sameer
ಬೆಳ್ತಂಗಡಿ : ಧರ್ಮಸ್ಥಳದ ಧರ್ಮಾಧಿಕಾರಿಗಳ ಕುಟುಂಬದ ವಿರುದ್ದ ಯೂಟ್ಯೂಬ್ ಮೂಲಕ ಅಪಪ್ರಚಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್ ಸಮೀರ್ ಎಂ.ಡಿ. ಕೊನೆಗೂ ಪೊಲೀಸರ ವಿಚಾರಣೆಗೆ ಹಾಜರಾಗಿದ್ದಾರೆ.
ಬೆಳ್ತಂಗಡಿ ಠಾಣೆ ಪೊಲೀಸರ ಮುಂದೆ ಭಾನುವಾರ ಎಂ.ಡಿ.ಸಮೀರ್, ತಮ್ಮ ಮೂವರು ವಕೀಲರೊಂದಿಗೆ ವಿಚಾರಣೆಗೆ ಹಾಜರಾದರು. ಸಮೀರ್ ವಿರುದ್ದ ಬೆಳ್ತಗಂಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆದರೆ ಬಂಧನಕ್ಕೂ ಮೊದಲು ನಿರೀಕ್ಷಣಾ ಜಾಮೀನು ಪಡೆದಿದ್ದ ಸಮೀರ್ಗೆ ಎರಡು ದಿನದಲ್ಲಿ ವಿಚಾರಣೆಗೆ ಹಾಜರಾಗಲು ನ್ಯಾಯಾಲಯ ಸೂಚಿಸಿತ್ತು. ಹೀಗಾಗಿ ಸಮೀರ್ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.
ಬೆಳ್ತಗಂಡಿ ಪೊಲೀಸರು ಸಮೀರ್ಗೆ ಮೂರು ಬಾರಿ ನೋಟಿಸ್ ನೀಡಿದ್ದರು. ಬಂಧನ ಭೀತಿಯಲ್ಲಿದ್ದ ಸಮೀರ್ ಮಂಗಳೂರು ನ್ಯಾಯಾಲಯದ ಮೂಲಕ ನಿರೀಕ್ಷಣಾ ಜಾಮೀನು ಪಡೆದಿದ್ದರು. ಹೀಗಾಗಿ ಪೊಲೀಸರು ಬಂಧನ ಕಾರ್ಯಾಚರಣೆ ನಿಲ್ಲಿಸಿದ್ದರು. ನ್ಯಾಯಾಲಯ ನೀಡಿದ ಗಡುವು ಭಾನುವಾರ ಅಂತ್ಯಗೊಳ್ಳುತ್ತಿದ್ದಂತೆ ಸಮೀರ್ ಬೆಳ್ತಂಗಡಿ ಪೊಲೀಸರ ಮುಂದೆ ಹಾಜರಾದರು.
ತನಿಖಾಧಿಕಾರಿ ಕೆ.ನಾಗೇಶ್ ವಿಚಾರಣೆ
ತನಿಖಾಧಿಕಾರಿ ಕೆ.ನಾಗೇಶ್ ವಿಚಾರಣೆ ನಡೆಸುತ್ತಿದ್ದು, ಸಮೀರ್ ಬೆಳ್ತಂಗಡಿ ಠಾಣೆಯಲ್ಲೇ ವಿಚಾರಣೆ ನಡೆದಿದೆ ಎನ್ನಲಾಗಿದೆ. ಧರ್ಮಸ್ಥಳದಲ್ಲಿ ಭದ್ರತೆ ಸಮಸ್ಯೆ ಕಾಡಲಿದೆ ಎಂದು ನಿರೀಕ್ಷಣಾ ಜಾಮೀನು ಅರ್ಜಿಯಲ್ಲಿ ಉಲ್ಲೇಖಿಸಿದ್ದರು. ಹೀಗಾಗಿ ಧರ್ಮಸ್ಥಳ ಠಾಣೆ ಬದಲು ಬೆಳ್ತಂಗಡಿ ಠಾಣೆಯಲ್ಲಿ ವಿಚಾರಣೆ ನಡೆಯುತ್ತಿದೆ.
ಬೆಳಿಗ್ಗೆ ೧೦.೩೦ರ ವೇಳೆಗೆ ವಿಚಾರಣೆಗೆ ಬರುವುದಾಗಿ ಹೇಳಿದ್ದ ಸಮೀರ್ ವಕೀಲರೊಂದಿಗೆ ಮಧ್ಯಾಹ್ನ ೧ ಗಂಟೆ ಹೊತ್ತಿಗೆ ಕೆಲ ದಾಖಲೆ ಪತ್ರಗಳನ್ನು ಹಿಡಿದು ಬೆಳ್ತಗಂಡಿ ಪೊಲೀಸ್ ಠಾಣೆಗೆ ಹಾಜರಾದರು.
ಏನಿದು ಪ್ರಕರಣ?
ಧರ್ಮಸ್ಥಳ ದೇಗುಲ ವಿರುದ್ಧ ಅಪಪ್ರಚಾರ ಆರೋಪದಲ್ಲಿ ‘ದೂತ’ ಸಮೀರ್ ಯೂಟ್ಯೂಬ್ ವಾಹಿನಿಯ ಸಮೀರ್ ತಮ್ಮ ವಿಡಿಯೋದಲ್ಲಿ ದಂಗೆ ಏಳುವಂತೆ ಜನರಿಗೆ ಪ್ರಚೋದಿಸಿದ್ದರು. ಈ ಹಿನ್ನೆಲೆಯಲ್ಲಿ ಧರ್ಮಸ್ಥಳ ಠಾಣೆಯಲ್ಲಿ ದೊಂಬಿ, ಪ್ರಚೋದನೆ ಸೇರಿದಂತೆ ಹಲವು ಪ್ರಕರಣಗಳ ಅಡಿಯಲ್ಲಿ ಕೇಸ್ಗಳು ದಾಖಲಾಗಿತ್ತು. ಈ ಪ್ರಕರಣದಲ್ಲಿ ಜಾಮೀನು ನೀಡಿದ್ದ ನ್ಯಾಯಾಲಯ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…