ರಾಜ್ಯ

ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರೊಂದಿಗೆ ಯಾವುದೇ ಮುನಿಸಿಲ್ಲ: ಸತೀಶ್‌ ಜಾರಕಿಹೊಳಿ

ಬೆಳಗಾವಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರೊಂದಿಗೆ ಯಾವುದೇ ಮುನಿಸಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವನ್ನು ಅಧಿಕಾರಕ್ಕೆ ತರಲು ಎಲ್ಲರ ಪಾತ್ರ ಇದೆ ಎಂದು ಸಚಿವ ಸತೀಶ್‌ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ.

ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಇಂದು(ಜನವರಿ.25) ಅಂಬೇಡ್ಕರ್‌ ಪ್ರತಿಮೆ ಅನಾವರಣಗೊಳಿಸಿ ಮಾತನಾಡಿದ ಅವರು, ನಾನು ಸಿಎಂ ಆಗುತ್ತೇನೆಂದು ಎಲ್ಲಿಯೂ ಹೇಳಿಲ್ಲ. ಆದರೆ ನಾನು ಸಿಎಂ ಅಭ್ಯರ್ಥಿ ಎಂದು ಹೇಳಿದ್ದೇನೆ ಅಷ್ಟೇ. ರಾಜ್ಯದಲ್ಲಿ ಸಿಎಂ ಅವರನ್ನು ನೇಮಕ ಮಾಡುವುದು, ಬಿಡುವುದು ಹೈಕಮಾಂಡ್‌ ಜವಾಬ್ದಾರಿಯಾಗಿದೆ. ಅಲ್ಲದೇ ಈ ರಾಜ್ಯದಲ್ಲಿ ನಮ್ಮ ಸರ್ಕಾರವನ್ನು ಅಧಿಕಾರಕ್ಕೆ ತರಲು ಎಲ್ಲಾ ಸಚಿವರು ಮತ್ತು ಶಾಸಕರ ಪಾತ್ರವಿದೆ. ಅದರಲ್ಲಿ ನಾನು ಭಾಗೀದಾರ ಎಂದರು.

ಡಿ.ಕೆ.ಶಿವಕುಮಾರ್‌ ಮತ್ತು ನಾನು ಒಗ್ಗಟ್ಟಾಗಿಯೇ ಇದ್ದೇವೆ, ನಮ್ಮ ನಡುವೆ ಯಾವುದೇ ಮುನಿಸಿಲ್ಲ. ನಮ್ಮ ಪಕ್ಷದಿಂದ ಎಲ್ಲರೂ ಸೇರಿಯೇ ಬೆಳಗಾವಿ ಸಮಾವೇಶವನ್ನು ಯಶಸ್ವಿ ಮಾಡಿದ್ದೇವೆ. ಇನ್ನೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರವನ್ನು ದೆಹಲಿಯಲ್ಲಿ ಕೇಳಬೇಕು. ನನಗೆ ರಾಜ್ಯಾಧ್ಯಕ್ಷ ಸ್ಥಾನವನ್ನು ಬದಲಾವಣೆ ಮಾಡುವಷ್ಟು ಶಕ್ತಿಯಿಲ್ಲ. ಹೀಗಾಗಿ ಈ ಚರ್ಚೆ ಅನಾವಶ್ಯಕ ಎಂದು ಹೇಳಿದರು.

ಶ್ರೀರಾಮುಲು ನಮ್ಮ ಪಕ್ಷಕ್ಕೆ ಬಂದರೆ ಸ್ವಾಗತ

ಇದೇ ಸಂದರ್ಭದಲ್ಲಿ ಶ್ರೀರಾಮುಲು ಅವರ ಬಗ್ಗೆ ಮಾತನಾಡಿದ ಅವರು, ನಮ್ಮ ಪಕ್ಷದ ಸಿದ್ಧಾಂತವನ್ನು ಶ್ರೀರಾಮುಲು ಅವರು ಒಪ್ಪಿ ಕಾಂಗ್ರೆಸ್‌ಗೆ ಬಂದರೆ ಸ್ವಾಗತಿಸುತ್ತೇನೆ. ಅವರು ನಮ್ಮ ಪಕ್ಷಕ್ಕೆ ಬರುತ್ತಾರೆ ಎಂಬುದು ವದಂತಿ ಅಷ್ಟೇ. ಅವರು ಪಕ್ಷಕ್ಕೆ ಬರುವ ವಿಚಾರವಾಗಿ ನನಗೆ ಯಾವುದೇ ವಿರೋಧವಿಲ್ಲ. ಒಂದು ವೇಳೆ ನಾನು ವಿರೋಧ ವ್ಯಕ್ತಪಡಿಸಿದರೆ, ನನ್ನ ವಿರುದ್ಧ ಹೈಕಮಾಂಡ್‌ ನೋಟಿಸ್‌ ನೀಡುತ್ತದೆ. ಆಗ ನಾನು ಹೈಕಮಾಂಡ್‌ಗೆ ಉತ್ತರ ನೀಡಬೇಕಾಗುತ್ತದೆ ಎಂದು ತಿಳಿಸಿದರು.

