ಬೆಂಗಳೂರು: ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ ಮದ್ಯ ಮಾರಾಟ ವಿಚಾರವಾಗಿ ಸದನದಲ್ಲಿ ಸೃಷ್ಠಿಯಾದ ಕೋಲಾಹಲಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಅವರು ತೆರೆ ಎಳೆದಿದ್ದಾರೆ.
ಶಾಸಕ ಮಹಾಂತೇಶ ಕೌಜಲಗಿ, ಗ್ರಾಮಗಳಲಿ ಅಕ್ರಮ ಮದ್ಯ ಮಾರಾಟ ತಡೆಯುವಂತೆ ಕೇಳಿದ ಪ್ರಶ್ನೆಗೆ ವಿಪಕ್ಷ ಸದಸ್ಯರು ಅಕ್ರಮ ಮದ್ಯ ಮಾರಾಟಕ್ಕೆ ಅಬಕಾರಿ ಇಲಾಖೆ ಟಾರ್ಗೆಟ್ ಫಿಕ್ಸ್ ಮಾಡಿರೋದೆ ಕಾರಣ ಎಂದು ಆಪಾದಿಸಿದರು.
ಅಕ್ರಮ ಮದ್ಯ ಮಾರಾಟದಿಂದ ಎಸ್ಸಿ/ಎಸ್ಟಿ ಕಾಲೋನಿಗಳಲ್ಲಿ ಕಡಿಮೆ ವಯಸ್ಸಿನ ಯುವಕರೇ ಸಾವಿಗೀಡಾಗುತ್ತಿದ್ದಾರೆ ಎಂದು ಅರಗ ಜ್ಞಾನೆಂದ್ರ ಹೇಳಿಕೆ ನೀಡಿದರು.
ಈ ಹೇಳಿಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಶಾಸಕ ನಾರಾಯಣ ಸ್ವಾಮಿ, ಯಾಕ್ರೀ ಅರಗ ಅವರೇ ಎಸ್ಸಿ/ಎಸ್ಟಿ ಜನ ಮಾತ್ರಾ ಮಧ್ಯ ಕುಡೀತಾರಾ? ನೀವು ಕುಡಿಯಲ್ವಾ? ಎಂದು ಗರಂ ಆದ್ರು.
ಈ ವೇಳೆ ಡಿಕೆಶಿ ಮಧ್ಯ ಪ್ರವೇಶಿಸಿ, ರಾಜ್ಯಾಪಾಲರ ಭಾಷಣ ಮೇಲೆ ಚರ್ಚೆ ಆಗಲಿ. ಆರಗ ಜ್ಞಾನೇಂದ್ರ ಅವರು ಗೃಹ ಸಚಿವರು ಆಗಿದ್ದವರು. ಅವರ ಕಾಲದಲ್ಲಿ ಎಷ್ಟು ಅಕ್ರಮ ಮದ್ಯ ಮಾರಾಟ ನಿಲ್ಲಿಸಿದ್ದಾರೆ? ಎಂದು ಚರ್ಚೆ ಆಗಲಿ ಎಂದು ಕೋಲಾಹಲಕ್ಕೆ ತೆರೆ ಎಳೆದರು.
ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್ನ ಐವರು ಮತ್ತು ಬಿಜೆಪಿಯ ಎರಡು…
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ನ ಐದನೇ ಅಭ್ಯರ್ಥಿ ವಿನಯ್ ಕಾರ್ತಿಕ್ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ…
ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…
ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎ1 ಆರೋಪಿ ಪವಿತ್ರಾಗೌಡಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.…