ರಾಜ್ಯ

ರಾಜ್ಯ ಸರ್ಕಾರದಿಂದ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲ್ಲ: ಸತೀಶ್‌ ಜಾರಕಿಹೊಳಿ

ಹುಬ್ಬಳ್ಳಿ: ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಅವುಗಳು ನಿರಂತರವಾಗಿ ಕಾರ್ಯ ನಿರ್ವಹಿಸುತ್ತವೆ ಎಂದು ಸಚಿವ ಸತೀಶ್‌ ಜಾರಕಿಹೊಳಿ ತಿಳಿಸಿದ್ದಾರೆ.

ನಗರದಲ್ಲಿ ಇಂದು(ಫೆಬ್ರವರಿ.22) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಹಣ ನೀಡುವುದು ಒಂದೆಡು ತಿಂಗಳು ವಿಳಂಬವಾಗಿರಬಹುದು ಅಷ್ಟೇ. ಆ ಹಣವನ್ನು ಮುಂದಿನ ದಿನಗಳಲ್ಲಿ ಸೇರಿಸಿ ಒಟ್ಟಿಗೆಯೇ ಗೃಹಲಕ್ಷ್ಮೀಯರ ಖಾತೆಗೆ ಹಣವನು ಜಮಾ ಮಾಡಲಾಗುತ್ತದೆ. ಸರ್ಕಾರದ ಮಟ್ಟದಲ್ಲಿ ಹಣ ನೀಡುವುದು ವಿಳಂಬವಾಗುವುದು ಸಹಜ. ವಿಳಂಬವಾದರೂ ಹಣ ನೀಡುವುದನ್ನು ನಿಲ್ಲಿಸುವುದಿಲ್ಲ ಎಂದು ಹೇಳಿದರು.

ಇದೇ ವೇಳೆ ಮುಡಾ ಪ್ರಕರಣದಲ್ಲಿ ಇ.ಡಿ.ತನಿಖೆಯ ಬಗ್ಗೆ ಮಾತನಾಡಿದ ಅವರು, ಮುಡಾ ಪ್ರಕರಣದಲ್ಲಿ ಕೇಂದ್ರ ಬಿಜೆಪಿ ಸರ್ಕಾರ ಇ.ಡಿ.ಸಂಸ್ಥೆಯನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಹೇಳಲು ಸಾಧ್ಯವಿಲ್ಲ. ಆದರೆ ಅದನ್ನು ಸಾಬೀತು ಪಡಿಸಲು ಸಾಕ್ಷ್ಯಾಧಾರಗಳು ಇಲ್ಲ. ಇನ್ನು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ 14 ನಿವೇಶನಗಳ ಬಗ್ಗೆ ಅಧಿಕ ವಿಚಾರವನ್ನು ಪ್ರಸ್ತಾಪ ಮಾಡುತ್ತಿರುವುದೇ ರಾಜಕೀಯವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಕೊರಿಯನ್ ಗೇಮ್ಸ್ ನಿಷೇಧಿಸಿ

ಕೊರಿಯನ್ ಗೇಮ್ಸ್ ವ್ಯಸನದಿಂದ ಮಕ್ಕಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಇಂದು ನಮ್ಮ ಯುವಜನತೆ ಕೆ ಪಾಪ್ ಮತ್ತು ಕೆ…

3 hours ago

ಓದುಗರ ಪತ್ರ: ಖಾಲಿ ನಿವೇಶನದಲ್ಲಿರುವ ಕಸ ತೆರವುಗೊಳಿಸಿ

ಮೈಸೂರಿನ ಶ್ರೀರಾಂಪುರ ೨ನೇ ಹಂತದಲ್ಲಿ ನಿವೇಶನನವೊಂದು ಕಳೆದ ೨೬ ವರ್ಷಗಳಿಂದ ಖಾಲಿಬಿದ್ದಿದೆ. ಈ ಖಾಲಿ ನಿವೇಶನದಲ್ಲಿ ಅಕ್ಕಪಕ್ಕದ ಮನೆಯ ನಿವಾಸಿಗಳು…

3 hours ago

ಓದುಗರ ಪತ್ರ: ಬೆಳವಾಡಿ ಕೆರೆ ಸ್ವಚ್ಛಗೊಳಿಸಿ

ಮೈಸೂರು ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯಾಗಿರುವುದು ಸ್ವಾಗತಾರ್ಹ ಸಂಗತಿ. ಆದರೆ ಗ್ರಾಮದ ನೈಸರ್ಗಿಕ ಸಂಪತ್ತಾದ ‘ಬೆಳವಾಡಿ ಕೆರೆ’ಗೆ…

3 hours ago

‘ಮಾದಕ ವಸ್ತು ಮಾರಾಟ ಮಾಡಿದರೆ ಕ್ರಮ’

ನವೀನ್ ಡಿಸೋಜ ಜನವರಿಯಲ್ಲಿ ೬೩ ಎನ್‌ಡಿಪಿಎಸ್ ಪ್ರಕರಣಗಳು ದಾಖಲು; ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರ ಮೆಚ್ಚುಗೆ ಮಡಿಕೇರಿ: ಮಾದಕ ವಸ್ತುಗಳ ಮಾರಾಟ…

3 hours ago

ಆಶ್ರಮ ಶಾಲೆಯಲ್ಲಿ ಅಡುಗೆ ಸಿಬ್ಬಂದಿಯವರ ಸರಸ ಸಲ್ಲಾಪ

ಮಂಜು ಕೋಟೆ ಜಕ್ಕಹಳ್ಳಿ ಆಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮುಜುಗರ; ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಪೋಷಕರ ಆಗ್ರ ಎಚ್.ಡಿ.ಕೋಟೆ: ಗಿರಿಜನ ಮಕ್ಕಳ…

3 hours ago

ಮಾನಂದವಾಡಿ ರಸ್ತೆಯಲ್ಲಿ ಅಪಘಾತಕ್ಕೆ ಬೀಳಬೇಕಿದೆ ಬ್ರೇಕ್…

ಪ್ರಶಾಂತ್ ಎಸ್. ವೇಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದಿದ್ದರೆ ಅನಾಹುತಕ್ಕೆ ಹಾದಿ ಎನ್.ಎಚ್.ಪಾಳ್ಯ,ಟೋಲ್‌ಗೇಟ್, ಶಿವಪುರ ತಿರುವಿನಲ್ಲಿ ರಿಫ್ಲೆಕ್ಟರ್,ಬ್ಯಾರಿಕೇಡ್ ಅಳವಡಿಕೆ ಅಗತ್ಯ ಮೈಸೂರು:…

3 hours ago