ರಾಜ್ಯ

ಸಕ್ರೆಬೈಲು ಆನೆ ಶಿಬಿರ: ಭಾನುಮತಿ ಆನೆ ಬಾಲ ಕತ್ತರಿಸಿದ ಪ್ರಕರಣ: ಕಾವಾಡಿಗರಿಬ್ಬರ ಅಮಾನತು

ಶಿವಮೊಗ್ಗ : ಇಲ್ಲಿನ ಸಕ್ರಬೈಲು ಆನೆ ಶಿಬಿರದಲ್ಲಿ ಭಾನುಮತಿ ಎಂಬ ಹೆಣ್ಣಾನೆಯ ಬಾಲವನ್ನು ಕತ್ತರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಹಾಗೂ ಕಿರಿಯ ಕಾವಾಡಿಗರಾದ ಸುದೀಪ್‌ ಮತ್ತು ಮೊಹಮ್ಮದ್‌ ಎಂಬುವವರನ್ನು ಶಿವಮೊಗ್ಗ ವನ್ಯಜೀವಿ ವಿಭಾಗದ ಡಿಎಫ್‌ಓ ಪ್ರಸನ್ನ ಪಟಗಾರ್‌ ಅಮಾನತುಗೊಳಿಸಿದ್ದಾರೆ.

ಅ.17 ರಂದು ಭಾನುಮತಿ ಎಂಬ ಹೆಣ್ಣಾನೆಯ ಬಾಲವು ಭಾಗಶಃ ತುಂಡಾದ ರೀತಿಯಲ್ಲಿ ಪತ್ತೆಯಾಗಿತ್ತು. ಬಾಲ ತುಂಡಾದ ಬಗ್ಗೆ ಮಾಹಿತಿ ಪಡೆದ ಡಿಎಫ್‌ಓ ಪ್ರಸನ್ನ ಅವರು ಎಸಿಎಫ್‌ ನೇತೃತ್ವದಲ್ಲಿ ತನಿಖಾ ಸಮಿತಿ ರಚಿಸಿ ವರದಿ ನೀಡುವಂತೆ ಸೂಚಿಸಿದ್ದರು.

ಈ ಸಮಿತಿ ವರದಿಯ ಪ್ರಕಾರ ಆಣೆ ಬಾಲ ಭಾಗಶಃ ತುಂಡಾಗಲು ಹರಿತವಾದ ಆಯುಧಗಳನ್ನು ಬಳಸಲಾಗಿದ್ದು, ಇದರ ಹೊಣೆಗಾರಿಕೆಯನ್ನು ಮಾವುತ ಮತ್ತು ಕಾವಾಡಿಗರೇ ಹೊರಬೇಕು ಎಂದು ವರದಿ ನೀಡಲಾಗಿತ್ತು. ಈ ವರದಿಯ ಆಧಾರ ಕಾವಾಡಿಗಳಿಬ್ಬರನ್ನು ಡಿಎಫ್‌ಓ ಅಮಾನತು ಮಾಡಿದ್ದಾರೆ. ವಿಚಾರಣೆ ಮುಗಿಯುವ ವರೆಗೆ ಭಾನುಮತಿ ಬೇರೆಯವರ ಉಸ್ತುವಾರಿಯಲಿರಲಿದೆ ಎಂದು ತಿಳಿಸಿದರು.

ಭಾನುಮತಿ ಹೆಣ್ಣಾನೆಯು ಗರ್ಭಿಣಿಯಾಗಿದ್ದು, ನವೆಂಬರ್‌ 04ರಂದು ಹೆಣ್ಣು ಮರಿಗೆ ಜನ್ಮ ನೀಡಿದೆ.

andolanait

Recent Posts

ಹೇಮಾವತಿ ನದಿ ಹಿನ್ನೀರಿನಲ್ಲಿ ಕಣ್ಮರೆಯಾಗಿದ್ದ ಇಬ್ಬರ ಮೃತದೇಹ ಪತ್ತೆ

ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…

49 mins ago

ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ: ಹಾರ್ಮುಜ್‌ ಜಲಸಂಧಿ ಮುಚ್ಚಿದ ಇರಾನ್‌

ಟೆಹರಾನ್:‌ ಹಾರ್ಮುಜ್‌ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್‌ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…

1 hour ago

ರಾಜ್ಯದಲ್ಲಿ ನೈರುತ್ಯ ಮುಂಗಾರು ಮತ್ತೆ ದುರ್ಬಲ: ತೀವ್ರಗೊಂಡ ಬರದ ಛಾಯೆ

ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…

1 hour ago

ಕಣಿಯನಹುಂಡಿ ತೋಟದ ಮನೆಯಲ್ಲಿ ನೆರವೇರಲಿದೆ ಎಸ್‌.ಜಾನಕಿ ಅವರ ಅಂತ್ಯಕ್ರಿಯೆ

ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…

3 hours ago

ಜಾನಕಿ ಅಮ್ಮ ಮೊದಲು, ಕೊನೆಯ ಹಾಡು ಹಾಡಿದ್ದು, ಗಾಯನ ನಿಲ್ಲಿಸಿದ್ದು ಮೈಸೂರಿನಲ್ಲೇ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಜೀವಮಾನದ ಮೊದಲ ಸಾರ್ವಜನಿಕ ಗಾಯನ ಕಾರ್ಯಕ್ರಮ ಮೈಸೂರಿನಿಂದಲೇ ಆರಂಭವಾಗಿತ್ತು. ಅಚ್ಚರಿಯೆಂದರೆ ಅವರ…

4 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಎಸ್‌ಐಆರ್ : ಕರ್ನಾಟಕದ ಕ್ರಮ ಬಿಜೆಪಿಗೆ ಕಹಿ ಗುಳಿಗೆ !

ಕಳೆದ ಒಂದು ವರ್ಷದಿಂದ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆಯದೇ ಸದ್ದು. ಇದೇನು ಹೊಸ ಬೆಳವಣಿಗೆಯಲ್ಲ. ಇದುವರೆಗೆ ಚುನಾವಣಾ ಆಯೋಗ ದೇಶದಾದ್ಯಂತ…

4 hours ago