ರಾಜ್ಯ

ಸ್ಯಾಂಡಲ್‌ವುಡ್‌ ಖ್ಯಾತ ಖಳನಟ ಹರೀಶ್‌ ರಾಯ್‌ ನಿಧನ

ಬೆಂಗಳೂರು: ಸ್ಯಾಂಡಲ್‌ವುಡ್‌ನ ಖ್ಯಾತ ಖಳನಟ ಹರೀಶ್‌ ರಾಯ್‌ ಅವರಿಂದು ನಿಧನರಾಗಿದ್ದಾರೆ. ಅವರಿಗೆ 55 ವರ್ಷ ವಯಸ್ಸಾಗಿತ್ತು.

ಕ್ಯಾನ್ಸರ್‌ ಖಾಯಿಲೆಗೆ ತುತ್ತಾಗಿದ್ದ ಖಳನಟ ಹರೀಶ್‌ ರಾಯ್‌ ಅವರು ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ.

ಇದನ್ನು ಓದಿ: ಸಂಸದ ಯದುವೀರ್‌ ಒಡೆಯರ್‌ ಅವರ ಅಜ್ಜ ಮದನ್‌ ಗೋಪಾಲ್‌ ರಾಜ್‌ ಅರಸ್‌ ನಿಧನ

ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ್‌ ರಾಯ್‌ ಅವರು ಸುಮಾರು ಎರಡು ದಶಕಗಳಿಂದ ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿದ್ದರು.

ಶಿವರಾಜ್‌ ಕುಮಾರ್‌ ಅಭಿನಯದ ಓಂ ಚಿತ್ರದಲ್ಲಿನ ರಾಯ್‌ ಪಾತ್ರದಿಂದ ಗಮನ ಸೆಳೆದಿದ್ದ ಅವರು, ಸಾಕಷ್ಟು ಚಿತ್ರಗಳಲ್ಲಿ ಖಳನಟರಾಗಿ, ಪೋಷಕ ನಟರಾಗಿ ಕಾರ್ಯ ನಿರ್ವಹಿಸಿದ್ದಾರೆ.

ಸಂಜು ವೆಡ್ಸ್‌ ಗೀತಾ, ಸ್ವಯಂವರ, ಭೂಗತ, ನನ್ನ ಕನಸಿನ ಹೂವೆ, ನಲ್ಲ, ಜೋಡಿಹಕ್ಕಿ, ತಾಯವ್ವ, ಓಂ, ಕೆಜಿಎಫ್‌ ಚಾಪ್ಟರ್‌ 1 ಹಾಗೂ ಕೆಜಿಎಫ್‌ ಚಾಪ್ಟರ್‌2ನಲ್ಲಿ ಅಭಿನಯಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

4 hours ago

ಓದುಗರ ಪತ್ರ: ನೆಮ್ಮದಿ ಕೇಂದ್ರಕ್ಕೆ ಹೆಚ್ಚುವರಿ ಸಿಬ್ಬಂದಿ ನಿಯೋಜಿಸಿ

ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…

4 hours ago

ಓದುಗರ ಪತ್ರ: ಆಹಾರ ಸರಬರಾಜಿಗೆ ಕಪ್ಪು ಪ್ಲಾಸ್ಟಿಕ್ ಡಬ್ಬಿಗಳನ್ನು ನಿಷೇಧಿಸಿ

ನಗರ ಪ್ರದೇಶಗಳ ಹೋಟೆಲ್‌ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್‌ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…

4 hours ago

ಓದುಗರ ಪತ್ರ: ಅಧಿಕಾರಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕ್ರಿಯಾಶೀಲವಾಗಲಿ

ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ…

4 hours ago

ಓದುಗರ ಪತ್ರ: ಎಸ್‌ಐಆರ್: ಸಂಪೂರ್ಣ ಮಾಹಿತಿ ನೀಡಿ

ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)ಪ್ರಕ್ರಿಯೆ ಜೂ.೩೦ರಿಂದ ಆರಂಭವಾಗಿದೆ. ಆದರೆ ಮತದಾರರು ಈ ಪ್ರಕ್ರಿಯೆಯಲ್ಲಿ ಯಾವ ದಾಖಲೆಗಳನ್ನು…

4 hours ago

ಅನನ್ಯಾಳ ಬದುಕು ಬದಲಾಯಿಸಿದ 20 ರೂಪಾಯಿ ನೋಟು

ಪಂಜು ಗಂಗೊಳ್ಳಿ  ಬಡಕಟ್ಟು ಜನರಿಗೆ ಅಕ್ಷರ ಕಲಿಸಿ ಬದುಕು ರೂಪಿಸಿದ ಕರುಣಾಮಯಿ ೧೯೯೦ರಲ್ಲಿ ಅಸ್ಸಾಮಿನ ಹೊಜಾಯ್ ಜಿಲ್ಲೆಯ ಲುಮ್ಡಿಂಗ್ ಗ್ರಾಮದ…

4 hours ago