ರಾಜ್ಯ

ಹುಟ್ಟೂರಿನತ್ತ ತೆರಳಿದ ಎಸ್‌.ಎಂ.ಕೃಷ್ಣ ಅಂತಿಮ ಯಾತ್ರೆ

ಬೆಂಗಳೂರು:  ಇಲ್ಲಿನ ಸದಾಶಿವನಗರದಿಂದ ಗಾಜಿನ ವಾಹನದಲ್ಲಿ ಎಸ್.ಎಂ.ಕೃಷ್ಣ ಅವರ ಪಾರ್ಥಿವ ಶರೀರ ಹುಟ್ಟೂರಾದ ಸೋಮನಹಳ್ಳಿಯತ್ತ ಅಂತಿಮ ಯಾತ್ರೆ ನಡೆಯಲಿದ್ದು, ಮೆರವಣಿಗೆ ಮೂಲಕ ಮದ್ದೂರಿಗೆ ತೆರಳಲಿದೆ.

ಬೆಂಗಳೂರಿನ ಸದಾಶಿವನಗರದ ಆರ್‌ಎಂವಿ ಎಕ್ಸ್‌ಟೆನ್ಷನ್‌ನ 5ನೇ ಅಡ್ಡರಸ್ತೆಯಲ್ಲಿರುವ ಶಾಂಭವಿ ನಿವಾಸದಲ್ಲಿ ಎಸ್‌.ಎಂ.ಕೃಷ್ಣ ಅವರ ಪಾರ್ಥಿವ ಶರೀರಕ್ಕೆ ಆದಿಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿ ಹಾಗೂ ಪತ್ನಿ ಪ್ರೇಮಾ ಕೃಷ್ಣ, ಡಿಸಿಎಂ ಡಿ.ಕೆ.ಶಿವಕುಮಾರ್‌, ಅವರ ಪುತ್ರಿಯರು ಹಾಗೂ ಮೊಮ್ಮಕ್ಕಳು ಪೂಜೆಸಲ್ಲಿದ್ದಾರೆ.
ಬಳಿಕ ಹೂವಿನಿಂದ ಅಲಂಕೃತವಾಗಿರುವ ಗಾಜಿನ ವಾಹನದಲ್ಲಿ ಎಸ್‌.ಎಂ.ಕೃಷ್ಣ ಅವರ ಪಾರ್ಥಿವ ಶರೀರವನ್ನು ಕೊಂಡೊಯ್ಯಲಾಗಿದೆ.

ಎಸ್‌.ಎಂ. ಕೃಷ್ಣ ಅವರ ಪಾರ್ಥಿವ ಶರೀರವೂ ಬೆಂಗಳೂರಿನ ಟೌನ್‌ಹಾಲ್‌, ಮೈಸೂರು ಸರ್ಕಲ್‌, ರಾಜರಾಜೇಶ್ವರಿ ಆರ್ಚ್‌ ಮೂಲಕ, ಕೆಂಗೇರಿ, ಬಿಡದಿ, ರಾಮನಗರ ಹಾಗೂ ಚನ್ನಪಟ್ಟಣದ ಮೂಲಕ ಮದ್ದೂರು ತಾಲ್ಲೂಕಿನ ಸೋಮನಹಳ್ಳಿಯವರೆಗೆ ತಲುಪಲಿದೆ. ನಂತರ ಮೃತರ ಸ್ವಗ್ರಾಮದಲ್ಲಿ ಸಾರ್ವಜನಿಕರಿಗೆ ಮಧ್ಯಾಹ್ನ 3 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಮೃತರ ಸ್ವಗ್ರಾಮವಾಗಿರುವ ಸೋಮನಹಳ್ಳಿಯಲ್ಲಿ ಅಂತ್ಯ ಸಂಸ್ಕಾರ ನಡೆಯಲಿದ್ದು, ಮಧ್ಯಾಹ್ನ 3 ಗಂಟೆಯ ನಂತರ ಶ್ರೀರಂಗಪಟ್ಟಣದ ಪುರೋಹಿತರಾದ ಭಾನುಪ್ರಕಾಶ್‌ ಶರ್ಮ ಅವರು ಒಕ್ಕಲಿಗ ವಿಧಿ ವಿಧಾನಗಳ ಮೂಲಕ ಅಂತಿಮ ಸಂಸ್ಕಾರದ ವಿಧಿ-ವಿಧಾನಗಳನ್ನು ನೆರವೇರಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇನ್ನು ಈ ವೇಳೆ ಆದಿಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿ ಮಾತನಾಡಿ, ಜನಪರ ಆಡಳಿತ ನೀಡಿದ ಮಾಜಿ ಸಿಎಂ ಎಸ್‌.ಎಂ.ಕೃಷ್ಣ ಅವರ ಆಡಳಿತದ ಸೇವೆ ಎಲ್ಲರಿಗೂ ಮಾದರಿಯಾಗಿದೆ. ಅವರ ಜನಪರ ಅಭಿವೃದ್ಧಿಗಾಗಿ ಕೈಗೊಂಡಂತಹ ಕಾರ್ಯಕ್ರಮಗಳು ಆದರ್ಶಯುತವಾಗಿವೆ. ಕೃಷ್ಣ ಅವರು ತಂತ್ರಜ್ಞಾನ ನೀತಿಗೆ ಭದ್ರ ಬುನಾದಿ ಹಾಕಿ ನಮ್ಮ ದೇಶದ ಆರ್ಥಿಕತೆ ಅತಿ ವೇಗವಾಗಿ ಮುಂದುವರೆಯಲು ಕಾರಣರಾದರು ಎಣದು ಹೇಳಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

11 mins ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

14 mins ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

21 mins ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

27 mins ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

13 hours ago