Categories: ರಾಜ್ಯ

ಬೆಂಗಳೂರಿನ ಎಲೆಕ್ಟ್ರಿಕ್‌ ಸ್ಕೂಟರ್‌ ಶೋ ರೂಂನಲ್ಲಿ ಅಗ್ನಿ ದುರಂತ; ಓರ್ವ ಯುವತಿಯ ಸಜೀವ ದಹನ

ಬೆಂಗಳೂರು: ನಗರದ ರಾಜ್‌ಕುಮಾರ್‌ ರಸ್ತೆಯಲ್ಲಿರುವ ಮೈ ಇವಿ ಎಲೆಕ್ಟ್ರಿಕ್‌ ಸ್ಕೂಟರ್‌ ಶೋ ರೂನಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ಓರ್ವ ಯುವತಿ ಅಗ್ನಿ ಅವಘಡದಲ್ಲಿ ಸಜೀವ ದಹನವಾಗಿದ್ದಾರೆ.

ನಗರದ ಸ್ಕೂಟರ್‌ ಶೋ ರೂಂನಲ್ಲಿ ಇಂದು(ನ.19) ಸುಮಾರು ಸಂಜೆ 5.30 ಗಂಟೆಯ ವೇಳೆಗೆ ಶಾರ್ಟ್‌ ಸರ್ಕ್ಯೂಟ್‌ ಉಂಟಾಗಿ ಅಗ್ನಿ ದುರಂತ ಸಂಭವಿಸಿದ್ದು, ನೋಡು ನೋಡುತ್ತಿದ್ದಂತೆಯೇ ಇಡೀ ಶೋ ರೂಂಗೆ ಬೆಂಕಿ ಆವರಿಸಿ ಧಗಧಗನೆ ಉರಿದಿದೆ. ಈ ಘಟನೆಯಲ್ಲಿ ಸೇಲ್ಸ್‌ ಗರ್ಲ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಯುವತಿ ಪ್ರಿಯಾ(20) ಎಂಬುವವರು ಶೋ ರೂಂ ಒಳಗೆಯೇ ಸಿಲುಕಿಕೊಂಡಿದ್ದು, ಹೊರ ಬರಲು ಆಗದೇ ಭೀಕರ ಅಗ್ನಿ ಜ್ವಾಲೆಗೆ ಬಲಿಯಾಗಿ ಸಜೀವ ದಹನವಾಗಿದ್ದಾರೆ.

ಇನ್ನು ಸುಟ್ಟು ಕರಕಲಾಗಿದ್ದ ಮೃತದೇಹವನ್ನು ಅಗ್ನಿಶಾಮಕ ಸಿಬ್ಬಂದಿಯವರು ಹೊರತೆಗೆದಿದ್ದು, ಬೆಂಕಿಯನ್ನು ಆರಿಸಲು ಹರಸಾಹಸ ಮಾಡಿದ್ದಾರೆ. ಅಲ್ಲದೇ ಈ ಶೋ ರೂಂನಲ್ಲಿದ್ದ 45 ಎಲೆಕ್ಟ್ರಿಕ್‌ ಸ್ಕೂಟರ್‌ಗಳು ಬೆಂಕಿಗೆ ಆಹುತಿಯಾಗಿವೆ. ಬಳಿಕ ಘಟನೆ ನಡೆದ ಸ್ಥಳಕ್ಕೆ ರಾಜಾಜಿನಗರ ಠಾಣೆ ಪೊಲೀಸರು ಭೇಟಿ ನೀಡಿ ಸ್ಥಳವನ್ನು ಪರಿಶೀಲಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

1 hour ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

1 hour ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

1 hour ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

1 hour ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

2 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

2 hours ago