ಇನ್ನೂ ಡಿ.ಕೆ.ಶಿವಕುಮಾರ್‌ ಅವರು ಶ್ರೀರಾಮುಲು ಅವರನ್ನು ಸಂಪರ್ಕ ಮಾಡಿರುವುದು ನನಗೆ ತಿಳಿದಿಲ್ಲ. ಹೀಗಾಗಿ ಶ್ರೀರಾಮುಲು ಅವರನ್ನು ಕಾಂಗ್ರೆಸ್‌ಗೆ ಕರೆ ತರುವ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ರಾಹುಲ್‌ ಗಾಂಧಿ ವಿರುದ್ಧ ಬಿಜೆಪಿ ಹೂಡಿದ್ದ ಮಾನಹಾನಿ ಪ್ರಕರಣ ವಜಾ

ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ಸರ್ಕಾರದ ವಿರುದ್ಧ ಅಪಪ್ರಚಾರದ ಜಾಹೀರಾತು ನೀಡಿದ ಪ್ರಕರಣದಲ್ಲಿ ಲೋಕಸಭೆಯ ಪ್ರತಿಪಕ್ಷದ ನಾಯಕ…

25 mins ago

ಮದ್ದೂರು| ಚಿಕ್ಕದೊಡ್ಡಿಯಲ್ಲಿ ಬೋನಿಗೆ ಬಿದ್ದ ಚಿರತೆ

ಮದ್ದೂರು: ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಕೊಪ್ಪ ಸಮೀಪದ ಗೂಳೂರು-ಚಿಕ್ಕದೊಡ್ಡಿ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ ಬೋನಿಗೆ ಚಿರತೆಯೊಂದು ಸೆರೆಯಾಗಿದೆ.…

1 hour ago

ನಂದಿನಿ ಉತ್ಪನ್ನಗಳ ಕುರಿತು ವದಂತಿಗಳಿಗೆ ಕಿವಿಗೊಡಬೇಡಿ: ಕೆಎಂಎಫ್‌

ಬೆಂಗಳೂರು: ನಂದಿನಿ ಬ್ರಾಂಡ್‌ನ ಕೆಲವು ಉತ್ಪನ್ನಗಳ ಸೇವನೆ ಅಸುರಕ್ಷಿತ, ಆರೋಗ್ಯಕ್ಕೆ ಹಾನಿ ಎಂದೆಲ್ಲಾ ಸೋಷಿಯಲ್‌ ಮೀಡಿಯಾದಲ್ಲಿ ಹೇಳಿಕೆಗಳು ವೈರಲ್‌ ಆಗುತ್ತಿವೆ.…

2 hours ago

ಸಿಎಂ ಸಿದ್ದರಾಮಯ್ಯ ಆಡಳಿತ ನೋಡಿ ಜನ ನಗುತ್ತಿದ್ದಾರೆ: ಎಂಎಲ್‌ಸಿ ಎಚ್.ವಿಶ್ವನಾಥ್‌ ಲೇವಡಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಡಳಿತ ವೈಖರಿ ನೋಡಿ ಜನ ಛೀ... ಥೂ.. ಎನ್ನುತ್ತಿದ್ದಾರೆ. ಇಂಥ ಆಡಳಿತ ಕೊಡಲು ನಿಮಗೆ ನಾಚಿಕೆಯಾಗುವುದಿಲ್ಲವೇ?…

2 hours ago

ಫೆಬ್ರವರಿ.20ರಂದು ರಾಜ್ಯಾದ್ಯಂತ ಸಾರಿಗೆ ನೌಕರರ ಮುಷ್ಕರ

ಬೆಂಗಳೂರು: ವೇತನ ಹಿಂಬಾಕಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್ಆರ್‌ಟಿಸಿ ಸೇರಿದಂತೆ ನಾಲ್ಕು ಸಾರಿಗೆ…

2 hours ago

ಫೆ.28ರಿಂದ ದ್ವಿತೀಯ ಪಿಯುಸಿ, ಮಾರ್ಚ್.‌18ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಮಧು ಬಂಗಾರಪ್ಪ

ಬೆಂಗಳೂರು: ಪ್ರಸಕ್ತ 2026-27 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆ- 1 ಮಾರ್ಚ್ 18 ರಿಂದ ಏಪ್ರಿಲ್ 2 ರವರೆಗೆ ಹಾಗೂ…

2 hours ago