ ವೇಳೆ ಡಿಕೆಶಿ ಮಧ್ಯ ಪ್ರವೇಶಿಸಿ, ರಾಜ್ಯಾಪಾಲರ ಭಾಷಣ ಮೇಲೆ ಚರ್ಚೆ ಆಗಲಿ. ಆರಗ ಜ್ಞಾನೇಂದ್ರ ಅವರು ಗೃಹ ಸಚಿವರು ಆಗಿದ್ದವರು. ಅವರ ಕಾಲದಲ್ಲಿ ಎಷ್ಟು ಅಕ್ರಮ ಮದ್ಯ ಮಾರಾಟ ನಿಲ್ಲಿಸಿದ್ದಾರೆ? ಎಂದು ಚರ್ಚೆ ಆಗಲಿ ಎಂದು ಕೋಲಾಹಲಕ್ಕೆ ತೆರೆ ಎಳೆದರು.
ಶಾಲಾ ಮಕ್ಕಳು ಭಾರವಾದ ಪುಸ್ತಕಗಳ ಬ್ಯಾಗ್ ಹೊರಲಾರದೆ ತ್ರಾಸದಿಂದಲೇ ಹೊತ್ತುಕೊಂಡು ನಡೆಯುವ ದೃಶ್ಯ ಈಗ ಎಲ್ಲೆಡೆ ಕಂಡುಬರುತ್ತದೆ. ಬ್ಯಾಗ್ನಲ್ಲಿ ಪಠ್ಯ…
ಸರ್ಕಾರ ಅಧಿಸೂಚನೆ ಹೊರಡಿಸುವುದು ಯಾವಾಗ? ಉದ್ಯೋಗ ನೇಮಕಾತಿ ಯಾವಾಗ? ಇದು ಸಾವಿರಾರು ಉದ್ಯೋಗ ಆಕಾಂಕ್ಷಿಗಳ ಪ್ರಶ್ನೆ. ಇದು ಕಳೆದ ಹಲವು…
ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸರ್ಕಾರಿ ನೌಕರಿ ಪಡೆಯಲು ಇದ್ದ ವಯೋಮಿತಿಯನ್ನು ಐದು ವರ್ಷ ಹೆಚ್ಚಳ ಮಾಡಿ…
ಕಾಂಗೀರ ಬೋಪಣ್ಣ ಕೊಡಗು-ಕೇರಳದ ಜನರು ಒಟ್ಟಾಗಿ ಆಚರಿಸುವ ವಿಭಿನ್ನ ಆಚರಣೆ; ವಿಶಿಷ್ಟ ಹಬ್ಬಕ್ಕೆ ಅಗತ್ಯ ಸಿದ್ಧತೆ ವಿರಾಜಪೇಟೆ: ಕೇರಳ ಹಾಗೂ…
ಮಹೇಂದ್ರ ಹಸಗೂಲಿ ಪಾದಚಾರಿಗಳು ಓಡಾಡದಂತೆ ವಿರೂಪ; ಒತ್ತುವರಿ ತೆರವಿಗೆ ಸಾರ್ವಜನಿಕರ ಆಗ್ರಹ ಗುಂಡ್ಲುಪೇಟೆ: ಪಟ್ಟಣದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ ಫುಟ್ಪಾತ್ಗಳನ್ನು…
‘ವಿದ್ಯಾವಿಕಾಸ’ ಯೋಜನೆಯಡಿ ಅಗತ್ಯವಿದ್ದರೆ ಚಪ್ಪಲಿ ನೀಡಲು ಸಿದ್ಧತೆ ಮೈಸೂರು: ‘ವಿದ್ಯಾವಿಕಾಸ’ ಯೋಜನೆಯಡಿ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ೧ನೇ ತರಗತಿಯಿಂದ ೧೦ನೇ…