ಬೆಂಗಳೂರು: ಕರ್ನಾಟಕದ ಅಭಿವೃದ್ದಿ ಪಥಕ್ಕೆ ಅಡಿಗಲ್ಲು ಹಾಕಿದ ಎಸ್ ನಿಜಲಿಂಗಪ್ಪನವರ ತತ್ವಾದರ್ಶಗಳು ಸ್ಪೂರ್ತಿದಾಯಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು(ಆ.8) ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ನಿಜಲಿಂಗಪ್ಪ ಅವರ ಪುಣ್ಯತಿಥಿ ಅಂಗವಾಗಿ ಅವರ ಪ್ರತಿಮೆಗೆ ನಮನ ಸಲ್ಲಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಕನ್ನಡ ನಾಡಿನ ಅಭಿವೃದ್ಧಿಗೆ ಕೊಡುಗೆ ನೀಡಿದ ದಿವಂಗತ ಎಸ್ ನಿಜಲಿಂಗಪ್ಪ ಅವರು ಇಂದಿಗೂ ಜನಮಾನಸದಲ್ಲಿ ನೆಲೆಸಿದ್ದಾರೆ. ಅವರು ಈ ದೇಶ ಕಂಡ ಪ್ರಾಮಾಣಿಕ ರಾಜಕಾರಣಿ. ಮೌಲ್ಯಯುತ ರಾಜಕೀಯ ಜೀವನವನ್ನು ನಡೆಸಿಕೊಂಡು ಬಂದ ನಿಜಲಿಂಗಪ್ಪನವರು ನೀರಾವರಿ ಕ್ಷೇತ್ರದ ಅಭಿವೃದ್ಧಿ ಸೇರಿದಂತೆ ಕರ್ನಾಟಕ ಏಕೀಕರಣಕ್ಕೆ ಶ್ರಮಿಸಿದ್ದಾರೆ. ನಿಜಲಿಂಗಪ್ಪನವರ ತತ್ವಾದರ್ಶಗಳು ಸ್ಪೂರ್ತಿದಾಯಕವಾಗಿವೆ ಎಂದರು.
ಬಿಜೆಪಿ, ಎನ್ ಡಿ ಎ ಸರ್ಕಾರ ಅಲ್ಪಸಂಖ್ಯಾತ ವಿರೋಧಿ
ಸಂಸತ್ ನಲ್ಲಿ ಇಂದು ವಕ್ಫ್ ಬೋರ್ಡ್ ತಿದ್ದುಪಡಿ ಬಗ್ಗೆ ಬಿಲ್ ಮಂಡನೆಯಾಗುತ್ತಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸುತ್ತಾ, ಬಿಜೆಪಿ ಹಾಗೂ ಎನ್ ಡಿ ಎ ಸರ್ಕಾರ ದೇಶದ ಅಲ್ಪಸಂಖ್ಯಾತರ ವಿರೋಧಿಗಳು ಎಂಬುದನ್ನು ಅವರ ಈ ನಡೆ ನಿರೂಪಿಸುತ್ತಿದೆ. ಅವರು ಜಾತ್ಯಾತೀತ, ಸಾಮಾಜಿಕ ನ್ಯಾಯದ ಸಿದ್ದಾಂತಗಳನ್ನು ಬೆಂಬಲಿಸದ ಕೋಮುವಾದಿ ಪಕ್ಷವಾಗಿದ್ದಾರೆ ಎಂದು ತಿಳಿಸಿದರು.
ಸಿದ್ದರಾಮಯ್ಯ ಹಾಗೂ ಬಿ.ಕೆ ಹರಿಪ್ರಸಾದ್ ರ ಭೇಟಿಯ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ, ಬಿ.ಕೆ.ಹರಿಪ್ರಸಾದ್ ಅವರು ಕಾಂಗ್ರೆಸ್ ಪಕ್ಷದ ನಾಯಕರಾಗಿದ್ದು, ಉಭಯ ಕುಶಲೋಪರಿ ಮಾತುಕತೆ ನಡೆಸಲಾಗಿದೆ ಎಂದರು.
ಇಸ್ರೇಲ್ : ಇಸ್ರೇಲ್-ಲೆಬನಾನ್ ಉದ್ವಿಗ್ನತೆಗೆ 10 ದಿನಗಳ ಕದನ ವಿರಾಮ ಘೋಷಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.…
ನವದೆಹಲಿ : ಉತ್ತರ, ದಕ್ಷಿಣ, ದೊಡ್ಡ ಅಥವಾ ಸಣ್ಣ ರಾಜ್ಯಗಳಾವುದೇ ಇರಲಿ ಕ್ಷೇತ್ರ ಪುನರ್ ವಿಂಗಡಣೆಯ ವಿಷಯಕ್ಕೆ ಬಂದಾಗ ರಾಜ್ಯಗಳ…
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗಳಿಗೆ…
ನವದೆಹಲಿ : ಇಲ್ಲಿನ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳ ನಡುವೆ ಸಣ್ಣ ಘರ್ಷಣೆಯಾಗಿದ್ದು, ಭಾರೀ ಅನಾಹುತ ತಪ್ಪಿದೆ.…
ರಾಯಚೂರು : ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಚಿಲಕಣಡೋಣ ಗ್ರಾಮದ ಸಮೀಪ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ…
ಬೆಂಗಳೂರು : ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆಯಾಗುವ ಸಾಧ್ಯತೆಯಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ…