SC community officers denied promotion: Warning of violent protest
ಬೆಂಗಳೂರು : ಪರಿಶಿಷ್ಟ ಸಮುದಾಯ ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕಂಡು ಹಿಡಿಯುವ ಸಲುವಾಗಿ ವಿಧಾನಪರಿಷತ್ ಮಾಜಿ ಸದಸ್ಯ ಡಿ.ಎಸ್. ವೀರಯ್ಯ ನೇತೃತ್ವದಲ್ಲಿ ಶಾಸಕರ ಭವನದ ಸಭಾಂಗಣದಲ್ಲಿ ವಿವಿಧ ದಲಿತ ಪರ ಸಂಘಟನೆಗಳು ಮತ್ತು ಎಸ್.ಸಿ. ಎಸ್.ಟಿ ನೌಕರರ ಸಂಘಟನೆಗಳ ಮುಖಂಡರ ಸಭೆ ನಡೆಯಿತು.
ಪಿಟಿಸಿಎಲ್ ಕಾಯ್ದೆ ಸಮರ್ಪಕ ಅನುಷ್ಠಾನ, ಪರಿಶಿಷ್ಟರಿಗೆ ಬಡ್ತಿಯಲ್ಲಿ ಮೀಸಲಾತಿ ಕಲ್ಪಿಸುವಲ್ಲಿ ಆಗುತ್ತಿರುವ ತಾರತಮ್ಯ, ಒಳಮೀಸಲಾತಿ ಸೇರಿದಂತೆ ಹಲವು ಜಲ್ವಂತ ಸಮಸ್ಯೆಗಳ ಬಗ್ಗೆ ಗಹನವಾಗಿ ಚರ್ಚೆ ನಡೆಸಿದರು.
ಡಿ.ಎಸ್. ವೀರಯ್ಯ ಮಾತನಾಡಿ, ರಾಜ್ಯ ಸರ್ಕಾರದಲ್ಲಿ ಪರಿಶಿಷ್ಟ ಸಮುದಾಯದ ಅಧಿಕಾರಿಗಳಿಗೆ ಬಡ್ತಿ ಅವಕಾಶಗಳನ್ನು ನಿರಾಕರಿಸಲಾಗುತ್ತಿದೆ. ದಲಿತರ ಹಕ್ಕುಗಳನ್ನು ದಮನ ಮಾಡಲಾಗುತ್ತಿದೆ. ಇದು ಗಂಭೀರ ಸಮಸ್ಯೆಯಾಗಿದ್ದು, ಕೂಡಲೇ ಸಮಸ್ಯೆಗೆ ಪರಿಹಾರ ಕಂಡು ಹಿಡಿಯದಿದ್ದರೆ ಉಗ್ರ ಹೋರಾಟ ಮಾಡುತ್ತೇವೆ ಎಂದು ಹೇಳಿದರು.
ಪರಿಶಿಷ್ಟ ಸಮುದಾಯದ ಅಧಿಕಾರಿಗಳಿಗೆ ನ್ಯಾಯ ಸಿಗುತ್ತಿಲ್ಲ ಎಂದು ಏಐಸಿಸಿ ಅಧ್ಯಕ್ಷ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ಇದು ಸಮಸ್ಯೆಯ ಗಂಭೀರತೆಯನ್ನು ಸೂಚಿಸುತ್ತದೆ. ಇದನ್ನು ವಿಳಂಬ ಮಾಡದೆ ಪರಿಹರಿಸಬೇಕು ಎಂದು ಆಗ್ರಹಿಸಿದರು.
ರಾಜ್ಯ ಸರ್ಕಾರಿ ಎಸ್ಸಿ/ಎಸ್ಟಿ ನೌಕರರ ಸಂಘದ ಅಧ್ಯಕ್ಷ ಡಿ. ಚಂದ್ರಶೇಖರಯ್ಯ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಬಡ್ತಿ ಅನ್ಯಾಯ ಸರಿಪಡಿಸುವಂತೆ ಒತ್ತಾಯಿಸಿದ್ದಾರೆ. ಆದರೆ ಮುಖ್ಯಮಂತ್ರಿ ಅವರು ಈ ಕುರಿತು ಗಮನಹರಿಸಿಲ್ಲ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಲ್ಲಿ 80 ಎಸ್ ಸಿ/ಎಸ್ ಟಿ ನೌಕರರಿಗೆ ಪ್ರಾಂಶುಪಾಲರ ಹುದ್ದೆಗೆ ಬಡ್ತಿ ನಿರಾಕರಿಸಲಾಗಿದೆ. ಈ ಸಮಸ್ಯೆಗೆ ಪರಿಹಾರ ದೊರಕಿಸಿಕೊಡಬೇಕು ಎಂದರು.
