ರಾಜ್ಯ

ಜಾತಿ ಜನಗಣತಿ | ತಿದ್ದುಪಡಿ ಅಷ್ಟೆ ; ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರು : ಜಾತಿ ಜನಗಣತಿ ಮರುಸರ್ವೆ ಆಗುವುದಿಲ್ಲ. ಕೇವಲ ತಿದ್ದುಪಡಿ ಮಾತ್ರ ಮಾಡಲಾಗುತ್ತದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲರೊಂದಿಗೂ ಸಮಾಲೋಚಿಸಿಯೇ ಅಂತಿಮ ನಿರ್ಧಾರ ತೆಗೆದುಕೊಳ್ಳಬೇಕು ಎಂದು ತಾವು ಮುಖ್ಯಮಂತ್ರಿಯವರಿಗೆ ಪತ್ರ ಬರೆದಿದ್ದಾಗಿ ತಿಳಿಸಿದರು.

ಅಭಿಪ್ರಾಯ ಸಂಗ್ರಹಿಸುವ ಸಲುವಾಗಿಯೇ ಎಲ್ಲಾ ಸಚಿವರಿಂದಲೂ ಲಿಖಿತ ಹೇಳಿಕೆ ಪಡೆಯಲಾಗಿದೆ. ಎಲ್ಲರೂ ಬಹುತೇಕ ಸರ್ವಾನುಮತದ ಅಭಿಪ್ರಾಯ ಪಡೆಯುವಂತೆ ಸಲಹೆ ನೀಡಿದ್ದಾರೆ. ಅದರ ಭಾಗವಾಗಿಯೇ ಕಾಂಗ್ರೆಸ್ ಹೈಕಮಾಂಡ್‍ನ ಅಭಿಪ್ರಾಯವನ್ನು ಸಂಗ್ರಹಿಸಲಾಗಿದೆ. ಇನ್ನೂ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಸಚಿವ ಸಂಪುಟ ಸಭೆಗೂ ಮುನ್ನ ಹೇಳಿದರು.

ಯಾರಿಗೂ ತೊಂದರೆಯಾಗದಂತೆ ನಿರ್ಧಾರ ಕೈಗೊಳ್ಳಲು ಸರ್ಕಾರ ಆಸಕ್ತಿ ಹೊಂದಿದೆ. ಇಲ್ಲಿ ಮುಖ್ಯಮಂತ್ರಿಯವರ ಹಿನ್ನಡೆ, ಮುನ್ನಡೆ ಎಂಬ ಅಭಿಪ್ರಾಯವಿಲ್ಲ. ಎಲ್ಲರಿಗೂ ಅವಕಾಶ ಕೊಟ್ಟು ಲೋಪಗಳನ್ನು ಸರಿಪಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಇದಕ್ಕಾಗಿ 90 ದಿನಗಳ ಕಾಲಾವಕಾಶ ನೀಡಲಾಗಿದೆ ಎಂದರು.

ಈಗಾಗಲೇ ನಡೆದಿರುವ ಸಮೀಕ್ಷೆಗೆ ಪರ್ಯಾಯವಾಗಿ ಮರು ಸಮೀಕ್ಷೆ ಮಾಡುವುದಿಲ್ಲ. ಸರ್ಕಾರಕ್ಕೆ ಸಲ್ಲಿಕೆಯಾಗಿರುವ ಸಮೀಕ್ಷಾ ವರದಿಯನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಲಾಗುತ್ತದೆ. ಪ್ರತಿ ಕ್ಷೇತ್ರವಾರು ಜಾತಿವಾರು ಜನಸಂಖ್ಯೆಯನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಅದನ್ನು ವೆಬ್‍ಸೈಟ್‍ನಲ್ಲಿ ಪ್ರಕಟಿಸಲಾಗುತ್ತದೆ. ಅದನ್ನು ಪ್ರತಿಯೊಬ್ಬರು ಪರಿಶೀಲಿಸಿಕೊಳ್ಳಲು ಅವಕಾಶವಾಗುತ್ತದೆ. ಇದನ್ನೇ ಮರು ಸರ್ವೆ ಎನ್ನಬೇಕು ಎಂದು ಹೇಳಿದರು.

