ಬೆಂಗಳೂರು: ಬೆಂಗಳೂರಿನ ಅಭಿವೃದ್ದಿಗೆ ಶ್ರಮಿಸಿದ, ಕರ್ನಾಟಕ ಕಂಡ ದಿಟ್ಟ ರಾಜಕಾರಣಿ, ಬೆಂಗಳೂರಿಗೆ ಬ್ರ್ಯಾಡ್ ಬೆಂಗಳೂರು ಎಂಬ ಹೆಸರು ಬರಲು ಕಾರಣವಾಗಿದ್ದ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಮಂಗಳವಾರ (ಡಿಸೆಂಬರ್ 10) ಮುಂಜಾನೆ ತಮ್ಮ ನಿವಾಸದಲ್ಲಿ ಇಹಲೋಕ ತ್ಯಜಿಸಿದ್ದಾರೆ. ಶ್ವಾಸಕೋಸದ ಸಮಸ್ಯೆಯಿಂದ ಬಳಲುತ್ತಿದ್ದ ಅವರು 92ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ.
ತಮ್ಮ ಅಧಿಕಾರಾವಧಿಯಲ್ಲಿ ಅವರು ತೆಗೆದುಕೊಂಡ ದಿಟ್ಟ ನಿಲುವುಗಳು ಹಾಗೂ ಆಡಳಿತಾತ್ಮಕ ನಡೆಯಿಂದ ದೇಶದ ಗಮನ ಸೆಳೆದಿದ್ದರು. ರಾಜಕೀಯದ ಜೊತೆಗೆ ಅವರಿಗೆ ಕ್ರೀಡೆಯ ಮೇಲೆ ತುಂಬಾ ಒಲವಿತ್ತು. ಟೆನ್ನಿಸ್ ಎಂದರೆ ಅವರಿಗೆ ಪಂಚಪ್ರಾಣ. ತಮ್ಮ ರಾಜಕೀಯದ ಬ್ಯುಸಿ ಸಮಯದಲ್ಲೂ ಟೆನ್ನಿಸ್ ಆಡುವುದನ್ನು ಅವರು ಮರೆಯುತ್ತಿರಲಿಲ್ಲ. ರಾಕೆಟ್ ಹಿಡಿದು, ಟೆನ್ನಿಸ್ ಆಡುವುದು ಹಾಗೂ ಪಂದ್ಯ ನೋಡುವುದು ಎಂದರೆ ಎಸ್.ಎಂ. ಕೃಷ್ಣ ಅವರಿಗೆ ಅಚ್ಚುಮೆಚ್ಚು.
ಎಸ್ಎಂ ಕೃಷ್ಣ ಅವರಿಗೆ ಟೆನ್ನಿಸ್ ಮೇಲೆ ಎಷ್ಟು ಪ್ರೀತಿ ಇತ್ತು ಎಂದರೆ ಅವರು ಸಮಯ ಸಿಕ್ಕಾಗಲೆಲ್ಲಾ ಅಂಗಳಕ್ಕೆ ಇಳಿದು ಟೆನ್ನಿಸ್ ಆಡಿ ಅಭಿಮಾನಿಗಳನ್ನು ರಂಜಿಸುತ್ತಿದ್ದರು. ಜೊತೆಗೆ ಅವರ ಸಂದರ್ಶನಗಳನ್ನು ನೋಡಿದರೆ ಸಾಕು ಟೆನ್ನಿಸ್ ಮೇಲಿನ ಪ್ರೀತಿ ಎಷ್ಟು ಎಂಬುದು ತಿಳಿಯುತ್ತದೆ.
ಬಾಲ್ಯದಿಂದಲೂ ಕ್ರೀಡೆಯ ಮೇಲೆ ಅಪಾರ ಪ್ರೀತಿ ಇಟ್ಟಿದ್ದ ಎಸ್.ಎಂ. ಕೃಷ್ಣ ಅವರ ಆರಂಭದ ದಿನಗಳಲ್ಲಿ ಫುಟ್ಬಾಲ್, ವಾಲಿಬಾಲ್ ಆಡುತ್ತಿದ್ದರು. ಮಹಾರಾಜ ಕಾಲೇಜಿಗೆ ಸೇರಿದ ನಂತರ ಟೆನ್ನಿಸ್ ಮೇಲೆ ಪ್ರೀತಿ ಬೆಳೆಸಿಕೊಂಡರು.
