ರಾಜ್ಯ

ಮುಡಾ ಪ್ರಕರಣದ ದಿಕ್ಕು ತಪ್ಪಿಸಲು ರಾಜ್ಯ ಸರ್ಕಾರದಿಂದ ಸಾವರ್ಕರ್‌ ಟಾರ್ಗೆಟ್‌: ಬಿ.ವೈ.ವಿಜಯೇಂದ್ರ

ಬೆಂಗಳೂರು: ಸಾರ್ವಜನಿಕರಿಂದ ಮುಡಾ ಪ್ರಕರಣವನ್ನು ದಿಕ್ಕು ತಪ್ಪಿಸಲು ಹಿಂದುತ್ವವಾದಿ ವಿನಾಯಕ ದಾಮೋದರ್‌ ಸಾವರ್ಕರ್‌ ಅವರನ್ನು ರಾಜ್ಯ ಸರ್ಕಾರ ಗುರಿಯಾಗಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತೀರುಗೇಟು ನೀಡಿದ್ದಾರೆ.

ಆರೋಗ್ಯ ಸಚಿವ ದಿನೇಶ್‌ ಗುಂಡುರಾವ್‌ ಅವರು ಅಕ್ಟೋಬರ್‌ 2 ರಂದು ವಿನಾಯಕ ದಾಮೋದರ್‌ ಸಾವರ್ಕರ್‌ರವರು ಗೋಹತ್ಯೆಯನ್ನು ವಿರೋಧಿಸಲಿಲ್ಲ. ಬದಲಾಗಿ ಅವರು ಮಾಂಸವನ್ನು ಸೇವಿಸುತ್ತಿದ್ದರು ಎಂದು ಹೇಳಿದ್ದರು.

ಈ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಮ್ಮ ಎಕ್ಸ್‌ ಖಾತೆಯಲ್ಲಿ ಟ್ವೀಟ್‌ ಮಾಡಿ, ಇದು ನಮ್ಮ ರಾಷ್ಟ್ರನಾಯಕರಿಗೆ ಮಾಡಿದ ದ್ರೋಹ! ಕೇವಲ ಅಧಿಕಾರದ ದುರಾಸೆಯಿಂದ ಇಂದಿನ ಕಾಂಗ್ರೆಸ್‌ ಸರ್ಕಾರ ಭಾರತದ ಸ್ವಾತಂತ್ರ್ಯಕ್ಕಾಗಿ ತಮ್ಮ ಜೀವನ ಮುಡಿಪಾಗಿಟ್ಟ ದೇಶಭಕ್ತ ವೀರ್‌ ಸಾವರ್ಕರ್‌ ಅವರನ್ನು ಗುರಿಯಾಗಿಸಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ವಾಗ್ದಾಳಿ ಮಾಡಿದ್ದಾರೆ.

ರಾಜ್ಯ ಸರ್ಕಾರ ಕೇವಲ ಮುಡಾ ಪ್ರಕರಣದಿಂದ ಸಾರ್ವಜನಿಕರ ಗಮನವನ್ನು ಬೇರೆಡೆಗೆ ಸೆಳೆಯಲು ಸಾವರ್ಕರ್‌ ಅವರನ್ನು ಟಾರ್ಗೆಟ್‌ ಮಾಡಲಾಗಿದೆ. ಇದೊಂದು ಹೇಳಿಕೆ ಜನರ ದಾರಿ ತಪ್ಪಿಸುವ ತಂತ್ರವಾಗಿದೆ. ಇದನ್ನು ನಾನು ಒಪ್ಪಿಕೊಳ್ಳುವುದಿಲ್ಲ. ಸರ್ಕಾರದ ಭ್ರಷ್ಟಾನಾಯಕರನ್ನು ಹೊಣೆಗಾರರನ್ನಾಗಿ ಮಾಡುವವರೆಗೂ ಬಿಜೆಪಿ ಹೋರಾಟ ಮುಂದುವರೆಸಲಿದೆ ಎಂದು ತಿಳಿಸಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಚಾಮರಾಜನಗರ: ನಂಜೆದೇವಪುರ ಸುತ್ತಮುತ್ತ ಹುಲಿಗಳಿಗಾಗಿ ಶೋಧ ಕಾರ್ಯ

