ಸಕಲೇಶಪುರ : ಪತ್ನಿಯನ್ನು ಕೊಲೆಗೈದು ನಾಪತ್ತೆಯಾಗಿದ್ದಾಳೆ ಎಂದು ದೂರು ದಾಖಲಿಸಿದ್ದ ಪತಿಯನ್ನು ಪೊಲೀಸರು ಬಂಧಿಸಿರುವುದು ವರದಿಯಾಗಿದೆ.
ಸಕಲೇಶಪುರ ತಾಲೂಕಿನ ಬಾಗೆ ಗ್ರಾಮದ ಬಳಿ ಪತ್ತೆಯಾಗಿದ್ದ ಮಹಿಳೆಯ ಅಸ್ಥಿಪಂಜರ ಪ್ರಕರಣವನ್ನು ಭೇದಿಸಿರುವ ಪೊಲೀಸರು, ಮೂರು ತಿಂಗಳ ಹಿಂದೆ ಪತಿಯೇ ತನ್ನ ಪತ್ನಿಯನ್ನು ಕೊಂದು ಹೂತು ಹಾಕಿರುವುದನ್ನು ಪತ್ತೆ ಮಾಡಿದ್ದಾರೆ.
ಮೂರು ತಿಂಗಳ ಹಿಂದೆ ಶಾಂತಿವಾಸು (29) ಎಂಬ ಮಹಿಳೆ ದಿಢೀರ್ ನಾಪತ್ತೆಯಾಗಿದ್ದಳು. ಗುರುವಾರ ಮನೆಯ ಪಕ್ಕದ ಗುಂಡಿಯಲ್ಲಿ ಆಕೆಯ ಮೃತದೇಹ ಪತ್ತೆಯಾಗಿದೆ. ನಾಯಿಗಳು ಮೃತದೇಹದ ಮೂಳೆಗಳನ್ನು ಎಳೆದು ತಂದಿದ್ದು, ಆಕೆಯ ಪತಿ ಪವನ್ ಕುಮಾರನೇ ಪತ್ನಿಯನ್ನು ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ.
ಪವನ್ ಕುಮಾರ್ ಹಾಗೂ ಶಾಂತಿವಾಸು ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಇದೇ ಜಗಳ ವಿಕೋಪಕ್ಕೆ ತಿರುಗಿ ಪತ್ನಿಯ ಮೇಲೆ ಪವನ್ ಹಲ್ಲೆ ಮಾಡಿದ್ದಾನೆ ಎನ್ನಲಾಗಿದೆ. ಈ ವೇಳೆ ಪತ್ನಿ ಸಾವಿಗೀಡಾಗಿದ್ದಾಳೆ. ಬಳಿಕ ಆಕೆಯನ್ನು ಮನೆಯ ಪಕ್ಕದಲ್ಲಿ ಗುಂಡಿ ತೆಗೆದು ಹೂತು ಹಾಕಿದ ನಂತರ ಇಬ್ಬರು ಮಕ್ಕಳೊಂದಿಗೆ ಬೆಂಗಳೂರಿಗೆ ತೆರಳಿದ್ದ. ಆ ಬಳಿಕ ತನ್ನ ಪತ್ನಿ ಕಳೆದು ಹೋಗಿದ್ದಾಳೆ ಎಂದು ಪವನ್ ಹಾಗೂ ಶಾಂತಿವಾಸು ಪೋಷಕರು ಪೊಲೀಸರಿಗೆ ದೂರು ನೀಡಿದ್ದರು.
ಘಟನಾ ಸ್ಥಳಕ್ಕೆ ಸಕಲೇಶಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಈ ಬಗ್ಗೆ ಹೆಚ್ಚಿನ ತನಿಖೆಯನ್ನು ಮುಂದುವರಿಸಿದ್ದಾರೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…