ರಾಜ್ಯ

ನಾಳೆ ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನ ಬಳಿ ಎಸ್.ಎಲ್.ಭೈರಪ್ಪ ಅಂತ್ಯಕ್ರಿಯೆ

ಬೆಂಗಳೂರು: ಪದ್ಮಭೂಷಣ ಹಿರಿಯ ಸಾಹಿತಿ ಎಸ್.ಎಲ್‌.ಭೈರಪ್ಪ ನಿಧನರಾಗಿದ್ದು, ನಾಳೆ ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನ ಬಳಿಕ ಅವರ ಅಂತ್ಯಸಂಸ್ಕಾರ ನಡೆಸಲು ನಿರ್ಧರಿಸಲಾಗಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಇಂದು ಮಧ್ಯಾಹ್ನದವರೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಭೈರಪಪ್‌ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಂತರ ಪಾರ್ಥಿವ ಶರೀರವನ್ನು ಮೈಸೂರಿಗೆ ಕರೆತರಲಾಗುತ್ತದೆ.

ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಅವರ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿದೆ.

ಇದನ್ನು ಓದಿ : ನಾಳೆ ಭೈರಪ್ಪ ಪಾರ್ಥೀವ ಶರೀರ ಅಂತಿಮ ದರ್ಶನ : ಶುಕ್ರವಾರ ಅಂತ್ಯಕ್ರಿಯೆ

ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲು ಸರ್ಕಾರ ಆದೇಶ ನೀಡಿದೆ. ಸದ್ಯ ಲಂಡನ್‌ನಿಂದ ಅವರ ಹಿರಿಯ ಪುತ್ರ ರವಿಶಂಕರ್‌ ಆಗಮಿಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ವಯೋಸಹಜ ಖಾಯಿಲೆಗಳಿಂದ ಬಳಲುತ್ತಿದ್ದ ಭೈರಪ್ಪ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ಇವರ ಕಾದಂಬರಿಗಳು ಹಲವಾರು ಮರುಮುದ್ರಣಗಳನ್ನು ಕಂಡು ಕನ್ನಡದ ಜನಪ್ರಿಯ ಬರಹಗಾರರಾಗಿದ್ದರು. ಇವರಿಗೆ ಭಾರತ ಸರ್ಕಾರವು 2023ನೇ ಸಾಲಿನಲ್ಲಿ ಪದ್ಮಭೂಷಣ ನೀಡಿ ಗೌರವಿಸಿದೆ.

ಆಂದೋಲನ ಡೆಸ್ಕ್

Recent Posts

ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ : ಮುಖ್ಯಮಂತ್ರಿ

ಬಾಗಲಕೋಟೆ : ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ…

34 mins ago

ಮಹದೇಶ್ವರ ಬೆಟ್ಟ | ದಾಸೋಹ-ಲಾಡು ಪ್ರಸಾದಕ್ಕೆ ಸಿಲಿಂಡರ್ ಕೊರತೆ ಇಲ್ಲ ; ಅಪಪ್ರಚಾರಕ್ಕೆ ಕಿವಿಗೊಡದಿರಿ

ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ…

2 hours ago

ಮ.ಬೆಟ್ಟ | ಯುಗಾದಿ ಜಾತ್ರೆಗೆ ಪಾದಯಾತ್ರೆಯಲ್ಲಿ ಬರುತ್ತಿರುವ ಭಕ್ತರು

ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಯುಗಾದಿ ಜಾತ್ರಾ ಮಹೋತ್ಸವಕ್ಕೆ…

2 hours ago

ಮೈಸೂರು | ಕೆಂಪೇಗೌಡ ವೃತ್ತ ಕಾಮಗಾರಿ ಪರಿಶೀಲಿಸಿದ ಸಂಸದ ಯದುವೀರ್‌

ಮೈಸೂರು : ನಗರದ ಹೊರವಲಯದ ಕೆಂಪೇಗೌಡ ವೃತ್ತ(ಮಣಿಪಾಲ್ ಜಂಕ್ಷನ್)ದಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರದಿಂದ ನಡೆಯುತ್ತಿರುವ ಕಾಮಗಾರಿಗಳನ್ನು ಸಂಸದ ಯದುವೀರ್…

2 hours ago

ಚಿಕ್ಕಮಗಳೂರು: ಮುತ್ತೋಡಿ ಅರಣ್ಯದಲ್ಲಿ ಭಾರೀ ಕಾಡ್ಗಿಚ್ಚು

ಚಿಕ್ಕಮಗಳೂರು: ತಾಲ್ಲೂಕಿನ ಮುತ್ತೋಡಿ ಅರಣ್ಯ ವಲಯದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಪ್ರಮಾಣದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಪರಿಣಾಮ ಅಪರೂಪದ ಅರಣ್ಯ…

4 hours ago

ಯುಗಾದಿ ಹಾಗೂ ರಂಜಾನ್‌ ಹಬ್ಬಕ್ಕೆ 2000 ಹೆಚ್ಚುವರಿ ಬಸ್‌ ವ್ಯವಸ್ಥೆ: ಕೆಎಸ್‌ಆರ್‌ಟಿಸಿ ಪ್ರಕಟಣೆ

ಬೆಂಗಳೂರು: ಯುಗಾದಿ ಹಾಗೂ ರಂಜಾನ್‌ ಹಬ್ಬದ ಪ್ರಯುಕ್ತ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ 2000 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ…

4 hours ago