ಮತ್ತೊಬ್ಬ ಮನೆಮನೆಗೆ ತೆರಳಿ ಸಮೀಕ್ಷೆ ನಡೆಸಲು ಸಾಧ್ಯವಿಲ್ಲ. ಅಂಕಿ ಅಂಶದಲ್ಲಿ ವ್ಯತ್ಯಾಸಗಳಿದ್ದರೆ ಅದನ್ನು ತಹಸೀಲ್ದಾರರ ಮುಂದೆ ಪ್ರಶ್ನಿಸಬಹುದು. ಬದಲಾವಣೆಗೆ ತಹಸೀಲ್ದಾರ್ ಅವರಿಗೆ ಅಧಿಕಾರ ನೀಡಲಾಗುತ್ತದೆ ಎಂದರು. ಜನರಿಗೆ ಗೊಂದಲವಾಗದಂತೆ ಕ್ರಮ ಕೈಗೊಳ್ಳಲು ಸರ್ಕಾರ ಬದ್ಧವಿದೆ. ಮನೆ ಮನೆಯ ಸಮೀಕ್ಷೆಯನ್ನು ಮತ್ತೊಮ್ಮೆ ನಡೆಸಿದರೂ ಚಿಂತೆಯಿಲ್ಲ. ಆದರೆ ಎಲ್ಲಾ ವ್ಯತ್ಯಾಸಗಳೂ ಸರಿ ಹೋಗಬೇಕು. ಇಲ್ಲವಾದರೆ ನಮ್ಮ ಸರ್ಕಾರದ ತಲೆ ಮೇಲೆ ಈ ಆರೋಪ ಸುತ್ತುತ್ತಲೇ ಇರುತ್ತದೆ. ಅದನ್ನು ತಪ್ಪಿಸಿಕೊಳ್ಳಲು ಮರು ಸಮೀಕ್ಷೆ ಮಾಡಿದರೆ ಮಾಡಬಹುದು ಎಂದರು.

ಕಾಂತರಾಜು ಆಯೋಗದ ವರದಿ ಹಳೆಯದು ಎಂಬ ಅಭಿಪ್ರಾಯಗಳಿವೆ. ಇಷ್ಟು ದಿನ ವರದಿ ಬಾಕಿ ಇಡಬಾರದಿತ್ತು. ಬೇರೆ ಬೇರೆ ಸಮುದಾಯಗಳು ಮತ್ತು ಮಠಾ??ಶರು ವಿರೋಧ ಮಾಡಿದ್ದರಿಂದಾಗಿ ಪರಿಷ್ಕರಣೆ ನಡೆಸಬೇಕಾಗಿದೆ.

ಆಂದೋಲನ ಡೆಸ್ಕ್

Recent Posts

ವನ್ಯಜೀವಿಗಳಿಂದ ನಿರ್ದಿಷ್ಟ ಅಂತರ ಕಾಯ್ದುಕೊಳ್ಳಲು ಆದೇಶ

ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…

1 hour ago

ಸಾಕಾನೆಗಳ ಕಾಳಗದ ನಡುವೆ ಸಿಲುಕಿ ಪ್ರವಾಸಿ ಮಹಿಳೆ ಸಾವು

ಕೊಡಗು: ಎಲಿಫೆಂಟ್‌ ಬಾತಿಂಗ್‌ ವೇಳೆ ಆನೆಯ ಅಡಿಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದಿದೆ. ಚೆನ್ನೈ…

3 hours ago

ಆಫ್ರಿಕಾದಲ್ಲಿ ಎಬೋಲಾಕ್ಕೆ 88 ಮಂದಿ ಬಲಿ: ತುರ್ತು ಪರಿಸ್ಥಿತಿ ಘೋಷಿಸಿದ WHO

ಕಾಂಗೋ: ಆಫ್ರಿಕಾದಲ್ಲಿ ಎಬೋಲಾಕ್ಕೆ 88 ಮಂದಿ ಬಲಿಯಾಗಿದ್ದು, WHO ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ. ಆಫ್ರಿಕಾದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ…

3 hours ago

ತಾಯಿಯನ್ನೇ ಕೊಲೆಗೈದ ಪಾಪಿ ಮಗ

ಮೈಸೂರು: ಪರಪುರುಷನ ಸಂಗ ಮಾಡಿದ್ದ ತಾಯಿಯನ್ನು ಮಗ ಕೊಲೆ ಮಾಡಿರುವ ಘಟನೆ ಮೈಸೂರು ತಾಲ್ಲೂಕಿನ ಮಾದಹಳ್ಳಿ ಗ್ರಾಮದಲ್ಲಿ ನಡೆದಿದೆ. ಸುಧಾ…

5 hours ago

ಹನೂರು| ರಸ್ತೆ ದುರಸ್ತಿಗೆ ಮಾರ್ಟಳ್ಳಿ ಗ್ರಾಮಸ್ಥರ ಆಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲಿಮೇಡುವಿನಲ್ಲಿರುವ ಸೇಂಟ್ ಮೇರಿಸ್…

5 hours ago

ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ಸಿದ್ದಾಪುರ: ಸಿದ್ದಾಪುರ ವ್ಯಾಪ್ತಿಯ ಕೂಡುಗದ್ದೆ ಗ್ರಾಮದಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಮೃತನನ್ನು ಕೂಡುಗದ್ದೆ ನಿವಾಸಿ…

5 hours ago