ಬೆಂಗಳೂರು: ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ ವೇಯಲ್ಲಿ ಉಪಗ್ರಹ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯನ್ನು ಪ್ರಾಯೋಗಿಕವಾಗಿ ಜಾರಿಗೊಳಿಸಲು ಕೇಂದ್ರ ಸರ್ಕಾರ ಯೋಚಿಸಿದೆ.
ಇತ್ತೀಚೆಗೆ ರಾಜ್ಯಸಭಾ ಸದಸ್ಯ ಲೆಹರ್ಸಿಂಗ್ ಸಿರೋಯಾ ಅವರ ಪ್ರಶ್ನೆಯೊಂದಕ್ಕೆ ರಾಜ್ಯಸಭೆಯಲ್ಲಿ ಉತ್ತರ ನೀಡಿದ ಸಾರಿಗೆ ಸಚಿವ ನಿತಿನ್ ಗಡ್ಕರಿ, ಕರ್ನಾಟಕದಲ್ಲಿ ಸಾಗುವ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಪ್ರಾಯೋಗಿಕವಾಗಿ ಗ್ಲೋಬಲ್ ನ್ಯಾವಿಗೇಷನ್ ಸ್ಯಾಟಲೈಟ್ ಸಿಸ್ಟಂ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯನ್ನು ಪ್ರಾಯೋಗಿಕವಾಗಿ ಜಾರಿಗೊಳಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.
ಜಿಎನ್ಎಸ್ಎಸ್ ಆಧಾರಿತ ತಡೆರಹಿತ ಟೋಲಿಂಗ್ನಂತಹ ಹೊಸ ತಂತ್ರಜ್ಞಾನಗಳ ಅನುಷ್ಠಾನದ ಕುರಿತು ಸಲಹೆಗಳನ್ನು ನೀಡಲು ಸರ್ಕಾರವು ಸಲಹೆಗಾರರನ್ನು ನೇಮಿಸಿದೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಎಷ್ಟು ಸಂಚರಿಸಿದೆ ಎಂಬುದರ ಮಾಹಿತಿ ಕಲೆ ಹಾಕಲು ಮತ್ತು ಪ್ರಯಾಣಿಸಿದ ದೂರದ ಆಧಾರದ ಮೇಲೆ ಬಳಕೆದಾರರ ಶುಲ್ಕವನ್ನು ಲೆಕ್ಕಾಚಾರ ಮಾಡುವ ಸಾಮರ್ಥ್ಯವನ್ನು ಜಿಎನ್ಎಸ್ಎಸ್ ಹೊಂದಿದೆ ಎಂದು ಗಡ್ಕರಿ ತಿಳಿಸಿದ್ದಾರೆ.
ಈ ತಂತ್ರಜ್ಞಾನ ಅಳವಡಿಕೆಗೆ ಸರ್ಕಾರ ಮೂರು ವರ್ಷಗಳಿಂದ ಚಿಂತನೆ ನಡೆಸುತ್ತಾ ಇದೆ. ಇದು ಮುಕ್ತ ಸಂಚಾರಕ್ಕೆ ಅನುವು ಮಾಡಿಕೊಡುವುದಲ್ಲದೆ, ಟೋಲ್ ಪಾವತಿಗಾಗಿ ಸರದಿಯಲ್ಲಿ ಕಾಯುವುದನ್ನು ತಪ್ಪಿಸುತ್ತದೆ ಎಂದು ಫೆಬ್ರವರಿ 7ರಂದು ಗಡ್ಕರಿ ಹೇಳಿದ್ದರು.
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…