ಬೆಂಗಳೂರು: ಇಲ್ಲಿನ ಸದಾಶಿವನಗರದಿಂದ ಗಾಜಿನ ವಾಹನದಲ್ಲಿ ಎಸ್.ಎಂ.ಕೃಷ್ಣ ಅವರ ಪಾರ್ಥಿವ ಶರೀರ ಹುಟ್ಟೂರಾದ ಸೋಮನಹಳ್ಳಿಯತ್ತ ಅಂತಿಮ ಯಾತ್ರೆ ನಡೆಯಲಿದ್ದು, ಮೆರವಣಿಗೆ ಮೂಲಕ ಮದ್ದೂರಿಗೆ ತೆರಳಲಿದೆ.
ಬೆಂಗಳೂರಿನ ಸದಾಶಿವನಗರದ ಆರ್ಎಂವಿ ಎಕ್ಸ್ಟೆನ್ಷನ್ನ 5ನೇ ಅಡ್ಡರಸ್ತೆಯಲ್ಲಿರುವ ಶಾಂಭವಿ ನಿವಾಸದಲ್ಲಿ ಎಸ್.ಎಂ.ಕೃಷ್ಣ ಅವರ ಪಾರ್ಥಿವ ಶರೀರಕ್ಕೆ ಆದಿಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿ ಹಾಗೂ ಪತ್ನಿ ಪ್ರೇಮಾ ಕೃಷ್ಣ, ಡಿಸಿಎಂ ಡಿ.ಕೆ.ಶಿವಕುಮಾರ್, ಅವರ ಪುತ್ರಿಯರು ಹಾಗೂ ಮೊಮ್ಮಕ್ಕಳು ಪೂಜೆಸಲ್ಲಿದ್ದಾರೆ.
ಬಳಿಕ ಹೂವಿನಿಂದ ಅಲಂಕೃತವಾಗಿರುವ ಗಾಜಿನ ವಾಹನದಲ್ಲಿ ಎಸ್.ಎಂ.ಕೃಷ್ಣ ಅವರ ಪಾರ್ಥಿವ ಶರೀರವನ್ನು ಕೊಂಡೊಯ್ಯಲಾಗಿದೆ.
ಎಸ್.ಎಂ. ಕೃಷ್ಣ ಅವರ ಪಾರ್ಥಿವ ಶರೀರವೂ ಬೆಂಗಳೂರಿನ ಟೌನ್ಹಾಲ್, ಮೈಸೂರು ಸರ್ಕಲ್, ರಾಜರಾಜೇಶ್ವರಿ ಆರ್ಚ್ ಮೂಲಕ, ಕೆಂಗೇರಿ, ಬಿಡದಿ, ರಾಮನಗರ ಹಾಗೂ ಚನ್ನಪಟ್ಟಣದ ಮೂಲಕ ಮದ್ದೂರು ತಾಲ್ಲೂಕಿನ ಸೋಮನಹಳ್ಳಿಯವರೆಗೆ ತಲುಪಲಿದೆ. ನಂತರ ಮೃತರ ಸ್ವಗ್ರಾಮದಲ್ಲಿ ಸಾರ್ವಜನಿಕರಿಗೆ ಮಧ್ಯಾಹ್ನ 3 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಮೃತರ ಸ್ವಗ್ರಾಮವಾಗಿರುವ ಸೋಮನಹಳ್ಳಿಯಲ್ಲಿ ಅಂತ್ಯ ಸಂಸ್ಕಾರ ನಡೆಯಲಿದ್ದು, ಮಧ್ಯಾಹ್ನ 3 ಗಂಟೆಯ ನಂತರ ಶ್ರೀರಂಗಪಟ್ಟಣದ ಪುರೋಹಿತರಾದ ಭಾನುಪ್ರಕಾಶ್ ಶರ್ಮ ಅವರು ಒಕ್ಕಲಿಗ ವಿಧಿ ವಿಧಾನಗಳ ಮೂಲಕ ಅಂತಿಮ ಸಂಸ್ಕಾರದ ವಿಧಿ-ವಿಧಾನಗಳನ್ನು ನೆರವೇರಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನು ಈ ವೇಳೆ ಆದಿಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿ ಮಾತನಾಡಿ, ಜನಪರ ಆಡಳಿತ ನೀಡಿದ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ಆಡಳಿತದ ಸೇವೆ ಎಲ್ಲರಿಗೂ ಮಾದರಿಯಾಗಿದೆ. ಅವರ ಜನಪರ ಅಭಿವೃದ್ಧಿಗಾಗಿ ಕೈಗೊಂಡಂತಹ ಕಾರ್ಯಕ್ರಮಗಳು ಆದರ್ಶಯುತವಾಗಿವೆ. ಕೃಷ್ಣ ಅವರು ತಂತ್ರಜ್ಞಾನ ನೀತಿಗೆ ಭದ್ರ ಬುನಾದಿ ಹಾಕಿ ನಮ್ಮ ದೇಶದ ಆರ್ಥಿಕತೆ ಅತಿ ವೇಗವಾಗಿ ಮುಂದುವರೆಯಲು ಕಾರಣರಾದರು ಎಣದು ಹೇಳಿದ್ದಾರೆ.
ನವದೆಹಲಿ: ತಿಪಟೂರು ಕಾಂಗ್ರೆಸ್ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…
ಕೋಯಿಕ್ಕೋಡ್: ವಯನಾಡು, ಕೋಯಿಕ್ಕೋಡ್ನಲ್ಲಿ ಶಿಗೆಲ್ಲಾ ವೈರಸ್ ಸೋಂಕು ಹರಡಿರುವ ನಡುವೆ ನಿಫಾ ವೈರಸ್ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…
ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದ್ದು, ರೈತರಲ್ಲಿ ಆತಂಕ ಮನೆಮಾಡಿದೆ.…
ಟೆಹರಾನ್: ಇರಾನ್, ಅಮೇರಿಕಾ ಮತ್ತು ಇಸ್ರೇಲ್ ಸಂಘರ್ಷ ಮತ್ತೆ ಉಲ್ಬಣಗೊಂಡಿದೆ. ಯುಎಸ್ ದಾಳಿ ಬೆನ್ನಲ್ಲೇ ಹಾರ್ಮುಜ್ ಜಲಸಂಧಿಯನ್ನು ಇರಾನ್ ಮತ್ತೆ…
ನೇರಳೆ ಹಣ್ಣಿನ ಬೀಜಗಳ ಔಷಧಿಯ ಗುಣಗಳನ್ನು ಪರಿಗಣಿಸಿ ಸರ್ಕಾರವು ಇವುಗಳ ಸಂರಕ್ಷಣೆ ಮತ್ತು ಮೌಲ್ಯವರ್ಧನೆಗೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. ತೋಟಗಾರಿಕಾ…
ಮೈಸೂರಿನ ರಿಂಗ್ ರಸ್ತೆ ಪರಸಯ್ಯನ ಹುಂಡಿ ಸರ್ಕಲ್ನಲ್ಲಿ ಪ್ರತಿನಿತ್ಯ ಸಾರಿಗೆ ನಿಗಮದ ಬಸ್ಗಳನ್ನು ನಿಲುಗಡೆ ಮಾಡುವುದರಿಂದ ಪ್ರತಿನಿತ್ಯ ಟ್ರಾಫಿಕ್ ಜಾಮ್…