ರಾಜ್ಯ

ಎಸ್.ನಿಜಲಿಂಗಪ್ಪ ಸೇವೆ ನಮಗೆ ಆದರ್ಶ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಸ್.ನಿಜಲಿಂಗಪ್ಪ ಅವರು ದೇಶಕ್ಕೆ ಮಾಡಿದ ಸೇವೆ ನಮಗೆ ಆದರ್. ಅವರ ಆದರ್ಶಗಳನ್ನು ನಾವು ಮೈಗೂಡಿಸಿಕೊಂಡು ರಾಜ್ಯದ ಸೇವೆಯನ್ನು ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ವಿಧಾನಸೌಧದ ಪಶ್ಚಿಮ ದಿಕ್ಕಿನಲ್ಲಿರುವ ಮಾಜಿ ಮುಖ್ಯಮಂತ್ರಿಯವರಾದ ದಿ. ಎಸ್ ನಿಜಲಿಂಗಪ್ಪ ರವರ ಪುಣ್ಯತಿಥಿ ಅಂಗವಾಗಿ ಅವರ ಪ್ರತಿಮೆ ಗೆ ಮಾಲಾರ್ಪಣೆ ಮಾಡಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಮಾಜಿ ಮುಖ್ಯಮಂತ್ರಿ ಎಸ್. ನಿಜಲಿಂಗಪ್ಪನವರು ಅವಿಭಜಿತ ಕಾಂಗ್ರೆಸ್ ನ ಎಐಸಿಸಿ ಅಧ್ಯಕ್ಷರಾಗಿದ್ದವರು. ಪ್ರತಿ ವರ್ಷ ಅವರ ಜನ್ಮದಿನ ಹಾಗೂ ಪುಣ್ಯತಿಥಿಯಂದು ಅವರ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಗೌರವವನ್ನು ಸರ್ಕಾರ ಸಲ್ಲಿಸುತ್ತಾ ಬಂದಿದೆ ಎಂದರು.

ದೇಶ ಕಂಡ ಅಪ್ರತಿಮ ನಾಯಕರು
ನಿಜಲಿಂಗಪ್ಪನವರು ಸ್ವಾತಂತ್ರ್ಯ ಹೋರಾಟಗಾರರು ಹಾಗೂ ದೇಶ ಕಂಡ ಅಪ್ರತಿಮ ನಾಯಕರು. ಎರಡು ಬಾರಿ ರಾಜ್ಯದ ಮುಖ್ಯಮಂತ್ರಿಗಳಾದರು. ಏಕೀಕರಣದ ಹೋರಾಟದಲ್ಲಿ ಭಾಗವಹಿಸಿ, ಕರ್ನಾಟಕದ ಏಕೀಕರಣದ ನಂತರ ಮೊದಲನೇ ಮುಖ್ಯ ಮಂತ್ರಿಗಳಾದರು. ಜನಪರ ಕಾಳಜಿಯಿದ್ದ ಮುಖ್ಯಮಂತ್ರಿಗಳು. ನೀರಾವರಿಗೆ ಹೆಚ್ಚಿನ ಆದ್ಯತೆ ನೀಡಿದರು. ಎಲ್ಲಕ್ಕಿಂತ ಮುಖ್ಯವಾಗಿ ಪ್ರಾಮಾಣಿಕ ರಾಜಕಾರಣಿ ಎಂದು ಮುಖ್ಯಮಂತ್ರಿಗಳು ಬಣ್ಣಿಸಿದರು.

ಆಂದೋಲನ ಡೆಸ್ಕ್

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

2 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

7 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

11 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

11 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

11 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

14 hours ago