ರಾಜ್ಯ

ಟೆನ್ನಿಸ್‌ ಕ್ರೀಡೆ ಮೇಲೆ ಅಪಾರ ಪ್ರೀತಿ ಇಟ್ಟಿದ್ದ ಎಸ್‌ಎಂ ಕೃಷ್ಣ

ಬೆಂಗಳೂರು: ಬೆಂಗಳೂರಿನ ಅಭಿವೃದ್ದಿಗೆ ಶ್ರಮಿಸಿದ, ಕರ್ನಾಟಕ ಕಂಡ ದಿಟ್ಟ ರಾಜಕಾರಣಿ, ಬೆಂಗಳೂರಿಗೆ ಬ್ರ್ಯಾಡ್‌ ಬೆಂಗಳೂರು ಎಂಬ ಹೆಸರು ಬರಲು ಕಾರಣವಾಗಿದ್ದ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಮಂಗಳವಾರ (ಡಿಸೆಂಬರ್‌ 10) ಮುಂಜಾನೆ ತಮ್ಮ ನಿವಾಸದಲ್ಲಿ ಇಹಲೋಕ ತ್ಯಜಿಸಿದ್ದಾರೆ. ಶ್ವಾಸಕೋಸದ ಸಮಸ್ಯೆಯಿಂದ ಬಳಲುತ್ತಿದ್ದ ಅವರು 92ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ.

ತಮ್ಮ ಅಧಿಕಾರಾವಧಿಯಲ್ಲಿ ಅವರು ತೆಗೆದುಕೊಂಡ ದಿಟ್ಟ ನಿಲುವುಗಳು ಹಾಗೂ ಆಡಳಿತಾತ್ಮಕ ನಡೆಯಿಂದ ದೇಶದ ಗಮನ ಸೆಳೆದಿದ್ದರು. ರಾಜಕೀಯದ ಜೊತೆಗೆ ಅವರಿಗೆ ಕ್ರೀಡೆಯ ಮೇಲೆ ತುಂಬಾ ಒಲವಿತ್ತು. ಟೆನ್ನಿಸ್ ಎಂದರೆ ಅವರಿಗೆ ಪಂಚಪ್ರಾಣ. ತಮ್ಮ ರಾಜಕೀಯದ ಬ್ಯುಸಿ ಸಮಯದಲ್ಲೂ ಟೆನ್ನಿಸ್‌ ಆಡುವುದನ್ನು ಅವರು ಮರೆಯುತ್ತಿರಲಿಲ್ಲ. ರಾಕೆಟ್‌ ಹಿಡಿದು, ಟೆನ್ನಿಸ್‌ ಆಡುವುದು ಹಾಗೂ ಪಂದ್ಯ ನೋಡುವುದು ಎಂದರೆ ಎಸ್‌.ಎಂ. ಕೃಷ್ಣ ಅವರಿಗೆ ಅಚ್ಚುಮೆಚ್ಚು.

ಎಸ್‌ಎಂ ಕೃಷ್ಣ ಅವರಿಗೆ ಟೆನ್ನಿಸ್‌ ಮೇಲೆ ಎಷ್ಟು ಪ್ರೀತಿ ಇತ್ತು ಎಂದರೆ ಅವರು ಸಮಯ ಸಿಕ್ಕಾಗಲೆಲ್ಲಾ ಅಂಗಳಕ್ಕೆ ಇಳಿದು ಟೆನ್ನಿಸ್‌  ಆಡಿ ಅಭಿಮಾನಿಗಳನ್ನು ರಂಜಿಸುತ್ತಿದ್ದರು. ಜೊತೆಗೆ ಅವರ ಸಂದರ್ಶನಗಳನ್ನು ನೋಡಿದರೆ ಸಾಕು ಟೆನ್ನಿಸ್‌  ಮೇಲಿನ ಪ್ರೀತಿ ಎಷ್ಟು ಎಂಬುದು ತಿಳಿಯುತ್ತದೆ.

ಬಾಲ್ಯದಿಂದಲೂ ಕ್ರೀಡೆಯ ಮೇಲೆ ಅಪಾರ ಪ್ರೀತಿ ಇಟ್ಟಿದ್ದ ಎಸ್‌.ಎಂ. ಕೃಷ್ಣ ಅವರ ಆರಂಭದ ದಿನಗಳಲ್ಲಿ ಫುಟ್‌ಬಾಲ್‌, ವಾಲಿಬಾಲ್‌ ಆಡುತ್ತಿದ್ದರು. ಮಹಾರಾಜ ಕಾಲೇಜಿಗೆ ಸೇರಿದ ನಂತರ ಟೆನ್ನಿಸ್‌  ಮೇಲೆ ಪ್ರೀತಿ ಬೆಳೆಸಿಕೊಂಡರು.

ಎಸ್‌.ಎಂ. ಕೃಷ್ಣ ಟೆನ್ನಿಸ್‌ನಲ್ಲಿ  ವಿಶ್ವ ವಿಖ್ಯಾತ ಆಟಗಾರ ರೋಜರ್‌ ಫೆಡರರ್‌ ಅವರನ್ನು ತುಂಬಾ ಇಷ್ಟಪಡುತ್ತಿದ್ದರು. ವಿದೇಶದಲ್ಲಿ ವ್ಯಾಸಂಗ ಮಾಡುವ ಸಮಯದಲ್ಲಿ ವಿಂಬಲ್ಡನ್‌ ಮ್ಯಾಚ್‌ಗಳಲ್ಲಿ ರೋಜರ್‌ ಅವರ ಆಟ ನೋಡಿ ಆನಂದಿಸುತ್ತಿದ್ದರು. ಒಂದೇ ವರ್ಷದಲ್ಲಿ ನಡೆಯುವ ನಾಲ್ಕು ಗ್ರ್ಯಾಂಡ್‌ ಸ್ಲ್ಯಾಮ್‌ ಟೂರ್ನಿಗಳನ್ನು ನೋಡಿ ಕೃಷ್ಣ ಖುಷಿ ಪಟ್ಟಿದ್ದರು.

ಅರ್ಚನ ಎಸ್‌ ಎಸ್

Recent Posts

ಕಾರು ಅಪಘಾತ : ಕಾರಿನಲ್ಲಿ‌10ಕ್ಕೂ ಹೆಚ್ಚು ಕರುಗಳು ಪತ್ತೆ

ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…

1 hour ago

ಮದ್ದೂರು |‌ ದೇವಾಲಯಗಳಲ್ಲಿ ಸರಣಿ ಕಳ್ಳತನ

ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…

4 hours ago

ಎಚ್ಚೆತ್ತ ಪೊಲೀಸರು : ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ,ಪರಿಶೀಲನೆ

ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…

6 hours ago

ರಾಜೀವ್‌ಗೌಡಗೆ ಜಾಮೀನು : ಪಟಾಕಿ ಸಿಡಿಸಿ ಸಂಭ್ರಮಿಸದಂತೆ ಕೋರ್ಟ್‌ ತಾಕೀತು

ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…

6 hours ago

ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ

ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…

6 hours ago

ಸಿಎಂ,ಡಿಸಿಎಂ ವಿರುದ್ಧ ಮಾನಹಾನಿಕ ಪೋಸ್ಟ್‌ : ಬಿಜೆಪಿ ವಿರುದ್ಧ ದೂರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…

6 hours ago