ಧಾರವಾಡ: ಕೇಂದ್ರ ಸರ್ಕಾರ, ಭಾರತದೊಳಗೆ ಚೀನಾ ಅತಿಕ್ರಮ ಪ್ರವೇಶ ಮಾಡಿದ್ದು, ಅದನ್ನು ಮುಚ್ಚಿ ಹಾಕಲು ವಕ್ಫ್ ಬಿಲ್ ಮಂಡಿಸಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಕಿಡಿಕಾರಿದ್ದಾರೆ.
ಧಾರವಾಡದಲ್ಲಿ ಇಂದು(ಏಪ್ರಿಲ್.7) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಚೀನಾ 600ಕ್ಕೂ ಹೆಚ್ಚು ಹಳ್ಳಿಗಳನ್ನು ಕಬ್ಜಾ ಮಾಡಿದೆ. ಅಲ್ಲದೇ ಚೀನಾ ನಮ್ಮ ದೇಶದ 176 ಕಿ.ಮೀ ಅತಿಕ್ರಮ ಪ್ರವೇಶಿಸಿದೆ. ಹೀಗಾಗಿ ಕೇಂದ್ರ ಸರ್ಕಾರ ಅದನ್ನು ಮುಚ್ಚಿ ಹಾಕಲು ‘ವಕ್ಫ್’ ಬಿಲ್ ಮಂಡಿಸುವ ನಾಟಕ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಚೀನಾದವರು ಎರಡು ಪೋಸ್ಟ್ ಕ್ರಿಯೇಟ್ ಮಾಡಿದ್ದಾರೆ. ಈ ಕಾರಣಕ್ಕೆ ಈ ವಿಚಾರ ಎಲ್ಲೂ ಚರ್ಚೆಗೆ ಬರಬಾರದೆಂದು ವಕ್ಫ್ ಬಿಲ್ ತಂದಿದ್ದಾರೆ. ಇನ್ನೂ ಬಡತನ, ನಿರುದ್ಯೋಗದ ಬಗ್ಗೆ ಚರ್ಚೆ ಆಗಬಾರದೆಂಬ ಉದ್ದೇಶದಿಂದ ಬಿಜೆಪಿಯವರು ಬಿಲ್ ಮಂಡಿಸಿದ್ದಾರೆ. ಆದರೆ ನಾಳೆ ಇದು ಕೋರ್ಟ್ನಲ್ಲಿ ಬೀಳುತ್ತದೆಂದು ತಿಳಿದಿದ್ದರೂ ವಕ್ಫ್ ಬಿಲ್ ಅಂಗೀಕರಿಸಿದ್ದಾರೆ ಎಂದು ಹರಿಹಾಯ್ದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…