ರಾಜ್ಯ

ಆರ್‌ಎಸ್‌ಎಸ್‌ ಬಗ್ಗೆ ವ್ಯಂಗ್ಯ: ಸಿಎಂ ಸಿದ್ದರಾಮಯ್ಯಗೆ ಸಂಸದ ಬಸವರಾಜ ಬೊಮ್ಮಾಯಿ ತಿರುಗೇಟು

ನವದೆಹಲಿ: ಸಿಎಂ ಸಿದ್ದರಾಮಯ್ಯ ಅವರು ಸೋಮವಾರ ಸದನದಲ್ಲಿ ಆರ್‌ಎಸ್‌ಎಸ್‌ ಬಗ್ಗೆ ವ್ಯಂಗ್ಯ ಮಾಡಿದ್ದಕ್ಕೆ ಸಂಸದ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.

ನವದೆಹಲಿಯಲ್ಲಿ ಇಂದು(ಮಾರ್ಚ್.‌18) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಮಾಜಿ ಪ್ರಧಾನಿ ಮತ್ತು ಕಾಂಗ್ರೆಸ್‌ ನಾಯಕಿ ಇಂದಿರಾ ಗಾಂಧಿ ಅವರೇ ಆರ್‌ಎಸ್‌ಎಸ್‌ ಅವರನ್ನು ಹೊಗಳಿದ್ದಾರೆ. ಅಲ್ಲದೇ ಆರ್‌ಎಸ್‌ಎಸ್‌ ಬಗ್ಗೆ ಇಡೀ ನಾಡಿಗೆ ಗೊತ್ತು. ನಿಜ ಹೇಳಬೇಕೆಂದರೆ ಸಿಎಂ ಸಿದ್ದರಾಮಯ್ಯ ಅವರು ಮೂಲತಃ ಕಾಂಗ್ರೆಸ್‌ನವರೇ ಅಲ್ಲ. ಅಲ್ಲದೇ ಸಿದ್ದರಾಮಯ್ಯ ಅವರು ಕಾಂಗ್ರೆಸ್‌ ವಿರೋಧಿ ಬಣದಲ್ಲಿದ್ದವರು, ಈಗ ಅವರೇ ಕಾಂಗ್ರೆಸ್‌ ಪಕ್ಷನ್ನು ಆರ್‌ಎಸ್‌ಎಸ್‌ ವಿರುದ್ಧ ಹೇಳಿಕೆಗಳನ್ನು ನೀಡುತ್ತಿದ್ದಾರೆ.

ರಾಜ್ಯ ಸರ್ಕಾರದಿಂದ ಹಿಂದುಳಿದ ವರ್ಗಕ್ಕೆ ಮೋಸ

ಇದೇ ಸಂದರ್ಭದಲ್ಲಿ ಕಾಂಗ್ರೆಸ್‌ ಸರ್ಕಾರ ವತಿಯಿಂದ ಮುಸಲ್ಮಾನರಿಗೆ ಗುತ್ತಿಗೆಯಲ್ಲಿ ಶೇ.4% ಮೀಸಲಾತಿ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಈ ರಾಜ್ಯ ಸರ್ಕಾರದಿಂದ ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮೋಸವಾಗುತ್ತಿದೆ. ಅಲ್ಪ ಸಂಖ್ಯಾತರ ಗುತ್ತಿಗೆ ಮೀಸಲಾತಿ 2ಎ ಪಟ್ಟಿಯಲ್ಲಿದೆ. ಹಾಗಾಗಿ ಮುಂಬರುವ ಚುನಾವಣೆಗಾಗಿ ಕಾಂಗ್ರೆಸ್‌ ಸರ್ಕಾರದವರು ಮತ ಬ್ಯಾಂಕ್‌ ಗಟ್ಟಿ ಮಾಡಿಕೊಳ್ಳಲು ಈ ತೀರ್ಮಾನ ಕೈಗೊಂಡಿದ್ದಾರೆ ಟೀಕಿಸಿದರು.

ಏನೇ ಆಗಲಿ ರಾಜ್ಯ ಸರ್ಕಾರದ ಈ ತೀರ್ಮಾನದಿಂದ ಮುಂದಿನ ದಿನಗಳಲ್ಲಿ ಕಾಂಗ್ರೆಸ್‌ ಪಕ್ಷ ಬೆಲೆ ತೆರೆ ಬೇಕಾಗುತ್ತದೆ. ಇನ್ನು ಸರ್ಕಾರದ ಈ ನಡೆ ಕರ್ನಾಟಕದಲ್ಲಿ ಕಾನೂನು ಬಾಹಿರವಾಗಿದೆ. ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡಿ ಸಮಾಜವನ್ನು ಹದಗೆಡಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಅರ್ಚನ ಎಸ್‌ ಎಸ್

Recent Posts

ಕಾವೇರಿ ಕೊಳ್ಳದ ರೈತರಿಗೆ 4 ಕಟ್ಟು ನೀರು ; ಕಾವೇರಿ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…

9 hours ago

ಮೈಸೂರು | ಭಾರತ್ ಜೋಡೋ ನೋಂದಣಿಗೆ ಚಾಲನೆ

ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…

9 hours ago

ಎಂಡಿಎ ಬದಲಿ ನಿವೇಶನ ಹಂಚಿಕೆ ರದ್ದುಪಡಿಸಿ ಸರ್ಕಾರ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…

9 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ : ಸಿ.ಎಂ ಡಿ.ಕೆ.ಶಿವಕುಮಾರ್*

ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…

12 hours ago

ಕ್ಯಾಪ್ಟನ್ ಅಭಿಮನ್ಯು ಆನೆಗೆ ರಾಜೋಚಿತ ಬೀಳ್ಕೊಡುಗೆ ನೀಡಿ : ಸಚಿವ ಖಂಡ್ರೆ

ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…

15 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…

15 hours ago