Mysore
20
overcast clouds
Light
Dark

ಬಿಜೆಪಿಗೆ ರಾಜೀನಾಮೆ ನೀಡಿದ ಸಂಸದ ಸಂಗಣ್ಣ ಕರಡಿ: ಕಾಂಗ್ರೆಸ್‌ ಸೇರ್ಪಡೆ?!

ಬೆಂಗಳೂರು: ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಸಂಗಣ್ಣ ಕರಡಿ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಈ ಬಾರಿಯ ಲೋಕಸಭಾ ಚುನಾವಣೆಗೆ ಟಿಕೆಟ್‌ ಕೈತಪ್ಪಿದ ಬೆನ್ನಲ್ಲೇ ಅಸಮಾಧಾನ ಹೋರಹಾಕಿದ್ದ ಕರಡಿ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ತಿಲಾಂಜಲಿ ಬಿಟ್ಟಿದ್ದಾರೆ.

ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರಿಗೆ ರಾಜೀನಾಮೆ ಪತ್ರ ನೀಡಿದ್ದಾರೆ. ಹಾಗೂ ಸ್ಪೀಕರ್‌ ಓಂ ಬಿರ್ಲಾ ಅವರಿಗೆ ಮೇಲ್‌ ಮೂಲಕ ರಾಜೀನಾಮೆ ನೀಡಿದ್ದಾರೆ.

ಕರಡಿ ಬದಲಾಗಿ ಈ ಬಾರಿ ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ಹೊಸ ಅಭ್ಯರ್ಥಿ ಡಾ.ಬಸವರಾಜ್ ಕ್ಯಾವಟರ್ ಅವರಿಗೆ ಬಿಜೆಪಿ ಮಣೆ ಹಾಕಿತ್ತು. ಇದರಿಂದ ಬೇಸರಗೊಂಡಿದ್ದ ಕರಡಿ ಬಿಜೆಪಿಗೆ ಗುಡ್‌​ ಬೈ ಹೇಳಿದ್ದಾರೆ.

ಇನ್ನು ಬಿಜೆಪಿ ತೊರೆದಿರುವ ಸಂಗಣ್ಣ ಕರಡಿ ನಾಳೆ (ಏ.೧೭) ಬೆಳಿಗ್ಗೆ ೧೦.೩೦ಕ್ಕೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್‌ ಸೇರಲಿದ್ದಾರೆ ಎಂದು ಹೇಳಲಾಗಿದೆ.