Categories: ರಾಜ್ಯ

ಹೈಕಮಾಂಡ್‌ ನಿರ್ಧಾರದಂತೆ ಎಲ್ಲವೂ ಬದಲಾಗಬೇಕು: ಸಚಿವ ಸತೀಶ್‌ ಜಾರಕಿಹೊಳಿ

ಬೆಂಗಳೂರು: ರಾಜ್ಯ ಸರ್ಕಾರದ ಸಚಿವ ಸಂಪುಟ ಪುನರ್‌ ರಚನೆ ವಿಚಾರದಲ್ಲಿ ಎಲ್ಲವೂ ಹೈಕಮಾಂಡ್‌ ನಿರ್ಧಾರದಂತೆ ಬದಲಾಗಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಇಂದು(ನ.27) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಯಾರೂ ಸಹ ಕೇವಲ ಎರಡು ವರ್ಷಕ್ಕೆ ಸಚಿವ ಸ್ಥಾನ ಬದಲಾವಣೆಯಾಗತ್ತದೆ ಹೇಳಿಲ್ಲ. ಆದರೆ ರಾಜ್ಯದಲ್ಲಿ ಸಚಿವ ಸಂಪುಟದ ಪುನರ್‌ ರಚನೆಯ ವಿಚಾರಗಳು ಮುನ್ನೆಲೆಗೆ ಬಂದಿವೆ. ಅಲ್ಲದೇ ಕೆಲವರ ಖಾತೆ ಬದಲಾವಣೆಯ ಬಗ್ಗೆಯೂ ಚರ್ಚೆ ನಡೆಯುತ್ತಿದೆ. ಈ ಎಲ್ಲಾ ವಿಚಾರಗಳನ್ನು ಹೈಕಮಾಂಡ್‌ ತೀರ್ಮಾನ ಮಾಡಲಿದ್ದು, ಸಂಪುಟ ಪುನರ್‌ ರಚನೆ ಮಾಡಲು ಬಹುದು ಅಥವಾ ಮಾಡದೆಯೇ ಇರಬಹುದು ಎಂದಿದ್ದಾರೆ.

ಒಂದು ವೇಳೆ ರಾಜ್ಯ ಸರ್ಕಾರದ ಸಚಿವ ಸಂಪುಟ ಪುನರ್‌ ರಚಿಸಲೇಬೇಕೆಂದು ದೆಹಲಿಯಿಂದ ಲಿಸ್ಟ್‌ ಬಂದರೆ ಎಲ್ಲರೂ ಬದಲಾಗಬೇಕು, ಎಲ್ಲವೂ ಬದಲಾಗಬೇಕು. ಸಚಿವ ಸಂಪುಟ ಪುನರ್‌ ರಚನೆಯಲ್ಲಿ ಹೈಕಮಾಂಡ್‌ ತೀರ್ಮಾನವೇ ಅಂತಿಮ ನಿರ್ಧಾರ ಎಂದು ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಯಾವುದೇ ಲಾಭಿ ಮಾಡಿಲ್ಲ. ಅಲ್ಲದೇ ನಮ್ಮ ಪಕ್ಷದಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಯಾವುದೇ ಚರ್ಚೆಯಾಗಿಲ್ಲ ಎಂದು ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಮೈಸೂರಿನಲ್ಲಿ ಸುಸಜ್ಜಿತ ಫುಡ್ ಸ್ಟ್ರೀಟ್ ನಿರ್ಮಾಣವಾಗಲಿ

ಸಾಂಸ್ಕೃತಿಕ ನಗರಿ ಮೈಸೂರು ಆಹಾರ ಪ್ರಿಯರ ಸ್ವರ್ಗವೂ ಹೌದು. ಮೈಸೂರು ಪಾಕ್‌ನಿಂದ ಹಿಡಿದು ಮೈಲಾರಿ ದೋಸೆಯವರೆಗೆ ಇಲ್ಲಿನ ರುಚಿ ಪ್ರಸಿದ್ಧವಾಗಿದೆ.…

3 mins ago

ಓದುಗರ ಪತ್ರ: ಗೀತೆ ರಚನಾಕಾರರ ವಿರುದ್ಧ ಸುಮೊಟೊ ಕೇಸ್ ದಾಖಲಿಸಿ

ಪ್ರೇಮ್ ನಿರ್ದೇಶನದ ಕನ್ನಡ ಕೆಡಿ ಚಿತ್ರದ ಸರ್ಸೆ ನಿನ್ನ ಸೆರಗ ಸರ್ಸೆ.. ಎಂಬ ಗೀತೆ ದ್ವಂದ್ವಾರ್ಥದ ಕೀಳು ಅಭಿರುಚಿಯ ಹಾಡು…

4 mins ago

ಓದುಗರ ಪತ್ರ: ಪರೀಕ್ಷೆ ವೇಳೆ ವಿದ್ಯುತ್ ಕಡಿತ ಮಾಡದಿರಿ

ಮಾರ್ಚ್ ತಿಂಗಳು ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸುವ ಪರೀಕ್ಷಾ ಸಮಯ. ಇಂತಹ ಸಂದರ್ಭದಲ್ಲಿ ರಾಜ್ಯಾದ್ಯಂತ ಎಸ್ಕಾಂಗಳು ವಿದ್ಯುತ್ ಕಡಿತ ಮಾಡುತ್ತಿರುವುದು ಸರಿಯಲ್ಲ.…

8 mins ago

ಗೃಹಬಳಕೆ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಇಲ್ಲ

ನವೀನ್ ಡಿಸೋಜ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಗೃಹಬಳಕೆ ಎಲ್‌ಪಿಜಿ ಸಿಲಿಂಡರ್‌ಗಳು ಸಾಕಷ್ಟು ಸಂಗ್ರಹ ವಿದ್ದು, ಅನಧಿಕೃತ ಗ್ಯಾಸ್ ಸಿಲಿಂಡರ್ ಸಂಗ್ರಹಣೆ…

11 mins ago

ತುಳುನಾಡಿನ ಯುಗಾದಿ ‘ಬಿಸು’ವಿಗಾಗಿ ಇನ್ನೂ ಇಪ್ಪತ್ತೆಂಟು ದಿನ

ಅಕ್ಷತಾರಾಜ್ ಪೆರ್ಲ, ಕನ್ನಡ, ತುಳು ಉಭಯ ಭಾಷಾ ಲೇಖಕಿ  ಯುಗಾದಿ ಹಬ್ಬದ ಆಚರಣೆ ಒಂದೊಂದು ಪ್ರದೇಶದಲ್ಲಿ ಒಂದೊಂದು ರೀತಿ ಇದ್ದು,…

17 mins ago

ಕೊಂಕಣಿ ಬಂಧುಗಳ ಉಗಾದಿ ಎಂದರೆ ಪೂರಣ್ ಪೋಳಿ, ದಾಳಿತೋಯ್, ಉಬ್ಬಟಿ ಮತ್ತು ಕಡ್ಲೆಬೇಳೆ ಪಾಯಸ

ಸುಮತಿ ಶೆಣೈ, ಲೇಖಕಿ ಮತ್ತು ಅನುವಾದಕಿ ಪ್ರತಿ ಹಬ್ಬದ ಆಚರಣೆಯನ್ನೂ ಅಂದು ತಯಾರಿಸುವ ಗೌಡ ಸಾರಸ್ವತ ಬ್ರಾಹ್ಮಣ- ಸಮುದಾಯಕ್ಕೇ ಸೀಮಿತವಾದ…

22 mins ago