ಬೆಂಗಳೂರು: ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ ವೇಯಲ್ಲಿ ಉಪಗ್ರಹ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯನ್ನು ಪ್ರಾಯೋಗಿಕವಾಗಿ ಜಾರಿಗೊಳಿಸಲು ಕೇಂದ್ರ ಸರ್ಕಾರ ಯೋಚಿಸಿದೆ.
ಇತ್ತೀಚೆಗೆ ರಾಜ್ಯಸಭಾ ಸದಸ್ಯ ಲೆಹರ್ಸಿಂಗ್ ಸಿರೋಯಾ ಅವರ ಪ್ರಶ್ನೆಯೊಂದಕ್ಕೆ ರಾಜ್ಯಸಭೆಯಲ್ಲಿ ಉತ್ತರ ನೀಡಿದ ಸಾರಿಗೆ ಸಚಿವ ನಿತಿನ್ ಗಡ್ಕರಿ, ಕರ್ನಾಟಕದಲ್ಲಿ ಸಾಗುವ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಪ್ರಾಯೋಗಿಕವಾಗಿ ಗ್ಲೋಬಲ್ ನ್ಯಾವಿಗೇಷನ್ ಸ್ಯಾಟಲೈಟ್ ಸಿಸ್ಟಂ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯನ್ನು ಪ್ರಾಯೋಗಿಕವಾಗಿ ಜಾರಿಗೊಳಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.
ಜಿಎನ್ಎಸ್ಎಸ್ ಆಧಾರಿತ ತಡೆರಹಿತ ಟೋಲಿಂಗ್ನಂತಹ ಹೊಸ ತಂತ್ರಜ್ಞಾನಗಳ ಅನುಷ್ಠಾನದ ಕುರಿತು ಸಲಹೆಗಳನ್ನು ನೀಡಲು ಸರ್ಕಾರವು ಸಲಹೆಗಾರರನ್ನು ನೇಮಿಸಿದೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಎಷ್ಟು ಸಂಚರಿಸಿದೆ ಎಂಬುದರ ಮಾಹಿತಿ ಕಲೆ ಹಾಕಲು ಮತ್ತು ಪ್ರಯಾಣಿಸಿದ ದೂರದ ಆಧಾರದ ಮೇಲೆ ಬಳಕೆದಾರರ ಶುಲ್ಕವನ್ನು ಲೆಕ್ಕಾಚಾರ ಮಾಡುವ ಸಾಮರ್ಥ್ಯವನ್ನು ಜಿಎನ್ಎಸ್ಎಸ್ ಹೊಂದಿದೆ ಎಂದು ಗಡ್ಕರಿ ತಿಳಿಸಿದ್ದಾರೆ.
ಈ ತಂತ್ರಜ್ಞಾನ ಅಳವಡಿಕೆಗೆ ಸರ್ಕಾರ ಮೂರು ವರ್ಷಗಳಿಂದ ಚಿಂತನೆ ನಡೆಸುತ್ತಾ ಇದೆ. ಇದು ಮುಕ್ತ ಸಂಚಾರಕ್ಕೆ ಅನುವು ಮಾಡಿಕೊಡುವುದಲ್ಲದೆ, ಟೋಲ್ ಪಾವತಿಗಾಗಿ ಸರದಿಯಲ್ಲಿ ಕಾಯುವುದನ್ನು ತಪ್ಪಿಸುತ್ತದೆ ಎಂದು ಫೆಬ್ರವರಿ 7ರಂದು ಗಡ್ಕರಿ ಹೇಳಿದ್ದರು.
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…
ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…