ರಾಜ್ಯ

ಎಸ್.ನಿಜಲಿಂಗಪ್ಪನವರು ಕರ್ನಾಟಕ ಕಂಡ ಅಪರೂಪದ ರಾಜಕಾರಣಿ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ನಿಜಲಿಂಗಪ್ಪನವರು ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮಾಜಿ ಮುಖ್ಯಮಂತ್ರಿ ದಿ.ಎಸ್.ನಿಜಲಿಂಗಪ್ಪರವರ ಜನ್ಮ ದಿನದ ಅಂಗವಾಗಿ ಸುವರ್ಣಸೌಧದಲ್ಲಿರುವ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ, ಪುಷ್ಪಾರ್ಚನೆ ಮಾಡಿ ಮಾತನಾಡಿದರು.

ಇದನ್ನು ಓದಿ:  ಶಾಸಕಾಂಗ ಪಕ್ಷದ ಸಭೆಯಲ್ಲಿ ಯಾರೂ ಗ್ಯಾರಂಟಿ ಯೋಜನೆ ವಿರೋಧಿಸಿಲ್ಲ: ಸಚಿವ ಚಲುವರಾಯಸ್ವಾಮಿ

ನಿಜಲಿಂಗಪ್ಪನವರು ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಹಾಗೂ ಅವಿಭಜಿತ ಕಾಂಗ್ರೆಸ್ ಪಕ್ಷದ ಎಐಸಿಸಿ ಅಧ್ಯಕ್ಷರಾಗಿದ್ದರು. ಪ್ರಧಾನಿ ಇಂದಿರಾ ಗಾಂಧಿ ಯವರೊಂದಿಗೆ ರಾಜಕೀಯ ಭಿನ್ನಾಭಿಪ್ರಾಯ ಬೆಳೆದು ಬೇರೆ ಬೇರೆ ಪಕ್ಷ ರಚಿಸಿದ್ದರು. ಭ್ರಷ್ಟಾಚಾರದ ವಿರುದ್ಧವಾಗಿದ್ದ ರಾಜಕಾರಣಿಯಾಗಿದ್ದರು ಎಂದರು.

ಪ್ರಾಮಾಣಿಕ, ಧೀಮಂತ ನಾಯಕನ ಆದರ್ಶಗಳು ನಮಗೆ ಮಾರ್ಗದರ್ಶಕ ಕರ್ನಾಟಕದ ಏಕೀಕರಣಕ್ಕೂ ಅವರು ದುಡಿದಿದವರು. ಪ್ರಾಮಾಣಿಕ, ಧೀಮಂತ ನಾಯಕನ ಆದರ್ಶಗಳು ನಮಗೆ ಮಾರ್ಗದರ್ಶಕವಾಗಿವೆ. ಮಾಜಿ ಮುಖ್ಯಮಂತ್ರಿ ಎಸ್.ನಿಜಲಿಂಗಪ್ಪನವರ ಹುಟ್ಟುಹಬ್ಬದಂದು ಸರ್ಕಾರ ಅವರನ್ನು ಸ್ಮರಿಸಿ ಗೌರವಿಸುತ್ತದೆ ಎಂದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕಾವೇ..ರಿ

ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…

6 hours ago

ಓದುಗರ ಪತ್ರ: ಸಿಜೆಪಿ ಯಾವುದೇ ಪಕ್ಷದ ಬಾಲಂಗೋಚಿಯಾಗದಿರಲಿ

ಪರೀಕ್ಷೆಗಳ ಅಕ್ರಮ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟುಹಿಡಿದು ಕಾಕ್ರೋಚ್ ಜನತಾ ಪಕ್ಷ ನಡೆಸಿದ ಚಳವಳಿ ತನ್ನ…

6 hours ago

ಓದುಗರ ಪತ್ರ: ದಸರೆಯಲ್ಲಿ ಕಂಬಳದ ವ್ಯಾಮೋಹವೇಕೇ?

ವಿಶ್ವವಿಖ್ಯಾತ ಮೈಸೂರು ದಸರೆಗೆ ತನ್ನದೇ ಆದ ಇತಿಹಾಸವಿದೆ. ಇತ್ತೀಚಿನ ವರ್ಷಗಳಲ್ಲಿ ಸಮುದಾಯಗಳಿಗೆ ಅನುಕೂಲವಾಗುವಂತಹ ಇಲ್ಲವೆ ಸ್ಪೂರ್ತಿ ನೀಡುವಂತಹ ಕಾರ್ಯಕ್ರಮಗಳು ಸೇರ್ಪಡೆಯಾಗುತ್ತಿವೆ.…

6 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಕನ್ನಡ ಚಿತ್ರರಂಗದ ಕಾಯಕಲ್ಪವೂ, ಅವರಿವರ ಭಾವವೂ

ಎಲ್ಲ ಕಡೆ ಈಗ ಕನ್ನಡ ಚಿತ್ರರಂಗವನ್ನು ಉಳಿಸುವ ಚರ್ಚೆಗಳು. ಏಕಪರದೆಯ ಚಿತ್ರಮಂದಿರಗಳು ಮುಚ್ಚದ ಹಾಗೆ ಮಾಡಲು ಏನು ಮಾಡಬೇಕು, ಜನರನ್ನು…

6 hours ago

ಮಳೆಗಾಲದ ಸಾಂಕ್ರಾಮಿಕ ರೋಗಗಳ ಆತಂಕ

ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ೨೯ ಡೆಂಗ್ಯು ಪ್ರಕರಣಗಳು ದೃಢ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ   ಮಡಿಕೇರಿ:…

7 hours ago