ರಾಜ್ಯ

ಕೊನೆಗೂ ವಿಚಾರಣೆಗೆ ಹಾಜರಾದ ಸಮೀರ್ : ಮೂವರು ವಕೀಲರು ಸಾಥ್

ಬೆಳ್ತಂಗಡಿ : ಧರ್ಮಸ್ಥಳದ ಧರ್ಮಾಧಿಕಾರಿಗಳ ಕುಟುಂಬದ ವಿರುದ್ದ ಯೂಟ್ಯೂಬ್ ಮೂಲಕ ಅಪಪ್ರಚಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್ ಸಮೀರ್ ಎಂ.ಡಿ. ಕೊನೆಗೂ ಪೊಲೀಸರ ವಿಚಾರಣೆಗೆ ಹಾಜರಾಗಿದ್ದಾರೆ.

ಬೆಳ್ತಂಗಡಿ ಠಾಣೆ ಪೊಲೀಸರ ಮುಂದೆ ಭಾನುವಾರ ಎಂ.ಡಿ.ಸಮೀರ್, ತಮ್ಮ ಮೂವರು ವಕೀಲರೊಂದಿಗೆ ವಿಚಾರಣೆಗೆ ಹಾಜರಾದರು. ಸಮೀರ್ ವಿರುದ್ದ ಬೆಳ್ತಗಂಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆದರೆ ಬಂಧನಕ್ಕೂ ಮೊದಲು ನಿರೀಕ್ಷಣಾ ಜಾಮೀನು ಪಡೆದಿದ್ದ ಸಮೀರ್‌ಗೆ ಎರಡು ದಿನದಲ್ಲಿ ವಿಚಾರಣೆಗೆ ಹಾಜರಾಗಲು ನ್ಯಾಯಾಲಯ ಸೂಚಿಸಿತ್ತು. ಹೀಗಾಗಿ ಸಮೀರ್ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.
ಬೆಳ್ತಗಂಡಿ ಪೊಲೀಸರು ಸಮೀರ್‌ಗೆ ಮೂರು ಬಾರಿ ನೋಟಿಸ್ ನೀಡಿದ್ದರು. ಬಂಧನ ಭೀತಿಯಲ್ಲಿದ್ದ ಸಮೀರ್ ಮಂಗಳೂರು ನ್ಯಾಯಾಲಯದ ಮೂಲಕ ನಿರೀಕ್ಷಣಾ ಜಾಮೀನು ಪಡೆದಿದ್ದರು. ಹೀಗಾಗಿ ಪೊಲೀಸರು ಬಂಧನ ಕಾರ್ಯಾಚರಣೆ ನಿಲ್ಲಿಸಿದ್ದರು. ನ್ಯಾಯಾಲಯ ನೀಡಿದ ಗಡುವು ಭಾನುವಾರ ಅಂತ್ಯಗೊಳ್ಳುತ್ತಿದ್ದಂತೆ ಸಮೀರ್ ಬೆಳ್ತಂಗಡಿ ಪೊಲೀಸರ ಮುಂದೆ ಹಾಜರಾದರು.

ತನಿಖಾಧಿಕಾರಿ ಕೆ.ನಾಗೇಶ್ ವಿಚಾರಣೆ
ತನಿಖಾಧಿಕಾರಿ ಕೆ.ನಾಗೇಶ್ ವಿಚಾರಣೆ ನಡೆಸುತ್ತಿದ್ದು, ಸಮೀರ್ ಬೆಳ್ತಂಗಡಿ ಠಾಣೆಯಲ್ಲೇ ವಿಚಾರಣೆ ನಡೆದಿದೆ ಎನ್ನಲಾಗಿದೆ. ಧರ್ಮಸ್ಥಳದಲ್ಲಿ ಭದ್ರತೆ ಸಮಸ್ಯೆ ಕಾಡಲಿದೆ ಎಂದು ನಿರೀಕ್ಷಣಾ ಜಾಮೀನು ಅರ್ಜಿಯಲ್ಲಿ ಉಲ್ಲೇಖಿಸಿದ್ದರು. ಹೀಗಾಗಿ ಧರ್ಮಸ್ಥಳ ಠಾಣೆ ಬದಲು ಬೆಳ್ತಂಗಡಿ ಠಾಣೆಯಲ್ಲಿ ವಿಚಾರಣೆ ನಡೆಯುತ್ತಿದೆ.

