ಶಿವಮೊಗ್ಗ : ಇಲ್ಲಿನ ಸಕ್ರಬೈಲು ಆನೆ ಶಿಬಿರದಲ್ಲಿ ಭಾನುಮತಿ ಎಂಬ ಹೆಣ್ಣಾನೆಯ ಬಾಲವನ್ನು ಕತ್ತರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಹಾಗೂ ಕಿರಿಯ ಕಾವಾಡಿಗರಾದ ಸುದೀಪ್ ಮತ್ತು ಮೊಹಮ್ಮದ್ ಎಂಬುವವರನ್ನು ಶಿವಮೊಗ್ಗ ವನ್ಯಜೀವಿ ವಿಭಾಗದ ಡಿಎಫ್ಓ ಪ್ರಸನ್ನ ಪಟಗಾರ್ ಅಮಾನತುಗೊಳಿಸಿದ್ದಾರೆ.
ಅ.17 ರಂದು ಭಾನುಮತಿ ಎಂಬ ಹೆಣ್ಣಾನೆಯ ಬಾಲವು ಭಾಗಶಃ ತುಂಡಾದ ರೀತಿಯಲ್ಲಿ ಪತ್ತೆಯಾಗಿತ್ತು. ಬಾಲ ತುಂಡಾದ ಬಗ್ಗೆ ಮಾಹಿತಿ ಪಡೆದ ಡಿಎಫ್ಓ ಪ್ರಸನ್ನ ಅವರು ಎಸಿಎಫ್ ನೇತೃತ್ವದಲ್ಲಿ ತನಿಖಾ ಸಮಿತಿ ರಚಿಸಿ ವರದಿ ನೀಡುವಂತೆ ಸೂಚಿಸಿದ್ದರು.
ಈ ಸಮಿತಿ ವರದಿಯ ಪ್ರಕಾರ ಆಣೆ ಬಾಲ ಭಾಗಶಃ ತುಂಡಾಗಲು ಹರಿತವಾದ ಆಯುಧಗಳನ್ನು ಬಳಸಲಾಗಿದ್ದು, ಇದರ ಹೊಣೆಗಾರಿಕೆಯನ್ನು ಮಾವುತ ಮತ್ತು ಕಾವಾಡಿಗರೇ ಹೊರಬೇಕು ಎಂದು ವರದಿ ನೀಡಲಾಗಿತ್ತು. ಈ ವರದಿಯ ಆಧಾರ ಕಾವಾಡಿಗಳಿಬ್ಬರನ್ನು ಡಿಎಫ್ಓ ಅಮಾನತು ಮಾಡಿದ್ದಾರೆ. ವಿಚಾರಣೆ ಮುಗಿಯುವ ವರೆಗೆ ಭಾನುಮತಿ ಬೇರೆಯವರ ಉಸ್ತುವಾರಿಯಲಿರಲಿದೆ ಎಂದು ತಿಳಿಸಿದರು.
ಭಾನುಮತಿ ಹೆಣ್ಣಾನೆಯು ಗರ್ಭಿಣಿಯಾಗಿದ್ದು, ನವೆಂಬರ್ 04ರಂದು ಹೆಣ್ಣು ಮರಿಗೆ ಜನ್ಮ ನೀಡಿದೆ.
ಬೆಂಗಳೂರು: ಮಾರ್ಚ್.3ರಂದು ಕೇತುಗ್ರಸ್ತ ಚಂದ್ರಗ್ರಹಣ ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ ಮಾಸದ ಹುಣ್ಣಿಮೆಯ…
ಮಡಿಕೇರಿ: ಕೊಡಗು ಜಿಲ್ಲೆಯ ನಾಪೋಕ್ಲುವಿನಲ್ಲಿ ನಡೆಯಲಿರುವ ಹಿಂದೂ ಸಂಗಮ ಕಾರ್ಯಕ್ರಮದ ಕುರಿತು ನಿನ್ನೆ ವಾಹನದಲ್ಲಿ ಪ್ರಚಾರ ಮಾಡುತ್ತಿದ್ದ ಗೌತಮ್ ಎಂಬಾತನ…
ಮೈಸೂರು: ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ಮಾರ್ಚ್.17ರವರೆಗೂ ನಡೆಯಲಿದೆ. ಮೈಸೂರು ಜಿಲ್ಲೆಯಲ್ಲಿ 35,835 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು,…
ಮೇಲುಕೋಟೆ: ಮಾ.೨೩ರಿಂದ ಏ.೩ರವರೆಗೆ ನಡೆಯುವ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿಯ ಪ್ರಖ್ಯಾತ ವೈರಮುಡಿ ಬ್ರಹ್ಮೋತ್ಸವವನ್ನು ವಿಜೃಂಭಣೆಯಿಂದ ನೆರವೇರಿಸಲು ಸಿದ್ಧತೆ ಮಾಡಲಾಗುತ್ತಿದೆ ಎಂದು…
ಮೊಬೈಲ್ ಸ್ಟೇಟಸ್ ! ಶಾಲೆಗಳಲ್ಲಿ ಮೊಬೈಲ್ ನಿಷೇಧ..? ಸರ್ಕಾರದ ಮೆಸೇಜ್ಗೆ ಲೈಕ್ ನೀಡಬಹುದು ಪೋಷಕರು ! ಆದರೆ, ಸ್ಟೂಡೆಂಟ್ಗಳು ?…
ಫೆ.೨೮ರ ಶನಿವಾರದಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯಲಿದೆ. ಎಲ್ಲಾ ಕಾಲೇಜುಗಳಲ್ಲಿ ವ್ಯವಸ್ಥಿತವಾಗಿ ಪಾಠವನ್ನು ಮುಗಿಸಿ ಮಾದರಿ ಪ್ರಶ್ನೆ ಪತ್ರಿಕೆ…