ರಾಜ್ಯ

ಗ್ರಾಮೀಣ ಕುಡಿಯುವ ನೀರಿಗೆ ಪ್ರಥಮ ಆದ್ಯತೆ:ಈಶ್ವರ ಖಂಡ್ರೆ

ಬೆಂಗಳೂರು : ಗ್ರಾಮೀಣ ಭಾಗದ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸುವುದು ತಮ್ಮ ಪ್ರಥಮ ಆದ್ಯತೆಯಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ.ಖಂಡ್ರೆ ತಿಳಿಸಿದ್ದಾರೆ.

ಎ.ಐ.ಸಿ.ಸಿ. ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಭೇಟಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ 25 ವರ್ಷಗಳ ದೀರ್ಘಾವಧಿಗೆ ಭೂಮೇಲ್ಮೈ ನೀರು ಬಳಸಿ ಗ್ರಾಮೀಣ ಭಾಗಕ್ಕೆ ಪೂರೈಕೆ ಮಾಡುವುದು ಸರ್ಕಾರದ ಸಂಕಲ್ಪವಾಗಿದ್ದು, ಇದರ ಅನುಷ್ಠಾನಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು.

ಮಹಾತ್ಮಾಗಾಂಧೀ ಅವರು ಭಾರತದ ಆತ್ಮ ಹಳ್ಳಿಗಳಲ್ಲಿದೆ ಎಂದು ಹೇಳಿದ್ದಾರೆ. ಗ್ರಾಮಗಳ ಅಭಿವೃದ್ಧಿಗಾಗಿ ಮತ್ತು ಅಧಿಕಾರ ವಿಕೇಂದ್ರೀಕರಣಕ್ಕಾಗಿ ಮಾಜಿ ಪ್ರಧಾನಿ ರಾಜೀವ್ ಗಾಂಧೀ ಅವರು ಸಾಂವಿಧಾನಿಕ ತಿದ್ದುಪಡಿ ತಂದಿದ್ದರು. ಆ ಮಹತ್ವದ ಚಿಂತನೆಯ ಸಾಕಾರ ತಮ್ಮ ಗುರಿಯಾಗಿದೆ ಎಂದರು.

ಗ್ರಾಮೀಣ ಭಾಗದ ಸ್ವಚ್ಛತೆ ಕಾಪಾಡಲು ಮತ್ತು ಹಳ್ಳಿಗಳಲ್ಲಿ ಗುಣಮಟ್ಟದ ಆಸ್ತಿಗಳ ಸೃಜನೆಗೆ ಆದ್ಯತೆ ನೀಡಿ ಕಾರ್ಯ ನಿರ್ವಹಿಸಲಾಗುವುದು. ನಾಳೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳೊಂದಿಗೆ ಪರಿಚಯಾತ್ಮಕ ಸಭೆ ನಡೆಸುತ್ತಿದ್ದು, ಮುಂದಿನ ಯೋಜನೆ ರೂಪಿಸಲಾಗುವುದು ಎಂದರು.

ಗ್ರಾಮೀಣ ಭಾಗದಲ್ಲಿರುವ ಕೆರೆಗಳು ಮತ್ತು ಜಲ ಮೂಲಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಮತ್ತು ಗ್ರಾಮೀಣ ಮೂಲಸೌಕರ್ಯ ವರ್ಧನೆಗೆ ಕ್ರಮ ವಹಿಸುವುದಾಗಿ ನೂತನ ಸಚಿವ ಈಶ್ವರ ಖಂಡ್ರೆ ತಿಳಿಸಿದರು.

ಈ ಹಿಂದೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾಗಿದ್ದ ಪ್ರಿಯಾಂಕ್ ಖರ್ಗೆ ಅವರು ಉತ್ತಮವಾಗಿ ಕೆಲಸ ಮಾಡಿದ್ದಾರೆ. ಅವರ ಯೋಜನೆಗಳನ್ನು ಕಲ್ಪನೆಗಳನ್ನು ಮುಂದುವರಿಸಿಕೊಂಡು ಹೋಗುವುದಾಗಿ ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

8 mins ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

10 mins ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

11 mins ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

13 mins ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

18 mins ago