ಮಾಜಿ ಸಚಿವೆ, ಸಾಹಿತಿ ಬಿ.ಟಿ. ಲಲಿತಾ ನಾಯಕ್ ಮಾತನಾಡಿ, ಮನುಷ್ಯ ಉನ್ನತ ಮಟ್ಟಕ್ಕೆ ಹೋಗುತ್ತಿರುವ ಸಂದರ್ಭದಲ್ಲಿ ಸಮಾನತೆ ಬಗ್ಗೆ ಚಿಂತನೆ ನಡೆಯಬೇಕು. ಸಮ ಸಮಾಜ ನಿರ್ಮಾಣಕ್ಕೆ ಎಲ್ಲರೂ ಗಮನಹರಿಸಬೇಕು. ಪ್ರತಿಯೊಬ್ಬ ವ್ಯಕ್ತಿ ಉನ್ನತಮಟ್ಟಕ್ಕೆ ಏರಲು ಅಂಬೇಡ್ಕರ್ ಅವರ ಚಿಂತನೆಗಳನ್ನು ಓದಿ ಮನನ ಮಾಡಿಕೊಳ್ಳಬೇಕು. ದೇವಾಸ್ಥಾನಗಳ ಜಾಗದಲ್ಲಿ ಗ್ರಂಥಾಲಯಗಳಿರಬೇಕು. ಬಾಬಾ ಸಾಹೇಬರ ಬೆಳಕನ್ನು ಪ್ರತಿಯೊಬ್ಬರೂ ಕಾಣಬೇಕು ಎಂದರು.
ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ…
ಪಿರಿಯಾಪಟ್ಟಣ: ಮೈಸೂರು ಜಿಲ್ಲೆಯ ಹಲವೆಡೆ ವರ್ಷದ ಮೊದಲ ಮಳೆಯಾಗುತ್ತಿದ್ದು, ಪಿರಿಯಾಪಟ್ಟಣದಲ್ಲಿ ಸಿಡಿಲು ಬಡಿದು ತೆಂಗಿನ ಮರ ಧಗಧಗನೇ ಹೊತ್ತಿ ಉರಿದಿದೆ.…
ಸರಗೂರು: ಕ್ಷೇತ್ರದ ಆದಿ ದೇವತೆ ಇಟ್ನಾ ಗ್ರಾಮದ ಶ್ರೀ ಚಿಕ್ಕದೇವಮ್ಮ ಬೆಟ್ಟದ ಯುಗಾದಿ ಹಬ್ಬದ ಜಾತ್ರಾ ಮಹೋತ್ಸವ ಮಾರ್ಚ್.19ರ ಯುಗಾದಿಯಂದು…
ಬೆಂಗಳೂರು: ವಿಧಾನಸಭೆಯಲ್ಲಿ ಅಪರೂಪದ ಅಚ್ಚರಿಯ ಪ್ರಸಂಗ ನಡೆದಿದ್ದು, ಸಚಿವರು ಹಾಗೂ ಅಧಿಕಾರಿಗಳ ವಿರುದ್ಧ ಗರಂ ಆದ ಸ್ಪೀಕರ್ ಯು.ಟಿ.ಖಾದರ್ ಅವರು…
ಮೈಸೂರು: ನಿತ್ಯ ಸಾವಿರಾರು ಜನರು ಓಡಾಡುವ ಫುಟ್ಪಾತ್ನಲ್ಲಿ ಈಗ ಅವೈಜ್ಞಾನಿಕ ಟಾಂಗಾ ಸ್ಟ್ಯಾಂಡ್ ನಿರ್ಮಾಣ ಮಾಡಲು ಮುಂದಾಗುತ್ತಿದ್ದು, ಪಾಲಿಕೆ ನಡೆಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಒಳಮೀಸಲಾತಿ ವಿಚಾರದಲ್ಲಿ ನಾಗಮೋಹನ್ ದಾಸ್ ನೀಡಿರುವ ವರದಿಯು ಅವೈಜ್ಞಾನಿಕವಾಗಿದ್ದು ಹಂಚಿಕೆ…