ಸಕಲೇಶಪುರ : ಪತ್ನಿಯನ್ನು ಕೊಲೆಗೈದು ನಾಪತ್ತೆಯಾಗಿದ್ದಾಳೆ ಎಂದು ದೂರು ದಾಖಲಿಸಿದ್ದ ಪತಿಯನ್ನು ಪೊಲೀಸರು ಬಂಧಿಸಿರುವುದು ವರದಿಯಾಗಿದೆ.
ಸಕಲೇಶಪುರ ತಾಲೂಕಿನ ಬಾಗೆ ಗ್ರಾಮದ ಬಳಿ ಪತ್ತೆಯಾಗಿದ್ದ ಮಹಿಳೆಯ ಅಸ್ಥಿಪಂಜರ ಪ್ರಕರಣವನ್ನು ಭೇದಿಸಿರುವ ಪೊಲೀಸರು, ಮೂರು ತಿಂಗಳ ಹಿಂದೆ ಪತಿಯೇ ತನ್ನ ಪತ್ನಿಯನ್ನು ಕೊಂದು ಹೂತು ಹಾಕಿರುವುದನ್ನು ಪತ್ತೆ ಮಾಡಿದ್ದಾರೆ.
ಮೂರು ತಿಂಗಳ ಹಿಂದೆ ಶಾಂತಿವಾಸು (29) ಎಂಬ ಮಹಿಳೆ ದಿಢೀರ್ ನಾಪತ್ತೆಯಾಗಿದ್ದಳು. ಗುರುವಾರ ಮನೆಯ ಪಕ್ಕದ ಗುಂಡಿಯಲ್ಲಿ ಆಕೆಯ ಮೃತದೇಹ ಪತ್ತೆಯಾಗಿದೆ. ನಾಯಿಗಳು ಮೃತದೇಹದ ಮೂಳೆಗಳನ್ನು ಎಳೆದು ತಂದಿದ್ದು, ಆಕೆಯ ಪತಿ ಪವನ್ ಕುಮಾರನೇ ಪತ್ನಿಯನ್ನು ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ.
ಪವನ್ ಕುಮಾರ್ ಹಾಗೂ ಶಾಂತಿವಾಸು ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಇದೇ ಜಗಳ ವಿಕೋಪಕ್ಕೆ ತಿರುಗಿ ಪತ್ನಿಯ ಮೇಲೆ ಪವನ್ ಹಲ್ಲೆ ಮಾಡಿದ್ದಾನೆ ಎನ್ನಲಾಗಿದೆ. ಈ ವೇಳೆ ಪತ್ನಿ ಸಾವಿಗೀಡಾಗಿದ್ದಾಳೆ. ಬಳಿಕ ಆಕೆಯನ್ನು ಮನೆಯ ಪಕ್ಕದಲ್ಲಿ ಗುಂಡಿ ತೆಗೆದು ಹೂತು ಹಾಕಿದ ನಂತರ ಇಬ್ಬರು ಮಕ್ಕಳೊಂದಿಗೆ ಬೆಂಗಳೂರಿಗೆ ತೆರಳಿದ್ದ. ಆ ಬಳಿಕ ತನ್ನ ಪತ್ನಿ ಕಳೆದು ಹೋಗಿದ್ದಾಳೆ ಎಂದು ಪವನ್ ಹಾಗೂ ಶಾಂತಿವಾಸು ಪೋಷಕರು ಪೊಲೀಸರಿಗೆ ದೂರು ನೀಡಿದ್ದರು.
ಘಟನಾ ಸ್ಥಳಕ್ಕೆ ಸಕಲೇಶಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಈ ಬಗ್ಗೆ ಹೆಚ್ಚಿನ ತನಿಖೆಯನ್ನು ಮುಂದುವರಿಸಿದ್ದಾರೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…