ರಾಜ್ಯ

ಕೇಂದ್ರ ಸರ್ಕಾರದ ವಿರುದ್ಧ ಸಂತೋಷ್‌ ಲಾಡ್‌ ವಾಗ್ದಾಳಿ

ಬೆಳಗಾವಿ: ಅದಾನಿ ಕೇಸ್‌ ಮುಚ್ಚಿ ಹಾಕಲು ಒಂದು ರಾಷ್ಟ್ರ, ಒಂದು ಚುನಾವಣೆಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ ಎಂದು ಸಚಿವ ಸಂತೋಷ್‌ ಲಾಡ್‌ ವಾಗ್ದಾಳಿ ನಡೆಸಿದ್ದಾರೆ.

ಬೆಳಗಾವಿಯಲ್ಲಿ ಇಂದು(ಡಿಸೆಂಬರ್‌.18) ಚಳಿಗಾಲದ ಅಧಿವೇಶನ ತೃಪ್ತಿ ತಂದಿಲ್ಲ ಎಂಬ ವಿರೋಧ ಪಕ್ಷಗಳ ಹೇಳಿಕೆಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ಸರ್ಕಾರ ಅಧಿಕಾರದಲಿದ್ದಾಗ ಉತ್ತರ ಕರ್ನಾಟಕಕ್ಕೆ ಎಷ್ಟು ಹಣ ನೀಡಿದ್ದರು. ಕೇಂದ್ರ ಸರ್ಕಾರ ಕೇವಲ ಗೌತಮ ಅದಾನಿ ಅವರ ವಂಚನೆ ಪ್ರಕರಣವನ್ನು ಮುಚ್ಚಿ ಹಾಕಲು ಒಂದು ರಾಷ್ಟ್ರ, ಒಂದು ಚುನಾವಣೆಯನ್ನು ಸಂಸತ್‌ನಲ್ಲಿ ವಿಧೇಯಕ ಮಂಡನೆ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಅದಾನಿ ಬಗ್ಗೆ ಅಮೆರಿಕಾ ಕೋರ್ಟ್‌ ಹೇಳಿದ್ದೇನು? ಅದಾನಿ ಭ್ರಷ್ಟಾಚಾರ ಮಾಡಿದ್ದು ಎಲ್ಲಿ? ದೇಶದಲ್ಲಿ ಅದಾನಿ ಸಂಸ್ಥೆಗೆ ಏನೆಲ್ಲಾ ಕೊಡಲಾಗಿದೆ? ಭಾರತದಲ್ಲಿ ಭ್ರಷ್ಟಾಚಾರ ಆಗಿದೆ ಎಂದು ಅಮೆರಿಕಾ ಕೋರ್ಟ್‌ ತಿಳಿಸಿದೆ. ಆದರೆ ಈ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದೆ ಒಂದು ರಾಷ್ಟ್ರ, ಒಂದು ಚುನಾವಣೆಯನ್ನು ಜಾರಿಗೆ ತರಲು ವಿಧೇಯಕ ಮಂಡಿಸಿದ್ದಾರೆ ಎಂದು ಕಿಡಿಕಾರಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ನಂಜನಗೂಡು ತಾಯಿ-ಮಕ್ಕಳ ಆಸ್ಪತ್ರೆಗೆ ಶಾಸಕ ದರ್ಶನ್ ದಿಢೀರ್ ಭೇಟಿ, ಪರಿಶೀಲನೆ

ನಂಜನಗೂಡು: ನಂಜನಗೂಡು ಪಟ್ಟಣದಲ್ಲಿರುವ ಸರ್ಕಾರಿ ತಾಯಿ-ಮಕ್ಕಳ ಆಸ್ಪತ್ರೆಗೆ ಕಳೆದ ತಡರಾತ್ರಿ ನಂಜನಗೂಡು ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್ ಅವರು ದಿಢೀರ್…

7 mins ago

ಯತೀಂದ್ರ ಸಿದ್ದರಾಮಯ್ಯ ನಮ್ಮ ಹೈಕಮಾಂಡ್:‌ ಗಣಿಗ ರವಿಕುಮಾರ್‌ ವ್ಯಂಗ್ಯ

ಮಂಡ್ಯ: ಯತೀಂದ್ರ ಸಿದ್ದರಾಮಯ್ಯ ಅವರು ನಮ್ಮ ಹೈಕಮಾಂಡ್.‌ ನಮಗೆ ಹೈಕಮಾಂಡ್‌ ನೋಟಿಸ್‌ ಕೊಡಬಹುದು. ಆದರೆ ಹೈಕಮಾಂಡ್‌ಗೆ ನಾವು ನೋಟಿಸ್‌ ಕೊಡಲು…

13 mins ago

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿದೆ ತಾಪಮಾನ: ಆರೋಗ್ಯ ಇಲಾಖೆಯಿಂದ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಚಳಿಯ ಅಬ್ಬರ, ಶೀತ ಸಂಪೂರ್ಣ ಕಡಿಮೆಯಾಗಿದ್ದು, ಒಣ ಹವೆಯ ಜೊತೆಗೆ ದಿನದಿಂದ ದಿನಕ್ಕೆ ತಾಪಮಾನ ಹೆಚ್ಚಳವಾಗುತ್ತಿದೆ. ಶಿವರಾತ್ರಿ…

15 mins ago

ಕೆಮಿಕಲ್‌ ಟ್ಯಾಂಕ್‌ ಸ್ಫೋಟ: ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವು

ಮಂಡ್ಯ: ಕೆಮಿಕಲ್‌ ಟ್ಯಾಂಕ್‌ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ ಘಟನೆ ಮಂಡ್ಯ ಜಿಲ್ಲೆ ಬಸರಾಳು ಸಮೀಪದ ಕಾರೆಕಟ್ಟೆ ಬಳಿ ಕೀರ್ತಿ…

17 mins ago

30 ಲಕ್ಷದ ಚಿನ್ನಾಭರಣ ಧರಿಸಿ ಮದುವೆಗೆ ಬಂದು ನಾಪತ್ತೆಯಾಗಿದ್ದ ಮಹಿಳೆ ಕುಣಿಗಲ್‌ ಗೆಳೆಯನ ಮನೆಯಲ್ಲಿ ಪತ್ತೆ

ಹಾಸನ: ಮದುವೆ ಸಮಾರಂಭಕ್ಕೆ ಲಕ್ಷಾಂತರ ರೂ ಮೌಲ್ಯದ ಒಡವೆ ಧರಿಸಿ ಬಂದಿದ್ದ ಮಹಿಳೆ ನಿಗೂಢವಾಗಿ ಕಣ್ಮರೆಯಾಗಿದ್ದ ಪ್ರಕರಣ ಸುಖಾಂತ್ಯ ಕಂಡಿದೆ.…

19 mins ago

ತ್ರಿನೇಶ್ವರ ದೇವಾಲಯಕ್ಕೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಭೇಟಿ

ಮೈಸೂರು: ಇಂದು ಮಹಾಶಿವರಾತ್ರಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಸಂಪ್ರದಾಯದಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಅವರು ತ್ರಿನೇಶ್ವರ ದೇವಾಲಯಕ್ಕೆ ಭೇಟಿ ನೀಡಿ…

46 mins ago