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರ ತಾಲ್ಲೂಕಿನ ನಂಜೆದೇವಪುರ ಗ್ರಾಮದ ಸುತ್ತಮುತ್ತ ಹುಲಿಗಳನ್ನು ಸೆರೆ ಹಿಡಿಯಲು ಕಾರ್ಯಾಚರಣೆ ಮುಂದುವರಿಸಲಾಗಿದೆ. ಚಾಮರಾಜನಗರ ತಾಲ್ಲೂಕಿನ…

4 mins ago

ಕ್ರಿಕೆಟ್‌ ಪ್ರೇಮಿಗಳಿಗೆ ಶಾಕ್:‌ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಾಳಿನ ಪಂದ್ಯಕ್ಕೆ ಅನುಮತಿ ನಿರಾಕರಣೆ

ಬೆಂಗಳೂರು: ಕ್ರಿಕೆಟ್‌ ಪ್ರೇಮಿಗಳಿಗೆ ಶಾಕ್‌ ಎಂಬಂತೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಾಳಿನ ಪಂದ್ಯಕ್ಕೆ ಅವಕಾಶ ಇಲ್ಲ ಎಂದು ತಿಳಿದುಬಂದಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ…

14 mins ago

ಅಪಘಾತದಲ್ಲಿ ಗಾಯಗೊಂಡವನಿಂದ 80 ಸಾವಿರ ದೋಚಿದ್ದ ಇಬ್ಬರು ಅರೆಸ್ಟ್‌

ಮೈಸೂರು: ಅಪಘಾತದಲ್ಲಿ ಗಾಯಗೊಂಡು ಬಿದ್ದಿದ್ದ ವ್ಯಕ್ತಿಯಿಂದ 80 ಸಾವಿರ ರೂ ದೋಚಿದ್ದ ಇಬ್ಬರನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ. ರಮೇಶ್‌ ಹಾಗೂ…

30 mins ago

ಕಾವೇರಿ ನದಿಯಲ್ಲಿ ಈಜಲು ಹೋಗಿ ಯುವಕ ಸಾವು

ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ಹೋಗಿ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಸಾವನ್ನಪ್ಪಿರುವ ಘಟನೆ ಮಳವಳ್ಳಿ ತಾಲ್ಲೂಕಿನ ಮುತ್ತತ್ತಿಯಲ್ಲಿ ನಡೆದಿದೆ.…

57 mins ago

ಸ್ಯಾಂಡಲ್‌ವುಡ್‌ನಲ್ಲಿ ಸ್ಟಾರ್‌ ವಾರ್‌: ಕಿಚ್ಚ ಸುದೀಪ್‌ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಸ್ಟಾರ್‌ ವಾರ್‌ ಬಗ್ಗೆ ನಟ ಕಿಚ್ಚ ಸುದೀಪ್‌ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಯುದ್ಧಕ್ಕೆ ಸಿದ್ಧ ಮಾತಿಗೆ…

1 hour ago

ಓದುಗರ ಪತ್ರ: ಮರಗಳ ಕೊಂಬೆಗಳನ್ನು ಕತ್ತರಿಸಿ

ಮೈಸೂರಿನ ಸುಭಾಷ್ ನಗರದ ೪ನೇ ಮುಖ್ಯರಸ್ತೆಯಲ್ಲಿರುವ ಮರಗಳ ಕೊಂಬೆಗಳು ವಿದ್ಯುತ್ ತಂತಿಗಳಿಗೆ ತಗುಲುತ್ತಿದ್ದು, ಗಾಳಿ ಅಥವಾ ಮಳೆಯ ಸಮಯದಲ್ಲಿ ಶಾರ್ಟ್…

2 hours ago