ಎಸ್.ಎಂ. ಕೃಷ್ಣ ಟೆನ್ನಿಸ್ನಲ್ಲಿ ವಿಶ್ವ ವಿಖ್ಯಾತ ಆಟಗಾರ ರೋಜರ್ ಫೆಡರರ್ ಅವರನ್ನು ತುಂಬಾ ಇಷ್ಟಪಡುತ್ತಿದ್ದರು. ವಿದೇಶದಲ್ಲಿ ವ್ಯಾಸಂಗ ಮಾಡುವ ಸಮಯದಲ್ಲಿ ವಿಂಬಲ್ಡನ್ ಮ್ಯಾಚ್ಗಳಲ್ಲಿ ರೋಜರ್ ಅವರ ಆಟ ನೋಡಿ ಆನಂದಿಸುತ್ತಿದ್ದರು. ಒಂದೇ ವರ್ಷದಲ್ಲಿ ನಡೆಯುವ ನಾಲ್ಕು ಗ್ರ್ಯಾಂಡ್ ಸ್ಲ್ಯಾಮ್ ಟೂರ್ನಿಗಳನ್ನು ನೋಡಿ ಕೃಷ್ಣ ಖುಷಿ ಪಟ್ಟಿದ್ದರು.
ಬೆಂಗಳೂರು: ಬಡವರ ಮತಗಳನ್ನು ತೆಗೆಯಲು ಎಸ್ಐಆರ್ ಮೂಲಕ ಸಂಚು ಮಾಡಲಾಗಿದೆ. ನಾವುಗಳು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ನಮ್ಮ ಪಕ್ಷದ…
ಬೆಂಗಳೂರು: ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ಗೆ ರಾಜ್ಯ ಸರ್ಕಾರ ರಿಲೀಫ್ ನೀಡಿದೆ. ವಾಟಾಳ್ ನಾಗರಾಜ್ ಮೇಲಿನ ಕೇಸ್ಗಳನ್ನು ಸರ್ಕಾರ ಹಿಂಪಡೆಯಲು…
ಬೆಂಗಳೂರು: ಕಾನೂನಾತ್ಮಕವಾಗಿ 52 ಪ್ರಕರಣಗಳನ್ನು ಹಿಂಪಡೆಯಬಹುದು ಎಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್…
ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದ ಪ್ರಸಿದ್ಧ ವೆಲ್ಲೆಸ್ಲಿ ಸೇತುವೆ ಆತ್ಮಹತ್ಯೆ ಹಾಟ್ಸ್ಪಾಟ್ ಆಗುತ್ತಿದ್ದು, ಸೇತುವೆ ಮೇಲಿಂದ ನದಿಗೆ ಧುಮುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ…
ನವದೆಹಲಿ: ಆಫ್ರಿಕಾದ ಹಲವು ಭಾಗಗಳಲ್ಲಿ ಕೋವಿಡ್ಗಿಂತಲೂ ಡೆಡ್ಲಿಯಾದ ಎಬೋಲಾ ವೈರಸ್ ಹಾವಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ ಭಾರತದಲ್ಲೂ ಕಟ್ಟೆಚ್ಚರಕ್ಕೆ ಆದೇಶ ನೀಡಲಾಗಿದೆ.…
ನವದೆಹಲಿ: ಕರ್ನಾಟಕ ನಾಲ್ಕು ಸೇರಿದಂತೆ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಮಲ್ಲಿಕಾರ್ಜುನ ಖರ್ಗೆ, ಎಚ್.ಡಿ.ದೇವೇಗೌಡ, ಈರಣ್ಣ ಕಡಾಡಿ,…