ಬೆಂಗಳೂರು: ಸ್ಯಾಂಡಲ್ವುಡ್ನ ಖ್ಯಾತ ಖಳನಟ ಹರೀಶ್ ರಾಯ್ ಅವರಿಂದು ನಿಧನರಾಗಿದ್ದಾರೆ. ಅವರಿಗೆ 55 ವರ್ಷ ವಯಸ್ಸಾಗಿತ್ತು.
ಕ್ಯಾನ್ಸರ್ ಖಾಯಿಲೆಗೆ ತುತ್ತಾಗಿದ್ದ ಖಳನಟ ಹರೀಶ್ ರಾಯ್ ಅವರು ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ.
ಇದನ್ನು ಓದಿ: ಸಂಸದ ಯದುವೀರ್ ಒಡೆಯರ್ ಅವರ ಅಜ್ಜ ಮದನ್ ಗೋಪಾಲ್ ರಾಜ್ ಅರಸ್ ನಿಧನ
ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ್ ರಾಯ್ ಅವರು ಸುಮಾರು ಎರಡು ದಶಕಗಳಿಂದ ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿದ್ದರು.
ಶಿವರಾಜ್ ಕುಮಾರ್ ಅಭಿನಯದ ಓಂ ಚಿತ್ರದಲ್ಲಿನ ರಾಯ್ ಪಾತ್ರದಿಂದ ಗಮನ ಸೆಳೆದಿದ್ದ ಅವರು, ಸಾಕಷ್ಟು ಚಿತ್ರಗಳಲ್ಲಿ ಖಳನಟರಾಗಿ, ಪೋಷಕ ನಟರಾಗಿ ಕಾರ್ಯ ನಿರ್ವಹಿಸಿದ್ದಾರೆ.
ಸಂಜು ವೆಡ್ಸ್ ಗೀತಾ, ಸ್ವಯಂವರ, ಭೂಗತ, ನನ್ನ ಕನಸಿನ ಹೂವೆ, ನಲ್ಲ, ಜೋಡಿಹಕ್ಕಿ, ತಾಯವ್ವ, ಓಂ, ಕೆಜಿಎಫ್ ಚಾಪ್ಟರ್ 1 ಹಾಗೂ ಕೆಜಿಎಫ್ ಚಾಪ್ಟರ್2ನಲ್ಲಿ ಅಭಿನಯಿಸಿದ್ದಾರೆ.
ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…
ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…
ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…
ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…
ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…
ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…