ಕೇರಳ: ಶಬರಿಮಲೆ ಯಾತ್ರೆಗೆ ತೆರಳುವ ಭಕ್ತರಿಗೆ ಕೇರಳ ಸರ್ಕಾರ ಮಹತ್ವದ ಸೂಚನೆ ಕೊಟ್ಟಿದ್ದು, ಸ್ನಾನದ ವೇಳೆಯಲ್ಲಿ ಮೂಗಿನೊಳಗೆ ನೀರು ಹೋಗದಂತೆ ಎಚ್ಚರ ವಹಿಸುವಂತೆ ಹೇಳಿದೆ. ಕೇರಳದಲ್ಲಿ ಪತ್ತೆಯಾಗುತ್ತಿರುವ ಅಮೀಬಿಕ್ ಮೆನಿಂಗೋಎನ್ಸೆಫಾಲಿಟಿಸ್ ಎಂಬ ಮಿದುಳು ಜ್ವರ ಪ್ರಕರಣದ ಹಿನ್ನೆಲೆಯಲ್ಲಿ ಸರ್ಕಾರವು ಭಕ್ತರಿಗೆ ಮಹತ್ವದ ಸೂಚನೆ ನೀಡಿದೆ.
ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿರುವ ಜನರು ಔಷಧಗಳನ್ನು ತೆಗೆದುಕೊಂಡು ಬರಬೇಕು. ಒತ್ತಡ ನಿರ್ವಹಣೆಗಾಗಿ ನಡಿಗೆಯಂತಹ ಲಘು ವ್ಯಾಯಾಮ ಮಾಡಬೇಕು ಎಂದು ಸಲಹೆ ನೀಡಿದೆ.
ಎಲ್ಲರೂ ಕುದಿಸಿದ ನೀರನ್ನೇ ಕುಡಿಯಬೇಕು. ಬಯಲು ಬಹಿರ್ದೆಸೆ ನಿಷೇಧಿಸಲಾಗಿದ್ದು, ಶೌಚಾಲಯಗಳನ್ನೇ ಬಳಸಬೇಕು. ತ್ಯಾಜ್ಯಗಳನ್ನು ನಿರ್ದಿಷ್ಟ ಜಾಗದಲ್ಲೇ ಹಾಕಬೇಕು ಎಂದು ಸೂಚನೆ ನೀಡಲಾಗಿದೆ.
ಇನ್ನು ಯಾತ್ರೆಯ ವೇಳೆ ಪೂರೈಕೆಯಾಗುವ ಆಹಾರಗಳ ಗುಣಮಟ್ಟ ಪರೀಕ್ಷೆಗೆ ಆಹಾರ ಸುರಕ್ಷತಾ ಇಲಾಖೆ ವಿಶೇಷ ತಂಡಗಳನ್ನು ರಚನೆ ಮಾಡಿದೆ. ಇವರಿಗೆ ಆರೋಗ್ಯ ಇಲಾಖೆಯ ಕಾರ್ಡ್ಗಳನ್ನು ಸಹ ಕಡ್ಡಾಯಗೊಳಿಸಲಾಗಿದೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…