ರಾಜ್ಯ

ಜಾತಿ ಜನಗಣತಿ | ತಿದ್ದುಪಡಿ ಅಷ್ಟೆ ; ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರು : ಜಾತಿ ಜನಗಣತಿ ಮರುಸರ್ವೆ ಆಗುವುದಿಲ್ಲ. ಕೇವಲ ತಿದ್ದುಪಡಿ ಮಾತ್ರ ಮಾಡಲಾಗುತ್ತದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲರೊಂದಿಗೂ ಸಮಾಲೋಚಿಸಿಯೇ ಅಂತಿಮ ನಿರ್ಧಾರ ತೆಗೆದುಕೊಳ್ಳಬೇಕು ಎಂದು ತಾವು ಮುಖ್ಯಮಂತ್ರಿಯವರಿಗೆ ಪತ್ರ ಬರೆದಿದ್ದಾಗಿ ತಿಳಿಸಿದರು.

ಅಭಿಪ್ರಾಯ ಸಂಗ್ರಹಿಸುವ ಸಲುವಾಗಿಯೇ ಎಲ್ಲಾ ಸಚಿವರಿಂದಲೂ ಲಿಖಿತ ಹೇಳಿಕೆ ಪಡೆಯಲಾಗಿದೆ. ಎಲ್ಲರೂ ಬಹುತೇಕ ಸರ್ವಾನುಮತದ ಅಭಿಪ್ರಾಯ ಪಡೆಯುವಂತೆ ಸಲಹೆ ನೀಡಿದ್ದಾರೆ. ಅದರ ಭಾಗವಾಗಿಯೇ ಕಾಂಗ್ರೆಸ್ ಹೈಕಮಾಂಡ್‍ನ ಅಭಿಪ್ರಾಯವನ್ನು ಸಂಗ್ರಹಿಸಲಾಗಿದೆ. ಇನ್ನೂ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಸಚಿವ ಸಂಪುಟ ಸಭೆಗೂ ಮುನ್ನ ಹೇಳಿದರು.

ಯಾರಿಗೂ ತೊಂದರೆಯಾಗದಂತೆ ನಿರ್ಧಾರ ಕೈಗೊಳ್ಳಲು ಸರ್ಕಾರ ಆಸಕ್ತಿ ಹೊಂದಿದೆ. ಇಲ್ಲಿ ಮುಖ್ಯಮಂತ್ರಿಯವರ ಹಿನ್ನಡೆ, ಮುನ್ನಡೆ ಎಂಬ ಅಭಿಪ್ರಾಯವಿಲ್ಲ. ಎಲ್ಲರಿಗೂ ಅವಕಾಶ ಕೊಟ್ಟು ಲೋಪಗಳನ್ನು ಸರಿಪಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಇದಕ್ಕಾಗಿ 90 ದಿನಗಳ ಕಾಲಾವಕಾಶ ನೀಡಲಾಗಿದೆ ಎಂದರು.

ಈಗಾಗಲೇ ನಡೆದಿರುವ ಸಮೀಕ್ಷೆಗೆ ಪರ್ಯಾಯವಾಗಿ ಮರು ಸಮೀಕ್ಷೆ ಮಾಡುವುದಿಲ್ಲ. ಸರ್ಕಾರಕ್ಕೆ ಸಲ್ಲಿಕೆಯಾಗಿರುವ ಸಮೀಕ್ಷಾ ವರದಿಯನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಲಾಗುತ್ತದೆ. ಪ್ರತಿ ಕ್ಷೇತ್ರವಾರು ಜಾತಿವಾರು ಜನಸಂಖ್ಯೆಯನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಅದನ್ನು ವೆಬ್‍ಸೈಟ್‍ನಲ್ಲಿ ಪ್ರಕಟಿಸಲಾಗುತ್ತದೆ. ಅದನ್ನು ಪ್ರತಿಯೊಬ್ಬರು ಪರಿಶೀಲಿಸಿಕೊಳ್ಳಲು ಅವಕಾಶವಾಗುತ್ತದೆ. ಇದನ್ನೇ ಮರು ಸರ್ವೆ ಎನ್ನಬೇಕು ಎಂದು ಹೇಳಿದರು.

ಮತ್ತೊಬ್ಬ ಮನೆಮನೆಗೆ ತೆರಳಿ ಸಮೀಕ್ಷೆ ನಡೆಸಲು ಸಾಧ್ಯವಿಲ್ಲ. ಅಂಕಿ ಅಂಶದಲ್ಲಿ ವ್ಯತ್ಯಾಸಗಳಿದ್ದರೆ ಅದನ್ನು ತಹಸೀಲ್ದಾರರ ಮುಂದೆ ಪ್ರಶ್ನಿಸಬಹುದು. ಬದಲಾವಣೆಗೆ ತಹಸೀಲ್ದಾರ್ ಅವರಿಗೆ ಅಧಿಕಾರ ನೀಡಲಾಗುತ್ತದೆ ಎಂದರು. ಜನರಿಗೆ ಗೊಂದಲವಾಗದಂತೆ ಕ್ರಮ ಕೈಗೊಳ್ಳಲು ಸರ್ಕಾರ ಬದ್ಧವಿದೆ. ಮನೆ ಮನೆಯ ಸಮೀಕ್ಷೆಯನ್ನು ಮತ್ತೊಮ್ಮೆ ನಡೆಸಿದರೂ ಚಿಂತೆಯಿಲ್ಲ. ಆದರೆ ಎಲ್ಲಾ ವ್ಯತ್ಯಾಸಗಳೂ ಸರಿ ಹೋಗಬೇಕು. ಇಲ್ಲವಾದರೆ ನಮ್ಮ ಸರ್ಕಾರದ ತಲೆ ಮೇಲೆ ಈ ಆರೋಪ ಸುತ್ತುತ್ತಲೇ ಇರುತ್ತದೆ. ಅದನ್ನು ತಪ್ಪಿಸಿಕೊಳ್ಳಲು ಮರು ಸಮೀಕ್ಷೆ ಮಾಡಿದರೆ ಮಾಡಬಹುದು ಎಂದರು.

ಕಾಂತರಾಜು ಆಯೋಗದ ವರದಿ ಹಳೆಯದು ಎಂಬ ಅಭಿಪ್ರಾಯಗಳಿವೆ. ಇಷ್ಟು ದಿನ ವರದಿ ಬಾಕಿ ಇಡಬಾರದಿತ್ತು. ಬೇರೆ ಬೇರೆ ಸಮುದಾಯಗಳು ಮತ್ತು ಮಠಾ??ಶರು ವಿರೋಧ ಮಾಡಿದ್ದರಿಂದಾಗಿ ಪರಿಷ್ಕರಣೆ ನಡೆಸಬೇಕಾಗಿದೆ.

ಆಂದೋಲನ ಡೆಸ್ಕ್

Recent Posts

ನಂಜನಗೂಡು | ಲೋಕಾ ಬಲೆಗೆ ಬಿದ್ದ ಸರ್ವೆಯರ್‌

ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…

4 hours ago

ಅನೈತಿಕ ಸಂಬಂಧದ ಶಂಕೆ : ರಾಡ್‌ನಿಂದ ಹೊಡೆದು ಪತ್ನಿ ಕೊಂದ ಪತಿ

ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…

5 hours ago

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

12 hours ago

ಕೊಡಗಿನಲ್ಲಿ ಸಾಧಾರಣ ಮಳೆ: ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…

12 hours ago

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

17 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

17 hours ago