ರಾಜ್ಯ

ಕೊನೆಗೂ ವಿಚಾರಣೆಗೆ ಹಾಜರಾದ ಸಮೀರ್ : ಮೂವರು ವಕೀಲರು ಸಾಥ್

ಬೆಳ್ತಂಗಡಿ : ಧರ್ಮಸ್ಥಳದ ಧರ್ಮಾಧಿಕಾರಿಗಳ ಕುಟುಂಬದ ವಿರುದ್ದ ಯೂಟ್ಯೂಬ್ ಮೂಲಕ ಅಪಪ್ರಚಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್ ಸಮೀರ್ ಎಂ.ಡಿ. ಕೊನೆಗೂ ಪೊಲೀಸರ ವಿಚಾರಣೆಗೆ ಹಾಜರಾಗಿದ್ದಾರೆ.

ಬೆಳ್ತಂಗಡಿ ಠಾಣೆ ಪೊಲೀಸರ ಮುಂದೆ ಭಾನುವಾರ ಎಂ.ಡಿ.ಸಮೀರ್, ತಮ್ಮ ಮೂವರು ವಕೀಲರೊಂದಿಗೆ ವಿಚಾರಣೆಗೆ ಹಾಜರಾದರು. ಸಮೀರ್ ವಿರುದ್ದ ಬೆಳ್ತಗಂಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆದರೆ ಬಂಧನಕ್ಕೂ ಮೊದಲು ನಿರೀಕ್ಷಣಾ ಜಾಮೀನು ಪಡೆದಿದ್ದ ಸಮೀರ್‌ಗೆ ಎರಡು ದಿನದಲ್ಲಿ ವಿಚಾರಣೆಗೆ ಹಾಜರಾಗಲು ನ್ಯಾಯಾಲಯ ಸೂಚಿಸಿತ್ತು. ಹೀಗಾಗಿ ಸಮೀರ್ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.
ಬೆಳ್ತಗಂಡಿ ಪೊಲೀಸರು ಸಮೀರ್‌ಗೆ ಮೂರು ಬಾರಿ ನೋಟಿಸ್ ನೀಡಿದ್ದರು. ಬಂಧನ ಭೀತಿಯಲ್ಲಿದ್ದ ಸಮೀರ್ ಮಂಗಳೂರು ನ್ಯಾಯಾಲಯದ ಮೂಲಕ ನಿರೀಕ್ಷಣಾ ಜಾಮೀನು ಪಡೆದಿದ್ದರು. ಹೀಗಾಗಿ ಪೊಲೀಸರು ಬಂಧನ ಕಾರ್ಯಾಚರಣೆ ನಿಲ್ಲಿಸಿದ್ದರು. ನ್ಯಾಯಾಲಯ ನೀಡಿದ ಗಡುವು ಭಾನುವಾರ ಅಂತ್ಯಗೊಳ್ಳುತ್ತಿದ್ದಂತೆ ಸಮೀರ್ ಬೆಳ್ತಂಗಡಿ ಪೊಲೀಸರ ಮುಂದೆ ಹಾಜರಾದರು.

ತನಿಖಾಧಿಕಾರಿ ಕೆ.ನಾಗೇಶ್ ವಿಚಾರಣೆ
ತನಿಖಾಧಿಕಾರಿ ಕೆ.ನಾಗೇಶ್ ವಿಚಾರಣೆ ನಡೆಸುತ್ತಿದ್ದು, ಸಮೀರ್ ಬೆಳ್ತಂಗಡಿ ಠಾಣೆಯಲ್ಲೇ ವಿಚಾರಣೆ ನಡೆದಿದೆ ಎನ್ನಲಾಗಿದೆ. ಧರ್ಮಸ್ಥಳದಲ್ಲಿ ಭದ್ರತೆ ಸಮಸ್ಯೆ ಕಾಡಲಿದೆ ಎಂದು ನಿರೀಕ್ಷಣಾ ಜಾಮೀನು ಅರ್ಜಿಯಲ್ಲಿ ಉಲ್ಲೇಖಿಸಿದ್ದರು. ಹೀಗಾಗಿ ಧರ್ಮಸ್ಥಳ ಠಾಣೆ ಬದಲು ಬೆಳ್ತಂಗಡಿ ಠಾಣೆಯಲ್ಲಿ ವಿಚಾರಣೆ ನಡೆಯುತ್ತಿದೆ.

ಬೆಳಿಗ್ಗೆ ೧೦.೩೦ರ ವೇಳೆಗೆ ವಿಚಾರಣೆಗೆ ಬರುವುದಾಗಿ ಹೇಳಿದ್ದ ಸಮೀರ್ ವಕೀಲರೊಂದಿಗೆ ಮಧ್ಯಾಹ್ನ ೧ ಗಂಟೆ ಹೊತ್ತಿಗೆ ಕೆಲ ದಾಖಲೆ ಪತ್ರಗಳನ್ನು ಹಿಡಿದು ಬೆಳ್ತಗಂಡಿ ಪೊಲೀಸ್ ಠಾಣೆಗೆ ಹಾಜರಾದರು.

ಏನಿದು ಪ್ರಕರಣ?
ಧರ್ಮಸ್ಥಳ ದೇಗುಲ ವಿರುದ್ಧ ಅಪಪ್ರಚಾರ ಆರೋಪದಲ್ಲಿ ‘ದೂತ’ ಸಮೀರ್ ಯೂಟ್ಯೂಬ್ ವಾಹಿನಿಯ ಸಮೀರ್ ತಮ್ಮ ವಿಡಿಯೋದಲ್ಲಿ ದಂಗೆ ಏಳುವಂತೆ ಜನರಿಗೆ ಪ್ರಚೋದಿಸಿದ್ದರು. ಈ ಹಿನ್ನೆಲೆಯಲ್ಲಿ ಧರ್ಮಸ್ಥಳ ಠಾಣೆಯಲ್ಲಿ ದೊಂಬಿ, ಪ್ರಚೋದನೆ ಸೇರಿದಂತೆ ಹಲವು ಪ್ರಕರಣಗಳ ಅಡಿಯಲ್ಲಿ ಕೇಸ್‌ಗಳು ದಾಖಲಾಗಿತ್ತು. ಈ ಪ್ರಕರಣದಲ್ಲಿ ಜಾಮೀನು ನೀಡಿದ್ದ ನ್ಯಾಯಾಲಯ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

2 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

2 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

2 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

2 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

2 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

2 hours ago