ಬೆಂಗಳೂರು: ಬೆಂಗಳೂರಿನ ಅಭಿವೃದ್ದಿಗೆ ಶ್ರಮಿಸಿದ, ಕರ್ನಾಟಕ ಕಂಡ ದಿಟ್ಟ ರಾಜಕಾರಣಿ, ಬೆಂಗಳೂರಿಗೆ ಬ್ರ್ಯಾಡ್ ಬೆಂಗಳೂರು ಎಂಬ ಹೆಸರು ಬರಲು ಕಾರಣವಾಗಿದ್ದ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಮಂಗಳವಾರ (ಡಿಸೆಂಬರ್ 10) ಮುಂಜಾನೆ ತಮ್ಮ ನಿವಾಸದಲ್ಲಿ ಇಹಲೋಕ ತ್ಯಜಿಸಿದ್ದಾರೆ. ಶ್ವಾಸಕೋಸದ ಸಮಸ್ಯೆಯಿಂದ ಬಳಲುತ್ತಿದ್ದ ಅವರು 92ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ.
ತಮ್ಮ ಅಧಿಕಾರಾವಧಿಯಲ್ಲಿ ಅವರು ತೆಗೆದುಕೊಂಡ ದಿಟ್ಟ ನಿಲುವುಗಳು ಹಾಗೂ ಆಡಳಿತಾತ್ಮಕ ನಡೆಯಿಂದ ದೇಶದ ಗಮನ ಸೆಳೆದಿದ್ದರು. ರಾಜಕೀಯದ ಜೊತೆಗೆ ಅವರಿಗೆ ಕ್ರೀಡೆಯ ಮೇಲೆ ತುಂಬಾ ಒಲವಿತ್ತು. ಟೆನ್ನಿಸ್ ಎಂದರೆ ಅವರಿಗೆ ಪಂಚಪ್ರಾಣ. ತಮ್ಮ ರಾಜಕೀಯದ ಬ್ಯುಸಿ ಸಮಯದಲ್ಲೂ ಟೆನ್ನಿಸ್ ಆಡುವುದನ್ನು ಅವರು ಮರೆಯುತ್ತಿರಲಿಲ್ಲ. ರಾಕೆಟ್ ಹಿಡಿದು, ಟೆನ್ನಿಸ್ ಆಡುವುದು ಹಾಗೂ ಪಂದ್ಯ ನೋಡುವುದು ಎಂದರೆ ಎಸ್.ಎಂ. ಕೃಷ್ಣ ಅವರಿಗೆ ಅಚ್ಚುಮೆಚ್ಚು.
ಎಸ್ಎಂ ಕೃಷ್ಣ ಅವರಿಗೆ ಟೆನ್ನಿಸ್ ಮೇಲೆ ಎಷ್ಟು ಪ್ರೀತಿ ಇತ್ತು ಎಂದರೆ ಅವರು ಸಮಯ ಸಿಕ್ಕಾಗಲೆಲ್ಲಾ ಅಂಗಳಕ್ಕೆ ಇಳಿದು ಟೆನ್ನಿಸ್ ಆಡಿ ಅಭಿಮಾನಿಗಳನ್ನು ರಂಜಿಸುತ್ತಿದ್ದರು. ಜೊತೆಗೆ ಅವರ ಸಂದರ್ಶನಗಳನ್ನು ನೋಡಿದರೆ ಸಾಕು ಟೆನ್ನಿಸ್ ಮೇಲಿನ ಪ್ರೀತಿ ಎಷ್ಟು ಎಂಬುದು ತಿಳಿಯುತ್ತದೆ.
ಬಾಲ್ಯದಿಂದಲೂ ಕ್ರೀಡೆಯ ಮೇಲೆ ಅಪಾರ ಪ್ರೀತಿ ಇಟ್ಟಿದ್ದ ಎಸ್.ಎಂ. ಕೃಷ್ಣ ಅವರ ಆರಂಭದ ದಿನಗಳಲ್ಲಿ ಫುಟ್ಬಾಲ್, ವಾಲಿಬಾಲ್ ಆಡುತ್ತಿದ್ದರು. ಮಹಾರಾಜ ಕಾಲೇಜಿಗೆ ಸೇರಿದ ನಂತರ ಟೆನ್ನಿಸ್ ಮೇಲೆ ಪ್ರೀತಿ ಬೆಳೆಸಿಕೊಂಡರು.
ಎಸ್.ಎಂ. ಕೃಷ್ಣ ಟೆನ್ನಿಸ್ನಲ್ಲಿ ವಿಶ್ವ ವಿಖ್ಯಾತ ಆಟಗಾರ ರೋಜರ್ ಫೆಡರರ್ ಅವರನ್ನು ತುಂಬಾ ಇಷ್ಟಪಡುತ್ತಿದ್ದರು. ವಿದೇಶದಲ್ಲಿ ವ್ಯಾಸಂಗ ಮಾಡುವ ಸಮಯದಲ್ಲಿ ವಿಂಬಲ್ಡನ್ ಮ್ಯಾಚ್ಗಳಲ್ಲಿ ರೋಜರ್ ಅವರ ಆಟ ನೋಡಿ ಆನಂದಿಸುತ್ತಿದ್ದರು. ಒಂದೇ ವರ್ಷದಲ್ಲಿ ನಡೆಯುವ ನಾಲ್ಕು ಗ್ರ್ಯಾಂಡ್ ಸ್ಲ್ಯಾಮ್ ಟೂರ್ನಿಗಳನ್ನು ನೋಡಿ ಕೃಷ್ಣ ಖುಷಿ ಪಟ್ಟಿದ್ದರು.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…