ರಾಜ್ಯ

ಶಬರಿಮಲೆ ಯಾತ್ರೆ ಆರಂಭ: ಭಕ್ತರಿಗೆ ಮಹತ್ವದ ಸೂಚನೆ ಕೊಟ್ಟ ಸರ್ಕಾರ

ಕೇರಳ: ಶಬರಿಮಲೆ ಯಾತ್ರೆಗೆ ತೆರಳುವ ಭಕ್ತರಿಗೆ ಕೇರಳ ಸರ್ಕಾರ ಮಹತ್ವದ ಸೂಚನೆ ಕೊಟ್ಟಿದ್ದು, ಸ್ನಾನದ ವೇಳೆಯಲ್ಲಿ ಮೂಗಿನೊಳಗೆ ನೀರು ಹೋಗದಂತೆ ಎಚ್ಚರ ವಹಿಸುವಂತೆ ಹೇಳಿದೆ. ಕೇರಳದಲ್ಲಿ ಪತ್ತೆಯಾಗುತ್ತಿರುವ ಅಮೀಬಿಕ್‌ ಮೆನಿಂಗೋಎನ್ಸೆಫಾಲಿಟಿಸ್‌ ಎಂಬ ಮಿದುಳು ಜ್ವರ ಪ್ರಕರಣದ ಹಿನ್ನೆಲೆಯಲ್ಲಿ ಸರ್ಕಾರವು ಭಕ್ತರಿಗೆ ಮಹತ್ವದ ಸೂಚನೆ ನೀಡಿದೆ.

ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿರುವ ಜನರು ಔಷಧಗಳನ್ನು ತೆಗೆದುಕೊಂಡು ಬರಬೇಕು. ಒತ್ತಡ ನಿರ್ವಹಣೆಗಾಗಿ ನಡಿಗೆಯಂತಹ ಲಘು ವ್ಯಾಯಾಮ ಮಾಡಬೇಕು ಎಂದು ಸಲಹೆ ನೀಡಿದೆ.

ಎಲ್ಲರೂ ಕುದಿಸಿದ ನೀರನ್ನೇ ಕುಡಿಯಬೇಕು. ಬಯಲು ಬಹಿರ್ದೆಸೆ ನಿಷೇಧಿಸಲಾಗಿದ್ದು, ಶೌಚಾಲಯಗಳನ್ನೇ ಬಳಸಬೇಕು. ತ್ಯಾಜ್ಯಗಳನ್ನು ನಿರ್ದಿಷ್ಟ ಜಾಗದಲ್ಲೇ ಹಾಕಬೇಕು ಎಂದು ಸೂಚನೆ ನೀಡಲಾಗಿದೆ.

ಇನ್ನು ಯಾತ್ರೆಯ ವೇಳೆ ಪೂರೈಕೆಯಾಗುವ ಆಹಾರಗಳ ಗುಣಮಟ್ಟ ಪರೀಕ್ಷೆಗೆ ಆಹಾರ ಸುರಕ್ಷತಾ ಇಲಾಖೆ ವಿಶೇಷ ತಂಡಗಳನ್ನು ರಚನೆ ಮಾಡಿದೆ. ಇವರಿಗೆ ಆರೋಗ್ಯ ಇಲಾಖೆಯ ಕಾರ್ಡ್‌ಗಳನ್ನು ಸಹ ಕಡ್ಡಾಯಗೊಳಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

1 hour ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

2 hours ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

3 hours ago

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ

ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…

4 hours ago

ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್: ಮೂವರು ಸಿಎಂಗಳಿಂದ ಲೋಕಾರ್ಪಣೆ

ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್‌ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…

4 hours ago

ಮಾವು ಬೆಳೆಗಾರರ ನೆರವಿಗೆ ಬಂದ ಕೇಂದ್ರ ಸರ್ಕಾರ: ತೋತಾಪುರಿಯ ಒಂದು ಕ್ವಿಂಟಲ್‌ಗೆ ₹1,750 ನಿಗದಿ

ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…

5 hours ago