ಮಂಗಳೂರು: ಡಿಸೆಂಬರ್.9ರಿಂದ ವಿಧಾನಮಂಡಲ ಅಧಿವೇಶನ ನಡೆಯಲಿದ್ದು, ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿರುವ ಹಿನ್ನೆಲೆಯಲ್ಲಿ ಅಧಿವೇಶನವನ್ನು ಒಂದು ದಿನ ಮೊಟಕುಗೊಳಿಸಲಾಗುತ್ತದೆ ಎಂದು ಸ್ಪೀಕರ್ ಯು.ಟಿ.ಖಾದರ್ ಹೇಳಿದ್ದಾರೆ.
ಈ ಕುರಿತು ಮಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಚಳಿಗಾಲದ ಅಧಿವೇಶನವನ್ನು ಮಂಡ್ಯದಲ್ಲಿ ನಡೆಯುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕಾರಣಕ್ಕಾಗಿ ಒಂದು ದಿನ ಮೊಟಕುಗೊಳಿಸಲಾಗಿದೆ. ಡಿಸೆಂಬರ್.9ರಿಂದ 19ರವರೆಗೆ ಮಾತ್ರ ಅಧಿವೇಶನ ನಡೆಯಲಿದೆ ಎಂದು ತಿಳಿಸಿದರು.
ಈ ಮೊದಲು ಡಿಸೆಂಬರ್.9ರಿಂದ 20ರವರೆಗೆ ಅಧಿವೇಶನ ನಡೆಸಲು ತೀರ್ಮಾನ ಮಾಡಲಾಗಿತ್ತು. ಆದರೆ ಸಕ್ಕರೆ ನಾಡು ಮಂಡ್ಯದಲ್ಲಿ ಡಿಸೆಂಬರ್.20ರಿಂದ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿರುವ ಹಿನ್ನೆಲೆಯಲ್ಲಿ ಅದಕ್ಕೆ ಸಿಎಂ ಹಾಗೂ ಸಚಿವರು ಪಾಲ್ಗೊಳ್ಳಲು ಅನುಕೂಲ ಮಾಡಿಕೊಡುವಂತೆ ಈ ನಿರ್ಧಾರ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಇನ್ನು ವಿಪಕ್ಷಗಳ ಬಗ್ಗೆ ಮಾತನಾಡಿದ ಯು.ಟಿ.ಖಾದರ್ ಅವರು, ನಿಮ್ಮ ರಾಜಕೀಯ ತಿಕ್ಕಾಟ ಏನೇ ಇದ್ದರೂ ಡಿಸೆಂಬರ್.19ರವರೆಗೆ ಕಾಲಾವಕಾಶ ಇದೆ. ಅಧಿವೇಶನ ಮುಗಿದ ನಂತರವೂ ಸಮಯ ಇದೆ. ಆದ್ದರಿಂದ ಸುಗಮ ಕಲಾಪಗಳಿಗೆ ಅವಕಾಶ ನೀಡಬೇಕು ಎಂದು ಮನವಿ ಮಾಡಿದರು.
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…