ರಾಜ್ಯ

ಜಾತಿ ಜನಗಣತಿ | ತಿದ್ದುಪಡಿ ಅಷ್ಟೆ ; ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರು : ಜಾತಿ ಜನಗಣತಿ ಮರುಸರ್ವೆ ಆಗುವುದಿಲ್ಲ. ಕೇವಲ ತಿದ್ದುಪಡಿ ಮಾತ್ರ ಮಾಡಲಾಗುತ್ತದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲರೊಂದಿಗೂ ಸಮಾಲೋಚಿಸಿಯೇ ಅಂತಿಮ ನಿರ್ಧಾರ ತೆಗೆದುಕೊಳ್ಳಬೇಕು ಎಂದು ತಾವು ಮುಖ್ಯಮಂತ್ರಿಯವರಿಗೆ ಪತ್ರ ಬರೆದಿದ್ದಾಗಿ ತಿಳಿಸಿದರು.

ಅಭಿಪ್ರಾಯ ಸಂಗ್ರಹಿಸುವ ಸಲುವಾಗಿಯೇ ಎಲ್ಲಾ ಸಚಿವರಿಂದಲೂ ಲಿಖಿತ ಹೇಳಿಕೆ ಪಡೆಯಲಾಗಿದೆ. ಎಲ್ಲರೂ ಬಹುತೇಕ ಸರ್ವಾನುಮತದ ಅಭಿಪ್ರಾಯ ಪಡೆಯುವಂತೆ ಸಲಹೆ ನೀಡಿದ್ದಾರೆ. ಅದರ ಭಾಗವಾಗಿಯೇ ಕಾಂಗ್ರೆಸ್ ಹೈಕಮಾಂಡ್‍ನ ಅಭಿಪ್ರಾಯವನ್ನು ಸಂಗ್ರಹಿಸಲಾಗಿದೆ. ಇನ್ನೂ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಸಚಿವ ಸಂಪುಟ ಸಭೆಗೂ ಮುನ್ನ ಹೇಳಿದರು.

ಯಾರಿಗೂ ತೊಂದರೆಯಾಗದಂತೆ ನಿರ್ಧಾರ ಕೈಗೊಳ್ಳಲು ಸರ್ಕಾರ ಆಸಕ್ತಿ ಹೊಂದಿದೆ. ಇಲ್ಲಿ ಮುಖ್ಯಮಂತ್ರಿಯವರ ಹಿನ್ನಡೆ, ಮುನ್ನಡೆ ಎಂಬ ಅಭಿಪ್ರಾಯವಿಲ್ಲ. ಎಲ್ಲರಿಗೂ ಅವಕಾಶ ಕೊಟ್ಟು ಲೋಪಗಳನ್ನು ಸರಿಪಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಇದಕ್ಕಾಗಿ 90 ದಿನಗಳ ಕಾಲಾವಕಾಶ ನೀಡಲಾಗಿದೆ ಎಂದರು.

ಈಗಾಗಲೇ ನಡೆದಿರುವ ಸಮೀಕ್ಷೆಗೆ ಪರ್ಯಾಯವಾಗಿ ಮರು ಸಮೀಕ್ಷೆ ಮಾಡುವುದಿಲ್ಲ. ಸರ್ಕಾರಕ್ಕೆ ಸಲ್ಲಿಕೆಯಾಗಿರುವ ಸಮೀಕ್ಷಾ ವರದಿಯನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಲಾಗುತ್ತದೆ. ಪ್ರತಿ ಕ್ಷೇತ್ರವಾರು ಜಾತಿವಾರು ಜನಸಂಖ್ಯೆಯನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಅದನ್ನು ವೆಬ್‍ಸೈಟ್‍ನಲ್ಲಿ ಪ್ರಕಟಿಸಲಾಗುತ್ತದೆ. ಅದನ್ನು ಪ್ರತಿಯೊಬ್ಬರು ಪರಿಶೀಲಿಸಿಕೊಳ್ಳಲು ಅವಕಾಶವಾಗುತ್ತದೆ. ಇದನ್ನೇ ಮರು ಸರ್ವೆ ಎನ್ನಬೇಕು ಎಂದು ಹೇಳಿದರು.

ಮತ್ತೊಬ್ಬ ಮನೆಮನೆಗೆ ತೆರಳಿ ಸಮೀಕ್ಷೆ ನಡೆಸಲು ಸಾಧ್ಯವಿಲ್ಲ. ಅಂಕಿ ಅಂಶದಲ್ಲಿ ವ್ಯತ್ಯಾಸಗಳಿದ್ದರೆ ಅದನ್ನು ತಹಸೀಲ್ದಾರರ ಮುಂದೆ ಪ್ರಶ್ನಿಸಬಹುದು. ಬದಲಾವಣೆಗೆ ತಹಸೀಲ್ದಾರ್ ಅವರಿಗೆ ಅಧಿಕಾರ ನೀಡಲಾಗುತ್ತದೆ ಎಂದರು. ಜನರಿಗೆ ಗೊಂದಲವಾಗದಂತೆ ಕ್ರಮ ಕೈಗೊಳ್ಳಲು ಸರ್ಕಾರ ಬದ್ಧವಿದೆ. ಮನೆ ಮನೆಯ ಸಮೀಕ್ಷೆಯನ್ನು ಮತ್ತೊಮ್ಮೆ ನಡೆಸಿದರೂ ಚಿಂತೆಯಿಲ್ಲ. ಆದರೆ ಎಲ್ಲಾ ವ್ಯತ್ಯಾಸಗಳೂ ಸರಿ ಹೋಗಬೇಕು. ಇಲ್ಲವಾದರೆ ನಮ್ಮ ಸರ್ಕಾರದ ತಲೆ ಮೇಲೆ ಈ ಆರೋಪ ಸುತ್ತುತ್ತಲೇ ಇರುತ್ತದೆ. ಅದನ್ನು ತಪ್ಪಿಸಿಕೊಳ್ಳಲು ಮರು ಸಮೀಕ್ಷೆ ಮಾಡಿದರೆ ಮಾಡಬಹುದು ಎಂದರು.

