ರಾಜ್ಯ

ಆರ್‌ಎಸ್‌ಎಸ್‌ ಬಗ್ಗೆ ವ್ಯಂಗ್ಯ: ಸಿಎಂ ಸಿದ್ದರಾಮಯ್ಯಗೆ ಸಂಸದ ಬಸವರಾಜ ಬೊಮ್ಮಾಯಿ ತಿರುಗೇಟು

ನವದೆಹಲಿ: ಸಿಎಂ ಸಿದ್ದರಾಮಯ್ಯ ಅವರು ಸೋಮವಾರ ಸದನದಲ್ಲಿ ಆರ್‌ಎಸ್‌ಎಸ್‌ ಬಗ್ಗೆ ವ್ಯಂಗ್ಯ ಮಾಡಿದ್ದಕ್ಕೆ ಸಂಸದ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.

ನವದೆಹಲಿಯಲ್ಲಿ ಇಂದು(ಮಾರ್ಚ್.‌18) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಮಾಜಿ ಪ್ರಧಾನಿ ಮತ್ತು ಕಾಂಗ್ರೆಸ್‌ ನಾಯಕಿ ಇಂದಿರಾ ಗಾಂಧಿ ಅವರೇ ಆರ್‌ಎಸ್‌ಎಸ್‌ ಅವರನ್ನು ಹೊಗಳಿದ್ದಾರೆ. ಅಲ್ಲದೇ ಆರ್‌ಎಸ್‌ಎಸ್‌ ಬಗ್ಗೆ ಇಡೀ ನಾಡಿಗೆ ಗೊತ್ತು. ನಿಜ ಹೇಳಬೇಕೆಂದರೆ ಸಿಎಂ ಸಿದ್ದರಾಮಯ್ಯ ಅವರು ಮೂಲತಃ ಕಾಂಗ್ರೆಸ್‌ನವರೇ ಅಲ್ಲ. ಅಲ್ಲದೇ ಸಿದ್ದರಾಮಯ್ಯ ಅವರು ಕಾಂಗ್ರೆಸ್‌ ವಿರೋಧಿ ಬಣದಲ್ಲಿದ್ದವರು, ಈಗ ಅವರೇ ಕಾಂಗ್ರೆಸ್‌ ಪಕ್ಷನ್ನು ಆರ್‌ಎಸ್‌ಎಸ್‌ ವಿರುದ್ಧ ಹೇಳಿಕೆಗಳನ್ನು ನೀಡುತ್ತಿದ್ದಾರೆ.

ರಾಜ್ಯ ಸರ್ಕಾರದಿಂದ ಹಿಂದುಳಿದ ವರ್ಗಕ್ಕೆ ಮೋಸ

ಇದೇ ಸಂದರ್ಭದಲ್ಲಿ ಕಾಂಗ್ರೆಸ್‌ ಸರ್ಕಾರ ವತಿಯಿಂದ ಮುಸಲ್ಮಾನರಿಗೆ ಗುತ್ತಿಗೆಯಲ್ಲಿ ಶೇ.4% ಮೀಸಲಾತಿ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಈ ರಾಜ್ಯ ಸರ್ಕಾರದಿಂದ ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮೋಸವಾಗುತ್ತಿದೆ. ಅಲ್ಪ ಸಂಖ್ಯಾತರ ಗುತ್ತಿಗೆ ಮೀಸಲಾತಿ 2ಎ ಪಟ್ಟಿಯಲ್ಲಿದೆ. ಹಾಗಾಗಿ ಮುಂಬರುವ ಚುನಾವಣೆಗಾಗಿ ಕಾಂಗ್ರೆಸ್‌ ಸರ್ಕಾರದವರು ಮತ ಬ್ಯಾಂಕ್‌ ಗಟ್ಟಿ ಮಾಡಿಕೊಳ್ಳಲು ಈ ತೀರ್ಮಾನ ಕೈಗೊಂಡಿದ್ದಾರೆ ಟೀಕಿಸಿದರು.

ಏನೇ ಆಗಲಿ ರಾಜ್ಯ ಸರ್ಕಾರದ ಈ ತೀರ್ಮಾನದಿಂದ ಮುಂದಿನ ದಿನಗಳಲ್ಲಿ ಕಾಂಗ್ರೆಸ್‌ ಪಕ್ಷ ಬೆಲೆ ತೆರೆ ಬೇಕಾಗುತ್ತದೆ. ಇನ್ನು ಸರ್ಕಾರದ ಈ ನಡೆ ಕರ್ನಾಟಕದಲ್ಲಿ ಕಾನೂನು ಬಾಹಿರವಾಗಿದೆ. ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡಿ ಸಮಾಜವನ್ನು ಹದಗೆಡಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಅರ್ಚನ ಎಸ್‌ ಎಸ್

Recent Posts

ಸಂಪ್ರದಾಯವಾಗಿ ನಡೆಯದ ವಿವಾಹ ಅಮಾನ್ಯ ; ಗುಜರಾತ್ ಹೈಕೋರ್ಟ್ ತೀರ್ಪು

ಸಪ್ತಪದಿ ಹಿಂದೂ ವಿವಾಹದ ಅಡಿಪಾಯ ; ಗುಜರಾತ್‌ ಹೈಕೋರ್ಟ್‌ ತೀರ್ಪು ಅಹಮದಾಬಾದ್ : ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿವಿಧಾನಗಳು ಮತ್ತು ಸಮಾರಂಭಗಳನ್ನು…

8 hours ago

ಬೋರ್‌ವೆಲ್, ಪಂಪ್‌ಸೆಟ್ ಕೇಬಲ್‌ ಕಳ್ಳತನ ಯುವಕರಿಗೆ ಧರ್ಮದೇಟು

ಮಂಡ್ಯ : ಬೋರ್‌ವೆಲ್, ಪಂಪ್‌ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…

9 hours ago

ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ ; ಸುಟ್ಟು ಹೋದ 6 ಎಕರೆ ಕಬ್ಬು

ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…

10 hours ago

ಆಷಾಢ ಶುಕ್ರವಾರ, ಶನಿವಾರ, ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ

ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…

14 hours ago

ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’

ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…

15 hours ago

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

21 hours ago