ರಾಜ್ಯ

ಎಸ್‌ಸಿ ಸಮುದಾಯದ ಅಧಿಕಾರಿಗಳಿಗೆ ಬಡ್ತಿ ನಿರಾಕರಣೆ : ಉಗ್ರ ಹೋರಾಟದ ಎಚ್ಚರಿಕೆ

ಬೆಂಗಳೂರು : ಪರಿಶಿಷ್ಟ ಸಮುದಾಯ ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕಂಡು ಹಿಡಿಯುವ ಸಲುವಾಗಿ ವಿಧಾನಪರಿಷತ್ ಮಾಜಿ ಸದಸ್ಯ ಡಿ.ಎಸ್. ವೀರಯ್ಯ ನೇತೃತ್ವದಲ್ಲಿ ಶಾಸಕರ ಭವನದ ಸಭಾಂಗಣದಲ್ಲಿ ವಿವಿಧ ದಲಿತ ಪರ ಸಂಘಟನೆಗಳು ಮತ್ತು ಎಸ್.ಸಿ. ಎಸ್.ಟಿ ನೌಕರರ ಸಂಘಟನೆಗಳ ಮುಖಂಡರ ಸಭೆ ನಡೆಯಿತು.

ಪಿಟಿಸಿಎಲ್ ಕಾಯ್ದೆ ಸಮರ್ಪಕ ಅನುಷ್ಠಾನ, ಪರಿಶಿಷ್ಟರಿಗೆ ಬಡ್ತಿಯಲ್ಲಿ ಮೀಸಲಾತಿ ಕಲ್ಪಿಸುವಲ್ಲಿ ಆಗುತ್ತಿರುವ ತಾರತಮ್ಯ, ಒಳಮೀಸಲಾತಿ ಸೇರಿದಂತೆ ಹಲವು ಜಲ್ವಂತ ಸಮಸ್ಯೆಗಳ ಬಗ್ಗೆ ಗಹನವಾಗಿ ಚರ್ಚೆ ನಡೆಸಿದರು.

ಡಿ.ಎಸ್. ವೀರಯ್ಯ ಮಾತನಾಡಿ, ರಾಜ್ಯ ಸರ್ಕಾರದಲ್ಲಿ ಪರಿಶಿಷ್ಟ ಸಮುದಾಯದ ಅಧಿಕಾರಿಗಳಿಗೆ ಬಡ್ತಿ ಅವಕಾಶಗಳನ್ನು ನಿರಾಕರಿಸಲಾಗುತ್ತಿದೆ. ದಲಿತರ ಹಕ್ಕುಗಳನ್ನು ದಮನ ಮಾಡಲಾಗುತ್ತಿದೆ. ಇದು ಗಂಭೀರ ಸಮಸ್ಯೆಯಾಗಿದ್ದು, ಕೂಡಲೇ ಸಮಸ್ಯೆಗೆ ಪರಿಹಾರ ಕಂಡು ಹಿಡಿಯದಿದ್ದರೆ ಉಗ್ರ ಹೋರಾಟ ಮಾಡುತ್ತೇವೆ ಎಂದು ಹೇಳಿದರು.

ಪರಿಶಿಷ್ಟ ಸಮುದಾಯದ ಅಧಿಕಾರಿಗಳಿಗೆ ನ್ಯಾಯ ಸಿಗುತ್ತಿಲ್ಲ ಎಂದು ಏಐಸಿಸಿ ಅಧ್ಯಕ್ಷ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ಇದು ಸಮಸ್ಯೆಯ ಗಂಭೀರತೆಯನ್ನು ಸೂಚಿಸುತ್ತದೆ. ಇದನ್ನು ವಿಳಂಬ ಮಾಡದೆ ಪರಿಹರಿಸಬೇಕು ಎಂದು ಆಗ್ರಹಿಸಿದರು.

ರಾಜ್ಯ ಸರ್ಕಾರಿ ಎಸ್ಸಿ/ಎಸ್ಟಿ ನೌಕರರ ಸಂಘದ ಅಧ್ಯಕ್ಷ ಡಿ. ಚಂದ್ರಶೇಖರಯ್ಯ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಬಡ್ತಿ ಅನ್ಯಾಯ ಸರಿಪಡಿಸುವಂತೆ ಒತ್ತಾಯಿಸಿದ್ದಾರೆ. ಆದರೆ ಮುಖ್ಯಮಂತ್ರಿ ಅವರು ಈ ಕುರಿತು ಗಮನಹರಿಸಿಲ್ಲ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಲ್ಲಿ 80 ಎಸ್ ಸಿ/ಎಸ್ ಟಿ ನೌಕರರಿಗೆ ಪ್ರಾಂಶುಪಾಲರ ಹುದ್ದೆಗೆ ಬಡ್ತಿ ನಿರಾಕರಿಸಲಾಗಿದೆ. ಈ ಸಮಸ್ಯೆಗೆ ಪರಿಹಾರ ದೊರಕಿಸಿಕೊಡಬೇಕು ಎಂದರು.

ಮಾಜಿ ಸಚಿವೆ, ಸಾಹಿತಿ ಬಿ.ಟಿ. ಲಲಿತಾ ನಾಯಕ್‌ ಮಾತನಾಡಿ, ಮನುಷ್ಯ ಉನ್ನತ ಮಟ್ಟಕ್ಕೆ ಹೋಗುತ್ತಿರುವ ಸಂದರ್ಭದಲ್ಲಿ ಸಮಾನತೆ ಬಗ್ಗೆ ಚಿಂತನೆ ನಡೆಯಬೇಕು. ಸಮ ಸಮಾಜ ನಿರ್ಮಾಣಕ್ಕೆ ಎಲ್ಲರೂ ಗಮನಹರಿಸಬೇಕು. ಪ್ರತಿಯೊಬ್ಬ ವ್ಯಕ್ತಿ ಉನ್ನತಮಟ್ಟಕ್ಕೆ ಏರಲು ಅಂಬೇಡ್ಕರ್‌ ಅವರ ಚಿಂತನೆಗಳನ್ನು ಓದಿ ಮನನ ಮಾಡಿಕೊಳ್ಳಬೇಕು. ದೇವಾಸ್ಥಾನಗಳ ಜಾಗದಲ್ಲಿ ಗ್ರಂಥಾಲಯಗಳಿರಬೇಕು. ಬಾಬಾ ಸಾಹೇಬರ ಬೆಳಕನ್ನು ಪ್ರತಿಯೊಬ್ಬರೂ ಕಾಣಬೇಕು ಎಂದರು.

ಆಂದೋಲನ ಡೆಸ್ಕ್

Recent Posts

‘ಎಬೋಲಾ ಆತಂಕ ಬೇಡ’ ; ಅಗತ್ಯ ಮುನ್ನೆಚ್ಚರಿಕೆ ವಹಿಸಿದ್ದೇವೆ : ಆರೋಗ್ಯ ಸಚಿವ

ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…

3 hours ago

ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…

5 hours ago

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

6 hours ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

7 hours ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

9 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

9 hours ago