ಕಾಂತರಾಜು ಆಯೋಗದ ವರದಿ ಹಳೆಯದು ಎಂಬ ಅಭಿಪ್ರಾಯಗಳಿವೆ. ಇಷ್ಟು ದಿನ ವರದಿ ಬಾಕಿ ಇಡಬಾರದಿತ್ತು. ಬೇರೆ ಬೇರೆ ಸಮುದಾಯಗಳು ಮತ್ತು ಮಠಾ??ಶರು ವಿರೋಧ ಮಾಡಿದ್ದರಿಂದಾಗಿ ಪರಿಷ್ಕರಣೆ ನಡೆಸಬೇಕಾಗಿದೆ.

ಆಂದೋಲನ ಡೆಸ್ಕ್

Recent Posts

2030ರ ವೇಳೆಗೆ 2 ಮಿಲಿಯನ್‌ ಉದ್ಯೋಗ ಸೃಷ್ಟಿ, ಅಭಿವೃದ್ಧಿ ಪರ ಆಯವ್ಯಯ : ಸಂಸದ ಯದುವೀರ್‌

ಮೈಸೂರು : ಯುವ ಸಮುದಾಯಕ್ಕೆ ಹಾಗೂ ತಾಂತ್ರಿಕ ಕ್ಷೇತ್ರಕ್ಕೆ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಹೆಚ್ಚು ಒತ್ತು ನೀಡುವ ಮೂಲಕ ವಿಕಸಿತ…

22 mins ago

ಜನರನ್ನು ದಿಕ್ಕು ತಪ್ಪಿಸುತ್ತಿರುವ ಎನ್‌ಸಿಬಿ : ಎಂ.ಲಕ್ಷ್ಮಣ್‌ ಆರೋಪ

ಮೈಸೂರು : ನಗರದ ಕೆಮಿಕಲ್ ಫ್ಯಾಕ್ಟರಿಯಲ್ಲಿ ವಶಪಡಿಸಿಕೊಳ್ಳಲಾಗಿದೆ ಎನ್ನಲಾದ ವಸ್ತುಗಳಿಗೆ ಸಂಬಂಸಿದಂತೆ ಎನ್‌ಸಿಬಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರವೇ ಬೇರೆ.…

35 mins ago

ಬಡತನ ಪ್ರಮಾಣ ಗಣನೀಯ ಇಳಿಕೆ: ನಿರ್ಮಲಾ

ಹೊಸದಿಲ್ಲಿ: ಕಳೆದ 12 ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಶಿಸ್ತುಬದ್ಧ ಆರ್ಥಿಕ ನಿರ್ವಹಣೆ ನಡೆಯುತ್ತಿರುವುದರಿಂದ ಭಾರತದ ಜಿಡಿಪಿ ದರ…

47 mins ago

ಕೇಂದ್ರ ಬಜೆಟ್‌ | 17.2 ಲಕ್ಷ ಕೋಟಿ ರೂ. ಸಾಲ

ಹೊಸದಿಲ್ಲಿ : ಕೇಂದ್ರ ಸರ್ಕಾರ 2026-27 ನೇ ಸಾಲಿಗೆ 17.2 ಲಕ್ಷ ಕೋಟಿ ರೂ. ಸಾಲ ಪಡೆಯಲಿದೆ ಎಂದು ಹಣಕಾಸು…

58 mins ago

ಕೇಂದ್ರ ಬಜೆಟ್‌ | ಯಾವುದು ಅಗ್ಗ, ಯಾವುದು ದುಬಾರಿ ?

ಹೊಸದಿಲ್ಲಿ : ಹಲವು ಉತ್ಪನ್ನಗಳ ಮೇಲಿನ ತೆರಿಗೆಯನ್ನು ಇಳಿಕೆ ಮಾಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಆಯವ್ಯಯದಲ್ಲಿ…

1 hour ago

ಕರ್ನಾಟಕ ವಿರೋಧಿ ಬಜೆಟ್‌ : ಎಚ್‌ಸಿಎಂ ವ್ಯಂಗ್ಯ

ಬೆಂಗಳೂರು : ಹಣಕಾಸು ತಜ್ಞೆ ಅಲ್ಲದ ಕೇಂದ್ರದ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸುತ್ತಿರುವ ೯ನೇ ಕಳಪೆ ಬಜೆಟ್ ಇದಾಗಿದೆ.…

1 hour ago