ಬೆಂಗಳೂರು: ಭಾರತ-ಪಾಕ್ ಮಧ್ಯೆ ಕದನ ವಿರಾಮ ಘೋಷಣೆಯಾದ ಬಳಿಕ ಪ್ರಧಾನಿ ನರೇಂದ್ರ ಸರ್ವಪಕ್ಷ ಸಭೆ ಕರೆಯದೇ ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಕಿಡಿಕಾರಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮೋದಿ ಬಿಹಾರಕ್ಕೆ ಹೋಗಿ ಭಾಷಣ ಮಾಡಿದ್ರು. ಪಾಕ್ ಬೇಡಿಕೆಯಿಂದ ಕದನ ವಿರಾಮ ಅಂತಾರೆ. ಅತ್ತ ಅಮೇರಿಕಾ ಅಧ್ಯಕ್ಷ ಟ್ರಂಪ್ ನನ್ನಿಂದಲೇ ಕದನ ವಿರಾಮ ಘೋಷಣೆಯಾಗಿದ್ದು ಅಂತಾರೆ. ಯುದ್ಧ ನಡೆದರೂ ಯಾರೂ ಮಧ್ಯ ಪ್ರವೇಶಿಸಲ್ಲ ಎಂದರು.
ಇದನ್ನೂ ಓದಿ:- ಸಿಎಂ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದ ಆರೋಪಿ ಶವವಾಗಿ ಪತ್ತೆ
ಇನ್ನು ಮುಂದುವರಿದು ಮಾತನಾಡಿದ ಅವರು, ಪ್ರಧಾನಿ ಮೋದಿ ಮೊದಲು ಸೈನ್ಯಕ್ಕೆ ಫ್ರೀ ಹ್ಯಾಂಡ್ ಅಂದರು. ಈಗ ಕದನ ವಿರಾಮ ಘೋಷಿಸಿದ್ದಾರೆ. ಇದಕ್ಕೆ ಕಾರಣ ಏನು ಎಂದು ಪ್ರಶ್ನೆ ಮಾಡಿದರು.
ಪ್ರಧಾನಿ ಮೋದಿ ಸರ್ವಪಕ್ಷ ಸಭೆ ಕರೆಯದೇ ಸರ್ವಾಧಿಕಾರಿಯಂತೆ ವರ್ತನೆ ಮಾಡುತ್ತಿದ್ದಾರೆ. ಕದನ ವಿರಾಮ ಘೋಷಣೆ ಬಳಿಕ ಜನರ ಅಭಿಪ್ರಾಯ ಕೇಳಬೇಕು ಎಂದು ಹೇಳಿದರು
ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…
ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…
ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು…