ಬೆಂಗಳೂರು: ಕರ್ನಾಟಕ ಸರ್ಕಾರ ಸುತ್ತೋಲೆಯೊಂದನ್ನು ಹೊರಡಿಸಿದೆ. ಸರ್ಕಾರಿ ಕಾರ್ಯಕ್ರಮ, ರಾಷ್ಟ್ರೀಯ ಹಬ್ಬಗಳು, ಶಾಲಾ-ಕಾಲೇಜುಗಳ ಕಾರ್ಯಕ್ರಮಗಳಲ್ಲಿ ಜನರ ಹಾಗೂ ಮಕ್ಕಳ ಸುರಕ್ಷತೆಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸೂಚನೆ ನೀಡಲಾಗಿದೆ.
ಶುಭಮಂಗಳ ಆರ್.ವಿ.ವಿಶೇಷಾಧಿಕಾರಿ ಮತ್ತು ಪದನಿಮಿತ್ತ ಸರ್ಕಾರದ ಅಧೀನ ಕಾರ್ಯದರ್ಶಿ(ಯೋಜನೆ) ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಈ ಕುರಿತು ಸುತ್ತೋಲೆಯನ್ನು ಹೊರಡಿಸಿದ್ದಾರೆ.
ಶಾಲಾ-ಕಾಲೇಜುಗಳಲ್ಲಿ ಮಕ್ಕಳ ಸುರಕ್ಷತೆಗೆ ಸಂಬಂಧಿಸಿದಂತೆ ಮಕ್ಕಳ ರಕ್ಷಣಾ ನೀತಿ, ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮಾರ್ಗಸೂಚಿಯನ್ವಯ ಮಕ್ಕಳ ಹಕ್ಕುಗಳು ಮತ್ತು ಮಕ್ಕಳ ಸುರಕ್ಷತೆಯ ಬಗ್ಗೆ ಅಗತ್ಯ ಕ್ರಮ ವಹಿಸಲು ಎಲ್ಲಾ ಶಾಲೆಗಳ ಮುಖ್ಯ ಶಿಕ್ಷಕರು ಮತ್ತು ಶಿಕ್ಷಕರಿಗೆ ಸೂಚನೆಗಳನ್ನು ನೀಡಲಾಗಿದೆ.
ಸೂಚನೆಗಳು ಈ ಕೆಳಕಂಡಂತಿದೆ:
* ಧ್ವಜಾರೋಹಣ ಕಂಬಕ್ಕೆ ಧ್ವಜವನ್ನು ಏರಿಸುವ ಅಥವಾ ಇಳಿಸುವ ಕಾರ್ಯಗಳಿಗೆ ಮಕ್ಕಳನ್ನು ಬಳಸಿಕೊಳ್ಳಬಾರದು.
* ಮಕ್ಕಳ ಕವಾಯತು, ಪಥಸಂಚಲನ, ಸಾಂಸ್ಕೃತಿಕ ಕಾರ್ಯಕ್ರಮದ ವೇದಿಕೆ, ಮಕ್ಕಳು ಕುಳಿತುಕೊಳ್ಳುವ ಸ್ಥಳಗಳು ಸುರಕ್ಷಿತವಾಗಿರುವ ಬಗ್ಗೆ ಕಾರ್ಯಕ್ರಮದ ಮೊದಲು ಹಾಗೂ ಆಗಿಂದಾಗ್ಗೆ ಪರಿಶೀಲಿಸಿಕೊಳ್ಳಬೇಕು
* ಮಕ್ಕಳನ್ನು ಕಾರ್ಯಕ್ರಮ, ಸ್ಪರ್ಧೆಗಳಿಗೆ ಕರೆದುಕೊಂಡು ಹೋಗುವ ಮತ್ತು ಹಿಂದಿರುಗಿ ಕರೆತರುವ ವಾಹನಗಳು ಸಮರ್ಪಕವಾಗಿರುವ ಬಗ್ಗೆ ಪರಿಶೀಲಿಸಿಕೊಳ್ಳುವುದು.
* ಕಾರ್ಯಕ್ರಮ ನಡೆಸುವ ಎಲ್ಲಾ ಸ್ಥಳಗಳಲ್ಲಿ ಅಳವಡಿಸಿರುವ ವಿದ್ಯುತ್ ತಂತಿಯಿಂದ ವಿದ್ಯುತ್ ಪ್ರವಹಿಸದಿರುವ ಬಗ್ಗೆ ಖಚಿತಪಡಿಸಿಕೊಳ್ಳುವ ಜೊತೆಗೆ ಮಕ್ಕಳು ಸೇರಿದಂತೆ ಸಾರ್ವಜನಿಕರ ಸಂಪರ್ಕಕ್ಕೆ ಬರದಂತೆ ಸೂಚನೆ ನೀಡುವುದು
* ಎಲ್ಲಾ ಕಾರ್ಯಕ್ರಮಗಳ ಆಯೋಜಕರು, ಸ್ಥಳೀಯ ಪೊಲೀಸ್, ವೈದ್ಯಕೀಯ ವ್ಯವಸ್ಥೆ, ಅಗ್ನಿಶಾಮಕ ದಳ ಹಾಗೂ ಸ್ಥಳೀಯ ಆಡಳಿತಕ್ಕೆ ಮಕ್ಕಳ ಕಾರ್ಯಕ್ರಮದ ಕುರಿತು ಕಡ್ಡಾಯವಾಗಿ ಮಾಹಿತಿ ಒದಗಿಸಿ, ಯಾವುದೇ ತುರ್ತು ಸಂದರ್ಭದಲ್ಲಿ ಪ್ರತಿಕ್ರಿಯೆ ನೀಡಲು ಸದಾ ಸನ್ನದ್ಧ ಸ್ಥಿತಿಯಲ್ಲಿರುವಂತೆ ತಿಳಿಸತಕ್ಕದ್ದು.
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…
ಭಾರತಿ ಸಜ್ಜನ್ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…