ಬೆಂಗಳೂರು: ಭಾರತ-ಪಾಕ್ ಮಧ್ಯೆ ಕದನ ವಿರಾಮ ಘೋಷಣೆಯಾದ ಬಳಿಕ ಪ್ರಧಾನಿ ನರೇಂದ್ರ ಸರ್ವಪಕ್ಷ ಸಭೆ ಕರೆಯದೇ ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಕಿಡಿಕಾರಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮೋದಿ ಬಿಹಾರಕ್ಕೆ ಹೋಗಿ ಭಾಷಣ ಮಾಡಿದ್ರು. ಪಾಕ್ ಬೇಡಿಕೆಯಿಂದ ಕದನ ವಿರಾಮ ಅಂತಾರೆ. ಅತ್ತ ಅಮೇರಿಕಾ ಅಧ್ಯಕ್ಷ ಟ್ರಂಪ್ ನನ್ನಿಂದಲೇ ಕದನ ವಿರಾಮ ಘೋಷಣೆಯಾಗಿದ್ದು ಅಂತಾರೆ. ಯುದ್ಧ ನಡೆದರೂ ಯಾರೂ ಮಧ್ಯ ಪ್ರವೇಶಿಸಲ್ಲ ಎಂದರು.
ಇದನ್ನೂ ಓದಿ:- ಸಿಎಂ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದ ಆರೋಪಿ ಶವವಾಗಿ ಪತ್ತೆ
ಇನ್ನು ಮುಂದುವರಿದು ಮಾತನಾಡಿದ ಅವರು, ಪ್ರಧಾನಿ ಮೋದಿ ಮೊದಲು ಸೈನ್ಯಕ್ಕೆ ಫ್ರೀ ಹ್ಯಾಂಡ್ ಅಂದರು. ಈಗ ಕದನ ವಿರಾಮ ಘೋಷಿಸಿದ್ದಾರೆ. ಇದಕ್ಕೆ ಕಾರಣ ಏನು ಎಂದು ಪ್ರಶ್ನೆ ಮಾಡಿದರು.
ಪ್ರಧಾನಿ ಮೋದಿ ಸರ್ವಪಕ್ಷ ಸಭೆ ಕರೆಯದೇ ಸರ್ವಾಧಿಕಾರಿಯಂತೆ ವರ್ತನೆ ಮಾಡುತ್ತಿದ್ದಾರೆ. ಕದನ ವಿರಾಮ ಘೋಷಣೆ ಬಳಿಕ ಜನರ ಅಭಿಪ್ರಾಯ ಕೇಳಬೇಕು ಎಂದು ಹೇಳಿದರು
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…