ಮಂಗಳೂರು: ಡಿಸೆಂಬರ್.9ರಿಂದ ವಿಧಾನಮಂಡಲ ಅಧಿವೇಶನ ನಡೆಯಲಿದ್ದು, ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿರುವ ಹಿನ್ನೆಲೆಯಲ್ಲಿ ಅಧಿವೇಶನವನ್ನು ಒಂದು ದಿನ ಮೊಟಕುಗೊಳಿಸಲಾಗುತ್ತದೆ ಎಂದು ಸ್ಪೀಕರ್ ಯು.ಟಿ.ಖಾದರ್ ಹೇಳಿದ್ದಾರೆ.
ಈ ಕುರಿತು ಮಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಚಳಿಗಾಲದ ಅಧಿವೇಶನವನ್ನು ಮಂಡ್ಯದಲ್ಲಿ ನಡೆಯುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕಾರಣಕ್ಕಾಗಿ ಒಂದು ದಿನ ಮೊಟಕುಗೊಳಿಸಲಾಗಿದೆ. ಡಿಸೆಂಬರ್.9ರಿಂದ 19ರವರೆಗೆ ಮಾತ್ರ ಅಧಿವೇಶನ ನಡೆಯಲಿದೆ ಎಂದು ತಿಳಿಸಿದರು.
ಈ ಮೊದಲು ಡಿಸೆಂಬರ್.9ರಿಂದ 20ರವರೆಗೆ ಅಧಿವೇಶನ ನಡೆಸಲು ತೀರ್ಮಾನ ಮಾಡಲಾಗಿತ್ತು. ಆದರೆ ಸಕ್ಕರೆ ನಾಡು ಮಂಡ್ಯದಲ್ಲಿ ಡಿಸೆಂಬರ್.20ರಿಂದ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿರುವ ಹಿನ್ನೆಲೆಯಲ್ಲಿ ಅದಕ್ಕೆ ಸಿಎಂ ಹಾಗೂ ಸಚಿವರು ಪಾಲ್ಗೊಳ್ಳಲು ಅನುಕೂಲ ಮಾಡಿಕೊಡುವಂತೆ ಈ ನಿರ್ಧಾರ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಇನ್ನು ವಿಪಕ್ಷಗಳ ಬಗ್ಗೆ ಮಾತನಾಡಿದ ಯು.ಟಿ.ಖಾದರ್ ಅವರು, ನಿಮ್ಮ ರಾಜಕೀಯ ತಿಕ್ಕಾಟ ಏನೇ ಇದ್ದರೂ ಡಿಸೆಂಬರ್.19ರವರೆಗೆ ಕಾಲಾವಕಾಶ ಇದೆ. ಅಧಿವೇಶನ ಮುಗಿದ ನಂತರವೂ ಸಮಯ ಇದೆ. ಆದ್ದರಿಂದ ಸುಗಮ ಕಲಾಪಗಳಿಗೆ ಅವಕಾಶ ನೀಡಬೇಕು ಎಂದು ಮನವಿ ಮಾಡಿದರು.
ಈ ನಡೆ ಶೋಷಿತ ಸಮುದಾಯಗಳ ಪ್ರಗತಿಗೆ ಸಹಕಾರಿ -ಟಿ.ಕೆ.ಹರೀಶ್ ಶಿಕ್ಷಣ ಕೇವಲ ವೈಯಕ್ತಿಕ ಬೆಳವಣಿಗೆಗೆ ಮಾತ್ರ ಸೀಮಿತವಾಗಿರಬಾರದು. ಅದು…
ಡಾ.ಎಂ.ಡಿ.ಉಮೇಶ್, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಮೈಸೂರು ವಿ.ವಿ ಬೆಳಗಾವಿ ಜಿಲ್ಲೆಯ ಹುದಲಿ ಗ್ರಾಮದಲ್ಲಿ ಬಾಲ ಕೃಷ್ಣ ಮತ್ತು ರಾಧಾಬಾಯಿ…
ಡಾಕ್ಟರ್ ಮೆಹತಾ ಮತ್ತು ನಾನು ಅವರ ಮಿತ್ರನ ಮನೆಗೆ ಹೋದೆವು. ಅವರು ನನ್ನ ವಿಷಯದಲ್ಲಿ ತುಂಬಾ ಕರುಣೆ ಮತ್ತು ಆದರವುಳ್ಳವರಾಗಿದ್ದರು.…
ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…
ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…