ರಾಜ್ಯ

ಸಕ್ರೆಬೈಲು ಆನೆ ಶಿಬಿರ: ಭಾನುಮತಿ ಆನೆ ಬಾಲ ಕತ್ತರಿಸಿದ ಪ್ರಕರಣ: ಕಾವಾಡಿಗರಿಬ್ಬರ ಅಮಾನತು

ಶಿವಮೊಗ್ಗ : ಇಲ್ಲಿನ ಸಕ್ರಬೈಲು ಆನೆ ಶಿಬಿರದಲ್ಲಿ ಭಾನುಮತಿ ಎಂಬ ಹೆಣ್ಣಾನೆಯ ಬಾಲವನ್ನು ಕತ್ತರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಹಾಗೂ ಕಿರಿಯ ಕಾವಾಡಿಗರಾದ ಸುದೀಪ್‌ ಮತ್ತು ಮೊಹಮ್ಮದ್‌ ಎಂಬುವವರನ್ನು ಶಿವಮೊಗ್ಗ ವನ್ಯಜೀವಿ ವಿಭಾಗದ ಡಿಎಫ್‌ಓ ಪ್ರಸನ್ನ ಪಟಗಾರ್‌ ಅಮಾನತುಗೊಳಿಸಿದ್ದಾರೆ.

ಅ.17 ರಂದು ಭಾನುಮತಿ ಎಂಬ ಹೆಣ್ಣಾನೆಯ ಬಾಲವು ಭಾಗಶಃ ತುಂಡಾದ ರೀತಿಯಲ್ಲಿ ಪತ್ತೆಯಾಗಿತ್ತು. ಬಾಲ ತುಂಡಾದ ಬಗ್ಗೆ ಮಾಹಿತಿ ಪಡೆದ ಡಿಎಫ್‌ಓ ಪ್ರಸನ್ನ ಅವರು ಎಸಿಎಫ್‌ ನೇತೃತ್ವದಲ್ಲಿ ತನಿಖಾ ಸಮಿತಿ ರಚಿಸಿ ವರದಿ ನೀಡುವಂತೆ ಸೂಚಿಸಿದ್ದರು.

ಈ ಸಮಿತಿ ವರದಿಯ ಪ್ರಕಾರ ಆಣೆ ಬಾಲ ಭಾಗಶಃ ತುಂಡಾಗಲು ಹರಿತವಾದ ಆಯುಧಗಳನ್ನು ಬಳಸಲಾಗಿದ್ದು, ಇದರ ಹೊಣೆಗಾರಿಕೆಯನ್ನು ಮಾವುತ ಮತ್ತು ಕಾವಾಡಿಗರೇ ಹೊರಬೇಕು ಎಂದು ವರದಿ ನೀಡಲಾಗಿತ್ತು. ಈ ವರದಿಯ ಆಧಾರ ಕಾವಾಡಿಗಳಿಬ್ಬರನ್ನು ಡಿಎಫ್‌ಓ ಅಮಾನತು ಮಾಡಿದ್ದಾರೆ. ವಿಚಾರಣೆ ಮುಗಿಯುವ ವರೆಗೆ ಭಾನುಮತಿ ಬೇರೆಯವರ ಉಸ್ತುವಾರಿಯಲಿರಲಿದೆ ಎಂದು ತಿಳಿಸಿದರು.

ಭಾನುಮತಿ ಹೆಣ್ಣಾನೆಯು ಗರ್ಭಿಣಿಯಾಗಿದ್ದು, ನವೆಂಬರ್‌ 04ರಂದು ಹೆಣ್ಣು ಮರಿಗೆ ಜನ್ಮ ನೀಡಿದೆ.

andolanait

Recent Posts

ಮಹಾಪಂಚ್‌ ಕಾರ್ಟೂನ್‌ | ಮೇ.24 ಭಾನುವಾರ

ಮಹಾಪಂಚ್‌ ಕಾರ್ಟೂನ್‌ | ಮೇ.24 ಭಾನುವಾರ

41 mins ago

‘ಎಬೋಲಾ ಆತಂಕ ಬೇಡ’ ; ಅಗತ್ಯ ಮುನ್ನೆಚ್ಚರಿಕೆ ವಹಿಸಿದ್ದೇವೆ : ಆರೋಗ್ಯ ಸಚಿವ

ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…

12 hours ago

ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…

14 hours ago

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

15 hours ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

16 hours ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

18 hours ago