ರಾಜ್ಯ

ರಾಜ್ಯ ಸರ್ಕಾರದಿಂದ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲ್ಲ: ಸತೀಶ್‌ ಜಾರಕಿಹೊಳಿ

ಹುಬ್ಬಳ್ಳಿ: ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಅವುಗಳು ನಿರಂತರವಾಗಿ ಕಾರ್ಯ ನಿರ್ವಹಿಸುತ್ತವೆ ಎಂದು ಸಚಿವ ಸತೀಶ್‌ ಜಾರಕಿಹೊಳಿ ತಿಳಿಸಿದ್ದಾರೆ.

ನಗರದಲ್ಲಿ ಇಂದು(ಫೆಬ್ರವರಿ.22) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಹಣ ನೀಡುವುದು ಒಂದೆಡು ತಿಂಗಳು ವಿಳಂಬವಾಗಿರಬಹುದು ಅಷ್ಟೇ. ಆ ಹಣವನ್ನು ಮುಂದಿನ ದಿನಗಳಲ್ಲಿ ಸೇರಿಸಿ ಒಟ್ಟಿಗೆಯೇ ಗೃಹಲಕ್ಷ್ಮೀಯರ ಖಾತೆಗೆ ಹಣವನು ಜಮಾ ಮಾಡಲಾಗುತ್ತದೆ. ಸರ್ಕಾರದ ಮಟ್ಟದಲ್ಲಿ ಹಣ ನೀಡುವುದು ವಿಳಂಬವಾಗುವುದು ಸಹಜ. ವಿಳಂಬವಾದರೂ ಹಣ ನೀಡುವುದನ್ನು ನಿಲ್ಲಿಸುವುದಿಲ್ಲ ಎಂದು ಹೇಳಿದರು.

ಇದೇ ವೇಳೆ ಮುಡಾ ಪ್ರಕರಣದಲ್ಲಿ ಇ.ಡಿ.ತನಿಖೆಯ ಬಗ್ಗೆ ಮಾತನಾಡಿದ ಅವರು, ಮುಡಾ ಪ್ರಕರಣದಲ್ಲಿ ಕೇಂದ್ರ ಬಿಜೆಪಿ ಸರ್ಕಾರ ಇ.ಡಿ.ಸಂಸ್ಥೆಯನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಹೇಳಲು ಸಾಧ್ಯವಿಲ್ಲ. ಆದರೆ ಅದನ್ನು ಸಾಬೀತು ಪಡಿಸಲು ಸಾಕ್ಷ್ಯಾಧಾರಗಳು ಇಲ್ಲ. ಇನ್ನು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ 14 ನಿವೇಶನಗಳ ಬಗ್ಗೆ ಅಧಿಕ ವಿಚಾರವನ್ನು ಪ್ರಸ್ತಾಪ ಮಾಡುತ್ತಿರುವುದೇ ರಾಜಕೀಯವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಅರ್ಚನ ಎಸ್‌ ಎಸ್

Recent Posts

ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ನಾಯಕರ ನಡುವೆ ಪೈಪೋಟಿ

ಬೆಂಗಳೂರು : ಡಿ.ಕೆ.ಶಿವಕುಮಾರ್‌ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ಪ್ರಬಲ ನಾಯಕರ ನಡುವೆ…

38 mins ago

ಶಾಲೆ ಶುರುವಾಗಿದೆ; ಮನಸು ಯಾಕೋ ಹೂ ಬಿಟ್ಟಿದೆ…

ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…

4 hours ago

ಭಾನುವಾರದ ಹಾಡುಪಾಡು | ಶಾಲೆಯೆಂಬ ಕಟ್ಟಡಗಳಿಗೆ ಜೀವ ಬರುವ ಹೊತ್ತು…..

ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…

4 hours ago

ಭಾನುವಾರದ ಹಾಡುಪಾಡು | ಜೂನ್ ಬಂತು ಎಂದರೆ ಶಿಕ್ಷಕರಿಗೆ ಸುಗ್ಗಿ ಕಾಲ

ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…

4 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌| ಮೇ 31 ಭಾನುವಾರ

4 hours ago

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ನೇಮಕ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…

17 hours ago