ಬೆಂಗಳೂರು: ಸ್ಯಾಂಡಲ್ವುಡ್ನ ಖ್ಯಾತ ಖಳನಟ ಹರೀಶ್ ರಾಯ್ ಅವರಿಂದು ನಿಧನರಾಗಿದ್ದಾರೆ. ಅವರಿಗೆ 55 ವರ್ಷ ವಯಸ್ಸಾಗಿತ್ತು.
ಕ್ಯಾನ್ಸರ್ ಖಾಯಿಲೆಗೆ ತುತ್ತಾಗಿದ್ದ ಖಳನಟ ಹರೀಶ್ ರಾಯ್ ಅವರು ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ.
ಇದನ್ನು ಓದಿ: ಸಂಸದ ಯದುವೀರ್ ಒಡೆಯರ್ ಅವರ ಅಜ್ಜ ಮದನ್ ಗೋಪಾಲ್ ರಾಜ್ ಅರಸ್ ನಿಧನ
ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ್ ರಾಯ್ ಅವರು ಸುಮಾರು ಎರಡು ದಶಕಗಳಿಂದ ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿದ್ದರು.
ಶಿವರಾಜ್ ಕುಮಾರ್ ಅಭಿನಯದ ಓಂ ಚಿತ್ರದಲ್ಲಿನ ರಾಯ್ ಪಾತ್ರದಿಂದ ಗಮನ ಸೆಳೆದಿದ್ದ ಅವರು, ಸಾಕಷ್ಟು ಚಿತ್ರಗಳಲ್ಲಿ ಖಳನಟರಾಗಿ, ಪೋಷಕ ನಟರಾಗಿ ಕಾರ್ಯ ನಿರ್ವಹಿಸಿದ್ದಾರೆ.
ಸಂಜು ವೆಡ್ಸ್ ಗೀತಾ, ಸ್ವಯಂವರ, ಭೂಗತ, ನನ್ನ ಕನಸಿನ ಹೂವೆ, ನಲ್ಲ, ಜೋಡಿಹಕ್ಕಿ, ತಾಯವ್ವ, ಓಂ, ಕೆಜಿಎಫ್ ಚಾಪ್ಟರ್ 1 ಹಾಗೂ ಕೆಜಿಎಫ್ ಚಾಪ್ಟರ್2ನಲ್ಲಿ ಅಭಿನಯಿಸಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…
ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…
ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್…
Θಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಪಾಂಡವಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ…
ಬೆಂಗಳೂರು: ರಾಜ್ಯದಲ್ಲಿ ಮೆಡಿಕಲ್ ಸೀಟು ಲಭ್ಯತೆ ಹೆಚ್ಚಾಗಿದ್ದು, ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಲು ಬಯಸುವವರಿಗೆ ಸುವರ್ಣ ಅವಕಾಶ ಲಭಿಸಲಿದೆ. ರಾಜ್ಯಕ್ಕೆ…