ಬೆಳಿಗ್ಗೆ ೧೦.೩೦ರ ವೇಳೆಗೆ ವಿಚಾರಣೆಗೆ ಬರುವುದಾಗಿ ಹೇಳಿದ್ದ ಸಮೀರ್ ವಕೀಲರೊಂದಿಗೆ ಮಧ್ಯಾಹ್ನ ೧ ಗಂಟೆ ಹೊತ್ತಿಗೆ ಕೆಲ ದಾಖಲೆ ಪತ್ರಗಳನ್ನು ಹಿಡಿದು ಬೆಳ್ತಗಂಡಿ ಪೊಲೀಸ್ ಠಾಣೆಗೆ ಹಾಜರಾದರು.

ಏನಿದು ಪ್ರಕರಣ?
ಧರ್ಮಸ್ಥಳ ದೇಗುಲ ವಿರುದ್ಧ ಅಪಪ್ರಚಾರ ಆರೋಪದಲ್ಲಿ ‘ದೂತ’ ಸಮೀರ್ ಯೂಟ್ಯೂಬ್ ವಾಹಿನಿಯ ಸಮೀರ್ ತಮ್ಮ ವಿಡಿಯೋದಲ್ಲಿ ದಂಗೆ ಏಳುವಂತೆ ಜನರಿಗೆ ಪ್ರಚೋದಿಸಿದ್ದರು. ಈ ಹಿನ್ನೆಲೆಯಲ್ಲಿ ಧರ್ಮಸ್ಥಳ ಠಾಣೆಯಲ್ಲಿ ದೊಂಬಿ, ಪ್ರಚೋದನೆ ಸೇರಿದಂತೆ ಹಲವು ಪ್ರಕರಣಗಳ ಅಡಿಯಲ್ಲಿ ಕೇಸ್‌ಗಳು ದಾಖಲಾಗಿತ್ತು. ಈ ಪ್ರಕರಣದಲ್ಲಿ ಜಾಮೀನು ನೀಡಿದ್ದ ನ್ಯಾಯಾಲಯ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು.

ಆಂದೋಲನ ಡೆಸ್ಕ್

Recent Posts

ಇರಾನ್ ಮಹಿಳಾ ಫುಟ್ಬಾಲ್ ತಂಡಕ್ಕೆ ಹೆಚ್ಚುತ್ತಿರುವ ಭಯ ; ಆಸ್ಟ್ರೇಲಿಯಾದಲ್ಲಿ ಆಶ್ರಯಕ್ಕೆ ಹೆಚ್ಚುತ್ತಿರುವ ಕರೆ!

ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) :  ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…

58 seconds ago

ಜಾಗತಿಕ ತೈಲ ಬೆಲೆಗಳಲ್ಲಿ ಭಾರೀ ಏರಿಕೆ ; ಬ್ಯಾರೆಲ್‌ಗೆ 120 ಡಾಲರ್ ಗಡಿ ದಾಟಿದ ತೈಲ ಬೆಲೆ

ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್‌ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…

31 mins ago

ಮಧ್ಯಪ್ರಾಚ್ಯ ಸಂಘರ್ಷ | ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ತೆರಳುತಿದ್ದ ಇಂಡಿಗೊ ವಿಮಾನ ಯು-ಟರ್ನ್‌

ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ಹೋಗುತಿದ್ದ ಇಂಡಿಗೊ…

2 hours ago

ಎಂಡಿಎ ಬಜೆಟ್‌ | ಮೈಸೂರು ಅಭಿವೃದ್ಧಿಗೆ ಒತ್ತು ; 799.90 ಕೋಟಿ ರೂ. ಸಂಪನ್ಮೂಲ ನಿರೀಕ್ಷೆ

ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್‌ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…

3 hours ago

ಮೈಸೂರು | 24 ಅಪರಾಧ ಪ್ರಕರಣ ಭೇಧಿಸಿದ ಪೊಲೀಸರು ; 20ಕ್ಕೂ ಹೆಚ್ಚು ಆರೋಪಿಗಳು ವಶಕ್ಕೆ

ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…

3 hours ago

ʻಪಂಚ ಗ್ಯಾರಂಟಿʼಯಿಂದ ಮಹಿಳಾ ಸಬಲೀಕರಣ ಸಾಧ್ಯ : ಅರುಣ್ ಕುಮಾರ್

ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…

4 hours ago